ರಸ್ತೆ ವಿಭಜಕಕ್ಕೆ ಡಿಕ್ಕಿ: ಕಾರು ಪಲ್ಟಿ, ಮೂವರು ಸಾವು
ಮೈಸೂರು, ಅಕ್ಟೋಬರ್ 17: ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕುಶಾಲನಗರ ಬಳಿಯ ಬಸವನಹಳ್ಳಿಯಲ್ಲಿ ಸಂಭವಿಸಿದೆ. ಮೈಸೂರಿನ ಕೆ.ಜಿ. ಕೊಪ್ಪಲು ನಿವಾಸಿಗಳಾದ ನಂದೀಶ್(19), ಚಂದ್ರು(18), ಚೇತನ್ (19) ಸ್ಥಳದಲ್ಲೇ ಮೃತಪಟ್ಟವರು.
ಇನ್ನು ಪ್ರತಾಪ್, ಶಿವಕುಮಾರ್ ಮತ್ತು ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ರಾತ್ರಿ 1 ಗಂಟೆ ವೇಳೆ ಆರು ಯುವಕರು ಮಾರುತಿ ಬಲೇನೋ ಕಾರಿನಲ್ಲಿ (ಕೆ.ಎ 04 ಎಂಸಿ 7805) ಮಡಿಕೇರಿಯಿಂದ ಮೈಸೂರಿನತ್ತ ಬರುತ್ತಿದ್ದರು. ಈ ವೇಳೆ ಕುಶಾಲನಗರ ಬಳಿಯ ಬಸವನಹಳ್ಳಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.[ಕಾರು ಡಿಕ್ಕಿಯಾಗಿ ತಾಂಡವಪುರದ ನವವಿವಾಹಿತ ಸಾವು]

ಪರಿಣಾಮವಾಗಿ ಕಾರು ಸುಮಾರು ಮುನ್ನೂರು ಮೀಟರ್ ಸಾಗಿ, ಮಗುಚಿ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಂದೀಶ್, ಚಂದ್ರು, ಚೇತನ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆ, ಕಾರಿನೊಳಗೆ ಸಿಲುಕಿದ್ದ ಪ್ರತಾಪ್, ಶಿವಕುಮಾರ್, ಸುಹಾಸ್ ಗಂಭೀರ ಗಾಯಗೊಂಡಿದ್ದರು.[ಕಬಿನಿ ನಾಲೆಗೆ ಉರುಳಿದ ಕಾರು: ಇಬ್ಬರು ಸಾವು]
ವಿಷಯ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ಗಾಯಾಳುಗಳನ್ನು ಹೊರತೆಗೆದು ಮೈಸೂರಿಗೆ ಸಾಗಿಸಿದ್ದಾರೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications