ಮೈಸೂರು ಅರಮನೆಗೆ ಆಗಮಿಸಿದ ಗಜಪಡೆಯ 2 ನೇ ತಂಡ
ಮೈಸೂರು, ಸೆಪ್ಟೆಂಬರ್ 1 : ವಿಶ್ವವಿಖ್ಯಾತ ದಸರಾ ಮಹೋತ್ಸವ 2017ರ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಗುರುವಾರ ನಗರಕ್ಕೆ ಆಗಮಿಸಿದ ಗಜಪಡೆಯ ಎರಡನೇ ತಂಡದ 7 ಆನೆಗಳನ್ನು ಅಂಬಾವಿಲಸ ಅರಮನೆ ಪ್ರವೇಶದ್ವಾರದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ಅರಮನೆಯ ಪೂರ್ವ ದಿಕ್ಕಿನಡೆಗೆ ಇರುವ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು 7 ಆನೆಗಳ ತಂಡವನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡು ಕೊಂಡಲು ಅವರ ನೇತೃತ್ವದಲ್ಲಿ ಎರಡನೇ ತಂಡದ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ನಂತರ ಅರಮನೆ ಮಂಡಳಿ ವತಿಯಿಂದಲೂ ಸ್ವಾಗತಿಸಲಾಯಿತು.

ದಸರಾ ಮಹೊತ್ಸವಕ್ಕೆ ಆಗಮಿಸಿದ ಎರಡನೇ ತಂಡದ ಗಜಪಡೆಯಲ್ಲಿ ಗೋಪಾಲಸ್ವಾಮಿ (35), ಕೃಷ್ಣ (56), ದ್ರೋಣ (35), ವಿಕ್ರಮ (44), ಗೋಪಿ (35), ಹರ್ಷ (50) ಮತ್ತು ಪ್ರಶಾಂತ (61) ಆನೆಗಳು ಇವೆ. ಗೋಪಾಲಸ್ವಾಮಿ, ಕೃಷ್ಣ, ದ್ರೋಣ ಮತ್ತಿಗೋಡು ಆನೆ ಶಿಬಿರದಿಂದ ಹಾಗೂ ವಿಕ್ರಮ, ಗೋಪಿ, ಹರ್ಷ, ಪ್ರಶಾಂತ ಆನೆಗಳು ದುಬಾರೆ ಆನೆ ಶಿಬಿರದಿಂದ ಆಗಮಿಸಿವೆ. ಎಲ್ಲಾ ಆನೆಗಳು ಗಂಡು ಆನೆಗಳಾಗಿದ್ದು, ನಿರಾತಂಕವಾಗಿ ಲಾರಿಯಿಂದ ಇಳಿದು ಅರಮನೆ ಆವರಣದಲ್ಲಿ ಬೀಡುಬಿಟ್ಟಿವೆ.

ಇದೇ ಸಂದರ್ಭದಲ್ಲಿ ಅರಮನೆ ಮಂಡಳಿ ವತಿಯಿಂದ ನಿತ್ಯ ಬಳಕೆಯ ಕಿಟ್ ಗಳನ್ನು ವಿತರಿಸಲಾಯಿತು. ಆ.12ರಂದು ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದಿಂದ ಹೊರಟ ಮೊದಲ ಗಜಪಡೆ ಆ.17ರಂದು ಅದ್ಧೂರಿ ಸ್ವಾಗತದೊಂದಿಗೆ ಅರಮನೆ ಪ್ರವೇಶಿಸಿತ್ತು. ಅರ್ಜುನನ ನೇತೃತ್ವದಲ್ಲಿ ಬಂದ ಈ ಎಂಟು ಆನೆಗಳು ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿವೆ. ಸೆ.30ರಂದು ನಡೆಯಲಿರುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು 15 ಆನೆಗಳು ಭಾಗಿವಹಿಸಲಿವೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications