ಮೈಸೂರು ಅರಮನೆ ಮುಂದೆ ಅರ್ಜುನನಿಗೆ ತ್ರಿಡಿ ಪೇಟಿಂಗ್ ನಮನ
ಮೈಸೂರು, ಡಿಸೆಂಬರ್ 16: ಅರ್ಜುನ ಆನೆ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಸ್ಮರಣಾರ್ಥವಾಗಿ ನಗರದ ಅರಮನೆ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಕಲಾವಿದ ಅನಿಲ್ ತ್ರಿಡಿ ಪೇಂಟಿಂಗ್ ಬರೆಯುವ ಮೂಲಕ ವಿಶೇಷವಾಗಿ ನಮನ ಸಲ್ಲಿಸಿದರು.
ಎಂಟು ಬಾರಿ ಅಂಬಾರಿ ಹೊತ್ತು ಜಂಬೂಸವಾರಿಯಲ್ಲಿ ಹೆಜ್ಜೆ ಹಾಕಿ ಎಲ್ಲರ ನೆಚ್ಚಿನ ಆನೆಯಾಗಿದ್ದ ಅರ್ಜುನ ಮೃತಪಟ್ಟು ಇಂದಿಗೆ 11 ದಿನ. ಕಾರ್ಯಾಚರಣೆ ವೇಳೆ ಆತ ಮೃತಪಟ್ಟಾಗ ನಾಡಿನ ತುಂಬ ಇರುವ ವನ್ಯಜೀವಿ ಪ್ರೇಮಿಗಳು ಕಣ್ಣೀರಿಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಅರ್ಜುನ ಆನೆ ನೆನಪಿಗಾಗಿ ಮೈಸೂರಿನ ಕಲಾವಿದ ಅನಿಲ್ ವಿಶಿಷ್ಟ ರೀತಿಯಲ್ಲಿ ತ್ರಿಡಿ ಪೇಂಟಿಂಗ್ ಮಾಡಿ ಗಮನ ಸೆಳೆದರು. ಎನಾಮನ್ ಮತ್ತು ಅಕಾಲಿಕ್ ಪೇಂಟ್ ಬಳಸಿ ಚಿತ್ರ ರಚಿಸಲಾಗಿದೆ. ನೂರಾರು ಜನ ತ್ರಿಡಿ ಪೇಂಟಿಂಗ್ ನೋಡಿ ಮೆಚ್ಚುಗೆ ಸೂಚಿಸಿದರು. ಹಲವರು ಪೇಂಟಿಂಗ್ ಮುಂದೆ ನಿಂತು ೆಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
''ಮೈಸೂರಿನ ಜನರಿಗೆ ಅರ್ಜುನನೊಂದಿಗೆ ಭಾವನಾತ್ಮಕ ನಂಟಿದೆ. ಆತನ ನೆನಪು ಸದಾ ನಮ್ಮೊಂದಿಗೆ ಇರಲಿ ಎಂದು ತ್ರಿಡಿ ಚಿತ್ರ ಬಿಡಿಸಿದ್ದೇನೆ. 18 ಅಡಿ ಉದ್ದ ಹಾಗೂ 9 ಅಡಿ ಅಗಲ ಇರುವ ಅರ್ಜುನನ ಚಿತ್ರ ಬರೆಯಲು 24 ಗಂಟೆ ಬೇಕಾಯಿತು. ಚಿತ್ರದೊಂದಿಗೆ ೆಟೋ ತೆಗೆಸಿಕೊಂಡರೆ ನಿಜವಾದ ಅರ್ಜುನನ ಜೊತೆ ನಿಂತು ಭಾವಚಿತ್ರ ತೆಗೆಸಿಕೊಂಡ ಅನುಭವ ವಾಗುತ್ತದೆ,'' ಎಂದು ಕಲಾವಿದ ಅನಿಲ್ ತಿಳಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications