ನಾಗರಹೊಳೆ ಕಾಡಿನಿಂದ ನಾಡಿಗೆ ಬಂದ 53 ಆದಿವಾಸಿ ಕುಟುಂಬಗಳು
ಮೈಸೂರು, ಜೂನ್.17 : ಜಿಲ್ಲೆಯ ಅಂಚಿನಲ್ಲಿರುವ ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹಾಡಿಗಳಲ್ಲಿ ಜೀವಿಸುತ್ತಿದ್ದ 53 ಆದಿವಾಸಿ ಕುಟುಂಬಗಳು ಈಗ ಶಾಶ್ವತವಾಗಿ ತಮ್ಮ ಹುಟ್ಟಿದ ನೆಲೆಯನ್ನು ಬಿಟ್ಟು ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದಾರೆ.
ರಾಜ್ಯ ಅರಣ್ಯ ಇಲಾಖೆ ಭೂಮಿ, ಬ್ಯಾಂಕ್ ಠೇವಣಿ ಜತೆಗೆ ಈ ಸ್ಥಳಾಂತರ ಪ್ರಕ್ರಿಯೆ ನಡೆಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಎಚ್ ಡಿ ಕೋಟೆಯ ಭೀಮನಹಳ್ಳಿಗೆ ಈ 53 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಪ್ರತಿ ಕುಟುಂಬಕ್ಕೆ 3 ಎಕರೆ ಭೂಮಿ, 2 ಲಕ್ಷ ಬ್ಯಾಂಕ್ ಠೇವಣಿ ಹಾಗೂ ತಾತ್ಕಾಲಿಕ ಖರ್ಚಿಗೆ 75 ಸಾವಿರ ರೂಪಾಯಿ ನಗದು ನೀಡಲಾಗಿದೆ. 2 ನೇ ಹಂತದಲ್ಲಿ ಹಡು ಗುಂಡಿ, ತಿತಿಮತಿ ಸಮೀಪದ ಮಜ್ಜಿಗೆಹಳ್ಳ ಹಾಗೂ ಆನೆಕ್ಯಾಂಪ್ ಹಾಡಿಯ 70 ಕುಟುಂಬಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು.

ಎಲ್ಲಾ ಇಲಾಖೆಗಳು ಹೀಗೆ ಸ್ಥಳಾಂತರಗೊಂಡವರಿಗೆ ನಾನಾ ಸೌಲಭ್ಯಗಳನ್ನು ಒದಗಿಸಲಿವೆ. ಸುಮಾರು 10 ಲಾರಿಗಳಲ್ಲಿ ಈ ಆದಿವಾಸಿಗಳ ಮನೆ ಸಾಮಾಗ್ರಿಗಳನ್ನು ಭೀಮನಹಳ್ಳಿಗೆ ಸ್ಥಳಾಂತರಿಲಾಗಿದೆ.
ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಾನವ-ಕಾಡು ಪ್ರಾಣಿ ಸಂಘರ್ಷವನ್ನು ತಪ್ಪಿಸುವ ಸಲುವಾಗಿ ಹಾಡಿಗಳಲ್ಲಿ ವಾಸಿಸುತ್ತಿರುವ ಆದಿವಾಸಿಗಳಿಗೆ ಸ್ವಯಂ ಪ್ರೇರಿತ ಸ್ಥಳಾಂತರ ಯೋಜನೆಯನ್ನು ಅರಣ್ಯ ಇಲಾಖೆ ಜಾರಿಗೊಳಿಸಿದೆ.
ಈ ಯೋಜನೆಯ ಪ್ರಕಾರ ಕಾಡು ತೊರೆಯುವ ಆದಿವಾಸಿಗಳಿಗೆ ಮನೆ ಹಾಗೂ ಜಮೀನನ್ನು ಅರಣ್ಯ ಇಲಾಖೆ ಕಾಡಿನ ಹೊರಗೆ ನೀಡುತ್ತದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications