ಮೈಸೂರಿನಲ್ಲಿ ಸಿಕ್ಕ ಕುರಾನ್ ಜಮ್ಮುವಿನಲ್ಲಿ ಕಳುವಾಗಿದ್ದಲ್ಲ
ಮೈಸೂರು, ಆ.28 : ಮೈಸೂರಿನ ಕೆ.ಆರ್.ನಗರ ತಾಲೂಕಿನಲ್ಲಿ ಸಿಕ್ಕಿದ ಚಿನ್ನದ ಲೇಪನವಿರುವ ಹಾಳೆಗಳ ಕುರಾನ್ ಜಮ್ಮು ಮತ್ತು ಕಾಶ್ಮೀರದ ವಸ್ತು ಸಂಗ್ರಹಾಲಯದಲ್ಲಿ ಕಳುವಾಗಿದ್ದಲ್ಲ ಎಂದು ಸ್ಪಷ್ಟನೆ ಸಿಕ್ಕಿದೆ. ಕುರಾನ್ ಎಲ್ಲಿಯದಿರಬಹುದೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಪುರಾತತ್ವ ಇಲಾಖೆಯ 5 ಜನರ ತಂಡ ಮೈಸೂರಿಗೆ ಭೇಟಿ ನೀಡಿ. ಮೈಸೂರು ಪೊಲೀಸರು ವಶಪಡಿಸಿಕೊಂಡ ಕುರಾನ್ ಪರಿಶೀಲನೆ ನಡೆಸಿದೆ. ಈ ಕುರಾನ್ 2003ರಲ್ಲಿ ಕಾಶ್ಮೀರದಿಂದ ಕಳುವಾಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದೆ. [ಕುರಾನ್ ಜಮ್ಮುವಿನಲ್ಲಿ ಕಳುವಾಗಿದ್ದು?]

ಆ.10ರಂದು ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಬಳಿ ಕುರಾನ್ ಮಾರಲು ಯತ್ನಿಸುತ್ತಿದ್ದ 10 ಮಂದಿಯ ತಂಡವನ್ನು ಪೊಲೀಸರು ಬಂಧಿಸಿದ್ದರು. ಇವರಿಂದ ವಶಪಡಿಸಿಕೊಂಡ ಚಿನ್ನದ ಲೇಪನವಿರುವ ಹಾಳೆಗಳ ಕುರಾನ್ ಅನ್ನು ವಶಪಡಿಸಿಕೊಳ್ಳಲಾಗಿತ್ತು.
ಈ ಕುರಾನ್ ಜಮ್ಮು-ಮತ್ತು ಕಾಶ್ಮೀರದ ಶ್ರೀನಗರದ ವಸ್ತು ಸಂಗ್ರಹಾಲಯದಿಂದ 2003ರಲ್ಲಿ ಕಳುವಾಗಿದ್ದು ಎಂಬ ಶಂಕೆ ವ್ಯಕ್ತವಾಗಿತ್ತು. ಪ್ರತಾಪ್ ಸಿಂಗ್ ವಸ್ತುಸಂಗ್ರಹಾಲಯದ ಸಿಬ್ಬಂದಿ ಈ ಕುರಿತು ಮೈಸೂರು ಪೊಲೀಸರಿಗೆ ಈ ಮೇಲ್ ಮೂಲಕ ಮಾಹಿತಿ ರವಾನಿಸಿದ್ದರು.
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮೈಸೂರಿಗೆ ಭೇಟಿ ನೀಡಿ ಕುರಾನ್ ಪರಿಶೀಲನೆ ನಡೆಸಿದ್ದು, ಇದು ಪ್ರತಾಪ್ ಸಿಂಗ್ ವಸ್ತು ಸಂಗ್ರಹಾಲಯದಲ್ಲಿ ಕಳುವಾಗಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ಪೊಲೀಸರು ಕುರಾನ್ ಎಲ್ಲಿಗೆ ಸೇರಿದ್ದು? ಎಂಬ ತನಿಖೆ ಮುಂದುವರೆಸಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications