ಮೈಸೂರಿನಲ್ಲಿ ಮೂರು ದಿನ 'ರಂಗವಲ್ಲಿ ರಂಗಸಂಭ್ರಮ'
ಮೈಸೂರು, ಮಾರ್ಚ್, 25: ರಂಗವಲ್ಲಿಯು ತನ್ನ 10ನೇ ವರ್ಷಾಚರಣೆ ಅಂಗವಾಗಿ ಮಾರ್ಚ್ 27 ರಿಂದ 29 ರವರೆಗೆ ಮೈಸೂರಿನ ಕಲಾಮಂದಿರದಲ್ಲಿ "ರಂಗವಲ್ಲಿ ರಂಗಸಂಭ್ರಮ" ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದೆ.
ಮೂರು ದಿನ ನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರು ಹಾಗೂ ತುಮುರಿಯಿಂದ ತಂಡಗಳೂ ಭಾಗವಹಿಸುತ್ತಿವೆ. ಈ ಮೂರುದಿನಗಳ ರಂಗವಲ್ಲಿ ರಂಗಸಂಭ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೆರವಿನಿಂದ ಆಯೋಜಿಸಲಾಗುತ್ತಿದ್ದು ಇದರ ಮಾರ್ಚ 27, ಭಾನುವಾರ ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ಉದ್ಘಾಟನೆ ನೆರವೇರಲಿದೆ.

ನಹೆಸರಾಂತ ರಂಗನಿರ್ದೇಶಕರು ಹಾಗೂ ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ ಅವರು "ರಂಗಸಂಭ್ರಮ"ದ ಉದ್ಘಾಟನೆಯನ್ನು ನೆರವೇರಿಸಿಕೊಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಮಲ್ಲಿಕಾರ್ಜುನಸ್ವಾಮಿ, ಹಿರಿಯರಂಗಕರ್ಮಿಗಳು ಹಾಗೂ ಚಿಂತಕರಾದ ಕೆ.ವೆಂಕಟರಾಜು ಹಾಗೂ ರಂಗವಲ್ಲಿಯ ಸಂಸ್ಥಾಪಕ ಸದಸ್ಯ ರವಿಪ್ರಸಾದ್ ಹೆಚ್.ಆರ್ ಅವರು ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸುಗುಣ ಕುಲದೀಪ್ ಗೀತೆಗಳನ್ನು ಹಾಡಲಿದ್ದಾರೆ. ರಂಗಭೂಮಿ ಹಾಗೂ ಕಿರುತೆರೆ ನಟಿ ಸುಷ್ಮ ನಾಣಯ್ಯ ಅಥಿತಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ ಹಾಗೂ ಧನ್ಯ ಶ್ರೀಧರ್ ವಂದನಾರ್ಪಣೆ ನಡೆಸಿಕೊಡಲಿದ್ದಾರೆ.
* ಮಾರ್ಚ್ 27, ಭಾನುವಾರ ಸಂಜೆ 7 ಗಂಟೆಗೆ ಬೆಂಗಳೂರಿನ ರಂಗಮಂಟಪ ತಂಡದಿಂದ ವೈದೇಹಿ ಅವರ ಕತೆಗಳ ಆಧರಿತ ನಾಟಕ "ಅಕ್ಕು" ಪ್ರದರ್ಶನವಿರುತ್ತದೆ. ಇದರ ವಿನ್ಯಾಸ ಮತ್ತು ನಿರ್ದೇಶನ ಚಂಪಾಶೆಟ್ಟಿ ಅವರದು.
* ಮಾರ್ಚ್ 28, ರ ಸೋಮವಾರ ಸಂಜೆ 7 ಗಂಟೆಗೆ ತುಮುರಿಯ ಕಿನ್ನರ ಮೇಳ ತಂಡದಿಂದ ಡಾ.ಮೊಗಳ್ಳಿ ಗಣೇಶ್ ಅವರ ಕತೆ ಆಧಾರಿತ ನಟಕ "ಬುಗುರಿ" ಪ್ರದರ್ಶನವಿರುತ್ತದೆ. ಇದರ ವಿನ್ಯಾಸ ಮತ್ತು ನಿರ್ದೇಶನ ಡಾ.ಎಂ.ಗಣೇಶ್ ಅವರದು.
* ಮಾರ್ಚ್ 29,ರ ಮಂಗಳವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಅನನ್ಯ ತಂಡದಿಂದ ಎನ್.ಎಸ್.ಸೇತೂರಾಂ ರಚಿಸಿ, ನಿರ್ದೇಶಿಸಿ ನಟಿಸಿರುವ ನಾಟಕ "ಅತೀತ" ಪ್ರದರ್ಶನವಿರುತ್ತದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications