ವಿಷಪ್ರಸಾದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಪ್ರತಿಭಟನೆ
ಮೈಸೂರು, ಜನವರಿ 2: ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ವಿಷ ಪ್ರಸಾದ ದುರಂತದಲ್ಲಿ ಅಸ್ವಸ್ಥರಾಗಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ಪೈಕಿ ಗುಣಮುಖರಾಗಿರುವ ಆರು ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಜೆಎಸ್ಎಸ್ ಆಸ್ಪತ್ರೆ , ಅಪೊಲೊ, ಕಾವೇರಿ ಆಸ್ಪತ್ರೆಯಿಂದ ತಲಾ ಒಬ್ಬರು, ಡಿಆರ್ ಎಂ ಆಸ್ಪತ್ರೆಯಿಂದ ಮೂವರು ಹೊಸ ವರ್ಷದ ದಿನ ಬಿಡುಗಡೆಯಾಗಿದ್ದಾರೆ.
ಹನೂರು ತಾಲೂಕಿನ ಎಂಜಿ ದೊಡ್ಡಿಯವರಾದ ಮಲ್ಲಿಗೆ, ಪಳನಿಯಮ್ಮ, ವಡ್ಡರ ದೊಡ್ಡಿ ಯವರಾದ ಕಂದಸ್ವಾಮಿ, ಮಹಾದೇವಿ ಹೊಸ್ತೂರು ಗ್ರಾಮದವರಾದ ಜಯಲಕ್ಷ್ಮೀ ಹಾಗೂ ಕೆಂಪರಾಜಮ್ಮ ಅವರು ಡಿಸ್ಚಾರ್ಜ್ ಆಗಿದ್ದಾರೆ.

ಉಳಿದಂತೆ ಜೆಎಸ್ಎಸ್ ಆಸ್ಪತ್ರೆಯಲ್ಲಿ ಒಬ್ಬರು, ಸುಯೋಗ ಆಸ್ಪತ್ರೆಯಲ್ಲಿ ಇಬ್ಬರು , ಕಾವೇರಿ ಆಸ್ಪತ್ರೆಯಲ್ಲಿ ಇಬ್ಬರು, ಕೊಲಂಬಿಯಾ ಆಸ್ಪತ್ರೆಯಲ್ಲಿ ಒಬ್ಬರು, ನಾರಾಯಣ ಹೃದಯಾಲಯದಲ್ಲಿ ಮೂವರು ಸೇರಿ ಒಂಬತ್ತು ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಲ್ಲಿ ಒಬ್ಬರು ವೆಂಟಿಲೇಟರ್ ನಲ್ಲಿ ಇಬ್ಬರು ಐಸಿಯುನಲ್ಲಿ ಇದ್ದಾರೆ. ಈ ದುರಂತದಲ್ಲಿ 17 ಮಂದಿ ಸಾವಿಗೀಡಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ರಕರಣದ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ,ಅಂಬಿಕಾ,ದೊಡ್ಡಯ್ಯ, ಮತ್ತು ಮಾದೇಶ್ ರನ್ನು ಜೈಲಿಗಟ್ಟಲಾಗಿದೆ.
ವಿಷಪ್ರಸಾದ: ಸಂತ್ರಸ್ತರಾದ ಕುಟುಂಬಕ್ಕೆ ಧೈರ್ಯ ತುಂಬಿದ ಸಿಎಂ
ಇತ್ತ ಪ್ರಕರಣದಲ್ಲಿ ಭಾಗಿಯಾದ ಪಾತಕಿಗಳಿಗೆ ಜಾಮೀನು ನೀಡದೆ ಗಲ್ಲು ಶಿಕ್ಷೆ ನೀಡುವಂತೆ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, 17 ಅಮಾಯಕ ಜೀವಗಳ ಸಾವಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಆರೋಪಿಗಳ ಆಸ್ತಿಯನ್ನ ಮುಟ್ಟುಗೋಲು ಹಾಕಿ ಮೃತರ ಕುಟುಂಬಕ್ಕೆ ನೀಡುವಂತೆ ಆಗ್ರಹಿಸಿದ್ದಾರೆ. ಆರೋಪಿಗಳು ಪ್ರಭಾವಿಗಳಾಗಿದ್ದು, ಸಾಕ್ಷಿಗಳನ್ನ ನಾಶ ಮಾಡುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications