KSRTC Employees: ಬಾಕಿ ಉಳಿದಿರುವ ವೇತನ ಹೆಚ್ಚಳದ ಹಣ ಪಾವತಿಗೆ ನೌಕರರ ಆಗ್ರಹ
ಮೈಸೂರು, ಜುಲೈ 24: ಕರ್ನಾಟಕ ಸಾರಿಗೆ ಇಲಾಖೆ ಕಳೆದೊಂದು ವರ್ಷದಿಂದ ವಿವಿಧ ಪ್ರಶಸ್ತಿಗಳಿಗೆ ಭಾಜನವಾಗಿದೆ. ಹೊಸ ಬಸ್ಗಳನ್ನು ಖರೀದಿ ಮಾಡಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತಹ ಉಪಕ್ರಮ ಪರಿಚಯಿಸುತ್ತಿದೆ. ಈ ಮಧ್ಯೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ನೌಕರರ ವೇತನವನ್ನು ಬಾಕಿ ಉಳಿಸಿಕೊಂಡಿದೆ. ಇದನ್ನು ಕೂಡಲೇ ನೀಡಬೇಕು ಹಾಗೂ ಇತರ ಬೇಡಿಕೆ ಈಡೇರಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ.
ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಮೈಸೂರಿನಲ್ಲಿ KSRTC ನೌಕರರ ಸಂಘದ ಗೌರವಾಧ್ಯಕ್ಷ ಡಿ.ಎಸ್.ಸುರೇಶ್ ಮನವಿ ಮಾಡಿಕೊಂಡರು.

ಮೈಸೂರು ನಗರದಲ್ಲಿ ಇತ್ತೀಚೆಗೆ ನಡೆದ ಕೆಎಸ್ಆರ್ಟಿಸಿ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಹಿಂದಿದ್ದ ಬಿಜೆಪಿ ಸರ್ಕಾರವು 2020 ಜನವರಿಯಲ್ಲಿ ನೌಕರರ ಮನವಿಗೆ ಸ್ಪಂದಿಸಿತ್ತು. ಅದು ನೌಕರರ ಶೇ. 15 ರಷ್ಟು ಸಂಬಳವನ್ನು ಹೆಚ್ಚಿಸಿತಲ್ಲದೇ ಒಂದು ವರ್ಷದ ಬಾಕಿ ವೇತನ ನೀಡಿತ್ತು ಎಂದರು.
39 ತಿಂಗಳ ವೇತನ ಪಾವತಿ ಆಗಿಲ್ಲ
ಸದ್ಯ ಕೆಎಸ್ಆರ್ಟಿಸಿ ನೌಕರರ ಬಾಕಿ ಉಳಿದಿರುವ 39 ತಿಂಗಳ ಹೆಚ್ಚಿಸಿದ ವೇತನ ಇನ್ನೂ ಪಾವತಿ ಆಗಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು ಎಂದು ಸುರೇಶ್ ಹೇಳಿದರು.
ಇದೇ ವರ್ಷ 2024ರ ಜನವರಿ 1ರಿಂದ ಜಾರಿಯಾಗುವ ಒಪ್ಪಂದದಡಿ ನಮ್ಮ ವೇತನ ಹೆಚ್ಚಳ ಮಾಡುವ ಬದಲಾಗಿ ಕೆಎಸ್ಆರ್ಟಿಸಿ ನೌಕರರು ಸರ್ಕಾರಿ ನೌಕರರಂತೆ ಸಮಾನ ವೇತನದ ಪ್ರಯೋಜನವನ್ನು ಪಡೆಯಬೇಕು. ಈ ನಿಟ್ಟಿನಲ್ಲಿ ಏಳನೇ ವೇತನ ಆಯೋಗದದ ಶಿಫಾರಸುಗಳನ್ನು (7th Pay Commission) ಸರ್ಕಾರದ ತನ್ನ ಘೋಷಣೆ, ಭರವಸೆಯನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.

ವೇತನ ತಾರತಮ್ಯಕ್ಕೆ ಬೇಸರ
ಇನ್ನು ಮುಖ್ಯವಾಗಿ ರಾಜ್ಯ ಸರ್ಕಾರವು ನೌಕರರು ಮತ್ತು ಅಧಿಕಾರಿಗಳ ನಡುವಿನ ಅಂತರ ತಗ್ಗಿಸಲು KSRTC ನೌಕರರ ಸಂಘಗಳಿಗೆ ಚುನಾವಣೆ ನಡೆಸಲು ಅನುಮೋದನೆ ನೀಡಬೇಕು. ಕೆಲವು ವಿಚಾರಗಳಲ್ಲಿ ಅಧಿಕಾರಿಗಳು ಮನಸ್ಸಿಗೆ ಬಂದಂಗೆ ನಿರ್ಧಾರ ಕೈಗೊಳ್ಳುತ್ತಿದ್ದು, ವೇತನ ತಾರತಮ್ಯಕ್ಕೆ ಕಾರಣವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಅಂದಿನ KSRTC ನೌಕರರ ಸಂಘದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಮೋಹನ್, ಕಾರ್ಯಾಧ್ಯಕ್ಷ ಸಿ.ಡಿ. ವಿಶ್ವನಾಥ್, ಕಾರ್ಮಿಕ ಸಂಘದ ಮುಖಂಡರಾದ ಪ್ರವೀಣ್ ಕುಮಾರ್, ಮಂಜೇಗೌಡ, ಸಿದ್ದೇಶ್, ನಾಗರಾಜು, ರವಿಕುಮಾರ್, ಜಗದೀಶ್ ಗುಳೇದ, ಎಲ್.ಎಸ್. ವಿಜಯ್ ಮತ್ತಿತರರು ಪಾಲ್ಗೊಂಡಿದ್ದರು.
ರಾಜ್ಯ ಸಾರಿಗೆ ಇಲಾಖೆ ಹಾಗೂ ಸಾರಿಗೆ ಸಚಿವರು ಕಳೆದೊಂದು ವರ್ಷದಲ್ಲಿ ಸಾರಿಗೆ ಇಲಾಖೆ ಮಾಡಿದ ಸಾಧನೆಗಳ ಪೈಕಿ ಮಾತನಾಡುತ್ತಿದೆ. ಈ ಮಧ್ಯೆ ನಿಗಮಗಳಲ್ಲಿ ದುಡಿಯುತ್ತಿರುವ ನೌಕರರ ಬೇಡಿಕೆಗಳನ್ನು ಸಹ ಈಡೇರಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications