Mysuru: ಪ್ರಜಾಪ್ರಭುತ್ವ ದಿನಾಚರಣೆಯಂದು ಮಾನವ ಸರಪಳಿ; ಮೈಸೂರಿನಲ್ಲಿ 60 ಸಾವಿರ ಮಂದಿ ಭಾಗಿ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಕರ್ನಾಟಕದಲ್ಲಿ ಇಂದು ಬೀದರ್ನಿಂದ ಚಾಮರಾಜನಗರದವರೆಗೆ 2,500 ಕಿಮೀ ಉದ್ದದ ಮಾನವ ಸರಪಳಿಯನ್ನು ರಚನೆ ಮಾಡಲಾಗಿತ್ತು. ಸಮಾನತೆ, ಏಕತೆ, ಭ್ರಾತೃತ್ವ ಮತ್ತು ಸಹಭಾಗಿತ್ವದ ಆಡಳಿತದ ಸಂಕೇತವಾಗಿ ಮಾನವ ಸರಪಳಿಯನ್ನು ರಚನೆ ಮಾಡಿದ್ದು, ಕರ್ನಾಟಕ ಸರ್ಕಾರ ವಿಶ್ವ ದಾಖಲೆ ಬರೆದಿದೆ. ಒಟ್ಟು 25 ಲಕ್ಷ ಜನ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರಮುಖ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾನವ ಸರಪಳಿಯಲ್ಲಿ ಪಾಲ್ಗೊಂಡು, ಸಂವಿಧಾನದ ಪೀಠಿಕೆ ಓದಿದರು. ಸಿಎಂ ನೇತೃತ್ವದಲ್ಲಿ ತೃತೀಯಲಿಂಗಿಗಳು, ವಿಕಲಚೇತನರು ಸೇರಿದಂತೆ ಸಮಾಜದ ವಿವಿಧ ಸ್ತರಗಳ ಜನರು ಮಾನವ ಸರಪಳಿ ರಚಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿದ್ದು, ಇದರಲ್ಲಿ ಸಚಿವರು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು, ಸ್ವಯಂ ಸೇವಕಾ ಸಂಘದವರು, ವಿದ್ಯಾರ್ಥಿಗಳು ಭಾಗವಾಗಿದ್ದರು.
ಮೈಸೂರಿನಿಂದ 60,000 ಮಂದಿ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ 60 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಮೂಲಕ ಗಮನ ಸೆಳೆದರು.
ಮೈಸೂರು ಬೆಂಗಳೂರು ರಸ್ತೆಯ ಕಳಸ್ತವಾಡಿ ಗೇಟ್ನಿಂದ ಆರಂಭವಾದ ಮಾನವ ಸರಪಳಿ ಮಾರ್ಗವು ಮಣಿಪಾಲ್ ಆಸ್ಪತ್ರೆ, ಫೌಂಟೆನ್ ವೃತ್ತ, ಅಂಬೇಡ್ಕರ್ ವೃತ್ತ, ಪುರ ಭವನ, ಕೋಟೆ ಆಂಜನೇಯ ಸ್ವಾಮಿ ವೃತ್ತಘಿ, ಹಾರ್ಡಿಂಜ್ ವೃತ್ತ, ರೇಸ್ ಕೋರ್ಸ್ ವೃತ್ತ, ಸಂಗೊಳ್ಳಿ ರಾಯಣ್ಣ ಸರ್ಕಲ್, ರಿಂಗ್ ರಸ್ತೆ, ವರುಣ ಗ್ರಾಮ, ಕೆಂಪಯ್ಯನ ಹುಂಡಿ, ಗರ್ಗೆಶ್ವರಿ, ತಿ.ನರಸೀಪುರ ಪಟ್ಟಣ, ಗಂಜಾಂ ನರಸಿಂಹ ಸ್ವಾಮಿ ದೇವಸ್ಥಾನ, ಕುರುಬೂರು, ಮಾಡ್ರಳ್ಳಿ ಗೇಟ್, ಮೂಗೂರು ಗ್ರಾಮದ ಮೂಲಕ ಚಾಮರಾಜನಗರ ಜಿಲ್ಲೆ ಪ್ರವೇಶ ಮಾಡಿತು.
ಶಾಲಾ, ಕಾಲೇಜು ಸಾವಿರಾರು ವಿದ್ಯಾರ್ಥಿಗಳೊಂದಿಗೆ ನಾನಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸರಕಾರಿ ಮತ್ತು ಖಾಸಗಿ ಸಂಸ್ಥೆ ಮತ್ತು ಕೈಗಾರಿಕೆಗಳ ನೌಕರರು ಮತ್ತು ಸಿಬ್ಬಂದಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವ ದಿನವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಬೆಳಗ್ಗೆ ತಾಲೀಮು ಮುಗಿಸಿ ಅರಮನೆಗೆ ವಾಪಸಾಗುತ್ತಿದ್ದ ದಸರಾ ಮಹೋತ್ಸವದ 13 ಆನೆಗಳು ಕೂಡ ಸಾಲಿನಲ್ಲಿ ಇದ್ದದ್ದು ವಿಶೇಷವಾಗಿತ್ತು.
ಶಾಸಕ ತನ್ವೀರ್ ಸೇಠ್ ಮಾತನಾಡಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತಿ ದೊಡ್ಡ ದೇಶವಾಗಿದೆ. ಇದಕ್ಕೆ ರಾಜ್ಯದ ಬೀದರ್ನಿಂದ ಹಿಡಿದು ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಿ ಇತಿಹಾಸ ಸೃಷ್ಟಿಸುವುದೇ ಸಾಕ್ಷಿ ಎಂದರು.
ವಿಶ್ವಸಂಸ್ಥೆಯು (UN) 2007ರಲ್ಲಿ ಸೆಪ್ಟೆಂಬರ್ 15 ಅನ್ನು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವೆಂದು ಘೋಷಿಸಿತು, ಅಂದಿನಿಂದ ಪ್ರತಿವರ್ಷ ಜಗತ್ತಿನಾದ್ಯಂತ ಇದನ್ನು ಆಚರಿಸಲಾಗುತ್ತದೆ.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications