ನಾಗರಹೊಳೆಯಲ್ಲಿ ಹುಲಿಗಣತಿ: ಮೊದಲ ದಿನವೇ ಕಂಡವು 3 ಹುಲಿ!
ಮೈಸೂರು, ಜನವರಿ 9 : ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜ.8 ರಿಂದ ಆರಂಭವಾದ ಹುಲಿ ಇತರ ಪ್ರಾಣಿ, ಪಕ್ಷಿ ಹಾಗೂ ವನವೃಕ್ಷಗಳ ಗಣತಿ ಕಾರ್ಯಕ್ಕೆ ಶುಭಾರಂಭದೊರೆತಿದೆ.
ಗುಂಡ್ಲುಪೇಟೆ ವಲಯದಲ್ಲಿ ಗಣತಿ ವೇಳೆ 3 ಹುಲಿ ಕಾಣಿಸಿಕೊಂಡು, ಗಣತಿ ಕಾರಯಕ್ಕೆ ನಾಂದಿ ಹಾಡಿವೆ. ಹುಲಿಗಣತಿ ಕಾರ್ಯಕ್ಕೆ ಆಡಚಣೆ ಆಗಬಹುದೆಂಬ ಹಿನ್ನೆಲೆಯಲ್ಲಿ ಸಫಾರಿ ಮೇಲೆ ಒಂದು ವಾರದವರೆಗೆ ವಿಧಿಸಲಾಗಿದ್ದ ನಿರ್ಬಂಧ ಆದೇಶವನ್ನು ಅರಣ್ಯ ಇಲಾಖೆ ಹಿಂಪಡೆದುಕೊಂಡಿದೆ. ಆದರೆ, ಸಫಾರಿ ಅವಧಿಯನ್ನು 3 ಗಂಟೆಗಳಿಂದ ಒಂದೂವರೆ ಗಂಟೆಗೆ ತಗ್ಗಿಸಿದೆ.
ಜಂಗಲ್ ರೆಸಾರ್ಟ್, ಪ್ರವಾಸೋದ್ಯಮ ಇಲಾಖೆ ಮತ್ತು ಖಾಸಗಿ ಹೋಟೆಲ್ ಗಳ ಮೂಲಕ ಈ ಮೊದಲೇ ಮುಂಗಡವಾಗಿ ಸಫಾರಿಗೆ ಕಾಯ್ದಿರಿಸಿರುವ ಪ್ರವಾಸಿಗರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. ಖಾಸಗಿಯವರಲ್ಲಿ ಮುಂಗಡ ಕಾದಿರಿಸಿದವರು ಸಫಾರಿ ಕೈಗೊಳ್ಳಬಹುದಾಗಿದೆ.

ಬೆಂಕಿ ರೇಖೆ ನಿರ್ಮಾಣ
ಇದೇ ವೇಳೆ, ಹುಲಿ ಸಂರಕ್ಷಿತ ಪ್ರದೇಶವಾದ ನಾಗರಹೊಳೆ ಅರಣ್ಯದಲ್ಲಿ ಕಳೆದ ಬಾರಿ ಸಾಕಷ್ಟು ಮಳೆ ಯಾಗಿದ್ದರೂ ವನ್ಯಜೀವಿಗಳಿಗೆ ಆಹಾರ ದೊರೆಯದೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವುಗಳಿಗೆ ಅರಣ್ಯದೊಳಗೆ ಸಾಧ್ಯವಾದಷ್ಟು ಆಹಾರ ಒದಗಿಸಿ, ನಾಡಿನತ್ತ ಬರದಂತೆ ಬೆಂಕಿಯ ಅವಘಡ ಎದುರಾಗದಂತೆ ಅರಣ್ಯ ಸಿಬ್ಬಂದಿ ಬೆಂಕಿ ರೇಖೆ ನಿರ್ಮಾಣ (ಫೈರ್ಲೈನ್) ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಆಸಕ್ತರಿಗೆ ತರಬೇತಿ
ಈ ಮಧ್ಯೆ, ಹಲವು ಆಸಕ್ತ ಸ್ವಯಂ ಸೇವಕರಿಗೆ ವನ್ಯಮೃಗ ಬೇಟೆ ತಡೆ ಕಾರ್ಯಕ್ಕೆ ಸಂಬಂಧಿಸಿ ತರಬೇತಿ ನೀಡಲಾಗಿದೆ. ತರಬೇತಿ ನಂತರ ಎಲ್ಲ ಸ್ವಯಂ ಸೇವಕರನ್ನು ಉದ್ಯಾನ ವ್ಯಾಪ್ತಿಯ 8 ವಲಯಗಳ anti ಪೌಚಿಂಗ್ (ಕಳ್ಳಬೇಟೆ ತಡೆ ಶಿಬಿರ)ಗಳಿಗೆ ಕಳುಹಿಸಿಕೊಡಲಾಗಿದೆ.

ಪ್ರಚಾರ ರಾಯಭಾರಿ
ವನ್ಯಜೀವಿಗಳ ಆಹಾರ ಚಕ್ರದಲ್ಲಿ ಹುಲಿ ಪಾತ್ರ ಬಹುಮುಖ್ಯವಾದುದು. ಹಾಗಾಗಿ ನಾಗರ ಹೊಳೆಯಲ್ಲಿ ಹುಲಿಯೇ ಬ್ರಾಂಡ್ ಅಂಬಾಸಿಡರ್ ಎನಿಸಿಕೊಂಡಿದೆ. ಅರಣ್ಯದಲ್ಲಿನ ಜಲ ಸಂಪನ್ಮೂಲ ಅಭಿವೃದ್ಧಿಗೆ ವನ್ಯಜೀವಿಗಳ ಆಹಾರ ಚಕ್ರ ಮುಖ್ಯ. ಸ್ವಯಂಸೇವಕರು ಯಾವುದೇ ಪ್ರಾಣಿಗಳ ಜತೆ ಲಘುವಾಗಿ ನಡೆದುಕೊಳ್ಳದೇ ಅರಣ್ಯದಲ್ಲಿ ಸಹಜತೆ ಕಾಪಾಡಲು ಬದ್ಧತೆ ತೋರಬೇಕು. ಅಂತರ ಸಂತೆ ವಲಯದ 4200 ಕಿ.ಮೀ. ವ್ಯಾಪ್ತಿಯಲ್ಲಿ 1800 ಕಿ.ಮೀ. ವ್ಯಾಪ್ತಿಯಲ್ಲಿ ಮಾತ್ರ ದಟ್ಟ ಕಾನನವಿದೆ. ಉಳಿದಿದ್ದು ಕಾಫಿ, ಏಲಕ್ಕಿ ಎಸ್ಟೇಟ್ಗಳಾಗಿ ಮಾರ್ಪಟ್ಟಿದೆ. ವಸ್ತುಸ್ಥಿತಿ ಹೀಗಿರುವಾಗ ವನ್ಯಜೀವಿಗಳು ಸಹಜ ಜೀವನ ಕ್ರಿಯೆಗೆ ಕಾಡಿನಿಂದ ಹೊರಬರುವಂತಾಗಿದೆ. ಇಂಥ ಸಂದರ್ಭಗಳಲ್ಲಿ ಸ್ವಯಂಸೇವಕರು ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳುವುದು ಅಗತ್ಯವಿದೆ ಎಂದು ತರಬೇತಿ ಅವಧಿಯಲ್ಲಿ ತಿಳಿಸಿಕೊಡಲಾಗಿದೆ.

ಹುಲಿಗಣತಿಗಾಗಿ ಹೊಸ app
ಹುಲಿ ಗಣತಿಗಾಗಿ ಇಕೋಲಾಜಿಕಲ್ ಎಂಬ ಹೊಸ app ಅನ್ನು ಅರಣ್ಯ ಇಲಾಖೆ ಸಿದ್ಧಪಡಿಸಿದೆ. ಇದರಲ್ಲಿ ಎಂಸ್ಟ್ರೈಪ್ ಎಂಬ ಸಾಫ್ಟ್ವೇರ್ ಮೂಲಕ ಹುಲಿ ಗಣತಿ ನಡೆಸಲು ಸುಲಭ ಸಾಧನ ಅಳವಡಿಸಲಾಗಿದೆ ಎಂದು ಹುಲಿಯೋಜನೆ ನಿರ್ದೇಶಕ ಮಣಿಕಂಠನ್ ಹೇಳಿದ್ದಾರೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications