ದಸರಾ ಫಲ-ಪುಷ್ಪ ಪ್ರದರ್ಶನದಲ್ಲಿ ಕಂಗೊಳಿಸಲಿದೆ 75 ಸಾವಿರ ಗಿಡಗಳು
ಮೈಸೂರು, ಸೆಪ್ಟೆಂಬರ್ 9 : ಸೆ.30 ರಿಂದ ಅ.9ವರೆಗೆ ನಾಡಹಬ್ಬ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 75 ಸಾವಿರ ಹೂವಿನ ಗಿಡಗಳನ್ನು ಈ ಬಾರಿ ಪ್ರದರ್ಶಿಸಲಾಗುತ್ತಿದೆ.
ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರ ಸ್ಮರಣೆಯಲ್ಲಿ ಫಲಪುಷ್ಪ ಆಯೋಜಿಸಲಾಗುತ್ತಿದೆ. ಅಲ್ಲದೇ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲು ಭರದ ಸಿದ್ಧತೆ ನಡೆಸಲಾಗುತ್ತಿದೆ. ನಗರದ 5 ಉದ್ಯಾನಗಳ ನರ್ಸರಿಗಳಲ್ಲಿ ಬೆಳೆದಿರುವ ಗಿಡಗಳನ್ನು ಕುಪ್ಪಣ್ಣ ಉದ್ಯಾನಕ್ಕೆ ತಂದು ಪ್ರದರ್ಶಿಸಲಾಗುವುದು. ಪ್ರದರ್ಶನದ ಪರಿಕಲ್ಪನೆ ಇನ್ನೂ ಸಿದ್ಧವಾಗಿಲ್ಲ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಹಬೀಬಾ ನಿಶಾಂತ್ ತಿಳಿಸಿದರು.

ಕಳೆದ ಬಾರಿ ಗಾಜಿನ ಮನೆಯಲ್ಲಿ ಹೂವುಗಳಿಂದ ನಿರ್ಮಿಸಿದ್ದ ಲೋಟಸ್ ಮಹಲ್ ಆಕರ್ಷಣೀಯ ಕೇಂದ್ರಬಿಂದುವಾಗಿತ್ತು. ಹೂಗಳಲ್ಲಿ ರಚಿಸಿರುವ ಅಶೋಕಸ್ತಂಭ, ಅಮರ್ ಜವಾನ್ ಸ್ತಂಭ, ಕಾಫಿ ಮಗ್-ಲೋಟ, ಆನೆಗಾಡಿ, ಡಾಲ್ಫಿನ್ಸ್, ಪೆಂಗ್ವಿನ್ ಕಲಾಕೃತಿ ಜನರ ಕಣ್ಮನ ಸೆಳೆದಿದ್ದವು. ಆದರೆ ಈ ಬಾರಿ ಹೊಸ- ಹೊಸ ಹೂವಿನ ವಿಧಾನಗಳು ನೋಡುಗರ ಮನತಣಿಸಲಿದೆ.

ಈ ಬಾರಿಯ ದಸರಾ ಫಲಪುಷ್ಪ ಪ್ರದರ್ಶನ ಟೆಂಡರ್ ದಾಖಲೆಯ ಮಟ್ಟಕ್ಕೆ ಹರಾಜಾಗಿದೆ. ಹರಾಜಿಗೆ ಇಲಾಖೆ 90 ಲಕ್ಷ ರೂ. ನಿಗದಿಪಡಿಸಿತ್ತು. ಹೆಚ್ಚಿನ ಮಂದಿ ಗುತ್ತಿಗೆದಾರರು ಭಾಗವಹಿಸಿದ್ದರಿಂದ ಸ್ಪರ್ಧೆ ಏರ್ಪಟ್ಟು 1.13 ಕೋಟಿ ರೂ.ಗೆ ಹರಾಜಾಗಿದೆ. ಇದರಿಂದ ಇಲಾಖೆಗೆ ಹೆಚ್ಚುವರಿಯಾಗಿ 23 ಲಕ್ಷ ರೂ. ಆದಾಯ ಬಂದಿದೆ. ಇದರಿಂದ ಸೆ.29ಕ್ಕೆ ಆರಂಭಗೊಳ್ಳುವ ಫಲಪುಷ್ಪ ಪ್ರದರ್ಶನ 15 ದಿನಗಳ ಕಾಲ ಅಂದರೆ ಅ.13ರವರೆಗೆ ನಡೆಯುವ ಬದಲು ಸೆ.29ರಿಂದ ಅ.9ರವರೆಗೆ 11 ದಿನಗಳ ಕಾಲ ನಡೆಯಲಿದೆ.

ಆರು ತಿಂಗಳಿನಿಂದಲೂ ವಿವಿಧ ರೀತಿಯ ಗಿಡಗಳನ್ನು ಬೆಳೆಸಲು ತಯಾರಿ ನಡೆಸಲಾಗಿದ್ದು ಈ ಕಾರ್ಯದಲ್ಲಿ ಸುಮಾರು 70ಕ್ಕೂ ಹೆಚ್ಚು ಸಿಬ್ಬಂದಿ ತೊಡಗಿದ್ದಾರೆ. ಜಯಚಾಮರಾಜೇಂದ್ರ ಒಡೆಯರ ಜನ್ಮಶತಾಬ್ಧಿ ಹಿನ್ನಲೆ ಹೂಗಳಿಂದ ಒಡೆಯರ್ ಪ್ರತಿಮೆ ನಿರ್ಮಾಣಕ್ಕೆ ಇಲಾಖೆ ಚಿಂತನೆ ನಡೆಸಿದೆ.
ಇನ್ನು ಈ ದಸರಾ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಮಕ್ಕಳ ಉದ್ಯಾನವನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ತೋಟಗಾರಿಕಾ ಇಲಾಖೆ ಫಲಪುಷ್ಪ ಪ್ರದರ್ಶನ ನಡೆಯುವ ಕುಪ್ಪಣ್ಣ ಪಾರ್ಕ್ ಪ್ರವಾಸಿ ತಾಣವಾಗಿಸಲು ಚಿಂತನೆ ಮಾಡಿದ್ದು ಸಂಗೀತ ಕಾರಂಜಿಯನ್ನ ಪ್ರತಿ ವಾರಾಂತ್ಯದಲ್ಲಿ ವರ್ಷ ಪೂರ್ತಿ ನಡೆಸಲು ಆಲೋಚಿಸಿದೆ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ












Click it and Unblock the Notifications