Mysuru: ಅರ್ಧಗಂಟೆಯಲ್ಲೇ 600 ಭಾರತ್ ಅಕ್ಕಿ ಚೀಲ ಖಾಲಿ!
ಮೈಸೂರು: ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಭಾರತ್ ಅಕ್ಕಿಗೆ ಬೇಡಿಕೆ ಹೆಚ್ಚಾಗಿದೆ. ಕೇವಲ ಅರ್ಧಗಂಟೆಯಲ್ಲಿ 600 ಬ್ಯಾಗ್ ಭಾರತ್ ರೈಸ್ ಮಾರಾಟವಾಗಿದೆ.
ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯಿತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಮೈಸೂರಿನಲ್ಲಿಯೂ ಚಾಲನೆ ದೊರೆತಿದೆ.

ನಗರದ ಹೆಬ್ಬಾಳಿನ ಕಾವೇರಿ ವೃತ್ತ ಮತ್ತು ಎನ್.ಆರ್. ಮೊಹಲ್ಲಾದ ಮಾರುತಿ ಸರ್ಕಲ್ನಲ್ಲಿ ಭಾರತ್ ಅಕ್ಕಿಯನ್ನು ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿತರಣೆ ಮಾಡಿದರು. ಕಾವೇರಿ ವೃತ್ತದಲ್ಲಿ 10 ಕೆಜಿಯ 300 ಬ್ಯಾಗ್ಗಳನ್ನು ಮಾರಾಟ ಮಾಡಿದರೆ, ಮಾರುತಿ ಸರ್ಕಲ್ನಲ್ಲಿ 300 ಬ್ಯಾಗ್ಗಳನ್ನು ಮಾರಾಟ ಮಾಡಲಾಯಿತು.
ಭಾರತ್ ಅಕ್ಕಿಯನ್ನು ಪಡೆಯಲು ನಿರೀಕ್ಷೆಗೂ ಮೀರಿ ಜನರು ಬಂದಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಅರ್ಧ ಗಂಟೆಯೊಳಗೆ ಟ್ರಕ್ನಲ್ಲಿ ತಂದಿದ್ದ ಬ್ಯಾಗ್ಗಳು ಖಾಲಿಯಾದವು. ಒಂದು ಕೆ.ಜಿ ಅಕ್ಕಿಗೆ ₹29 ದರ ನಿಗದಿ ಮಾಡಲಾಗಿದೆ.
ಹೆಬ್ಬಾಳಿನ ಕಾವೇರಿ ಸರ್ಕಲ್ನಲ್ಲಿ ಭಾರತ್ ಅಕ್ಕಿ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ ಸಂಸದ ಪ್ರತಾಪ ಸಿಂಹ ಮಾತನಾಡಿ, ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ನೀಡುವ ಉದ್ದೇಶದಿಂದ ಕೇಂದ್ರ ಸರಕಾರ ಭಾರತ್ ಅಕ್ಕಿ ಯನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲೆಡೆ ನಿರಂತರವಾಗಿ ಭಾರತ್ ಅಕ್ಕಿ ಮಾರಾಟವಾಗಲಿದೆ ಎಂದು ಹೇಳಿದರು.
ಇಂತಹ ಜನಪರ ಕಾರ್ಯಕ್ರಮಗಳನ್ನು ಮೋದಿ ನೇತೃತ್ವದ ಸರಕಾರ ಮಾಡುತ್ತಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಭಾರತ್ ಅಕ್ಕಿ ದುರುಪಯೋಗವಾಗದಂತೆ ಮೊಬೈಲ್ ಸಂಖ್ಯೆ ಪಡೆದು ಒಬ್ಬರಿಗೆ ಒಂದೇ ಬ್ಯಾಗ್ ನೀಡಲಾಗುವುದು ಎಂದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications