ಮೈಸೂರಲ್ಲಿ ಎಚ್1ಎನ್1 ರುದ್ರ ನರ್ತನಕ್ಕೆ 8 ಬಲಿ
ಕೇವಲ ಎರಡೂವರೆ ತಿಂಗಳಲ್ಲಿ ಮೈಸೂರಿನಲ್ಲಿ 129 ಎಚ್1ಎನ್1 ಪ್ರಕರಣಗಳು ವರದಿಯಾಗಿವೆ. ಇದೇ ವೇಳೆಗೆ ಭೀಕರ ಖಾಯಿಲೆಯ ರುದ್ರ ನರ್ತನಕ್ಕೆ 8 ಜನ ಅಸುನೀಗಿದ್ದಾರೆ.
ಮೈಸೂರು, ಮಾರ್ಚ್ 16: ಕೇವಲ ಎರಡೂವರೆ ತಿಂಗಳಲ್ಲಿ ಮೈಸೂರಿನಲ್ಲಿ 129 ಎಚ್1ಎನ್1 ಪ್ರಕರಣಗಳು ವರದಿಯಾಗಿವೆ. ಇದೇ ವೇಳೆಗೆ ಭೀಕರ ಖಾಯಿಲೆಯ ರುದ್ರ ನರ್ತನಕ್ಕೆ 8 ಜನ ಅಸುನೀಗಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಎಚ್1ಎನ್1 ಪ್ರಕರಣಗಳು ಭಾರೀ ಹೆಚ್ಚಾಗಿವೆ. ಕಳೆದ ವರ್ಷದಲ್ಲಿ ಒಟ್ಟು ಕೇವಲ 5 ಪ್ರಕರಣಗಳು ವರದಿಯಾಗಿದ್ದವು. ಮತ್ತು ಯಾರೂ ಸಾವಿಗೀಡಾಗಿರಲಿಲ್ಲ. ಆದರೆ ಈ ಬಾರಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. [ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಲ್ಲ : ಹೆಚ್.ಡಿ.ದೇವೇಗೌಡ ಸ್ಪಷ್ಟನೆ]

ಈ ವರ್ಷದ ಜನವರಿಯಿಂದ ಇಲ್ಲೀವರೆಗೆ ಜಿಲ್ಲಾ ಆರೋಗ್ಯ ಇಲಾಖೆ ಬೆಂಗಳೂರಿನ ನಿಮ್ಹಾನ್ಸ್ ಗೆ 289 ಸ್ಯಾಂಪಲ್ ಗಳನ್ನು ಕಳುಹಿಸಿತ್ತು. ಇದರಲ್ಲಿ 129 ಜನರಿಗೆ ಎಚ್1ಎನ್1 ಸೋಂಕು ಇರುವುದು ದೃಢ ಪಟ್ಟಿದೆ. ಇದರಲ್ಲಿ 90 ಪ್ರಕರಣಗಳು ಮೈಸೂರು ನಗರದಲ್ಲೇ ಪತ್ತೆಯಾಗಿದ್ದು ಆರೋಗ್ಯ ಇಲಾಖೆಯನ್ನು ಕಂಗೆಡಿಸಿದೆ.
ಇನ್ನೂ ಹೆಚ್ಚಿನ ರೋಗಬಾಧಿತರು 45 ವರ್ಷದೊಳಗಿನವರಾಗಿದ್ದು, ಗರ್ಭಿಣಿಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಇದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈಗಾಗಲೇ ಎನ್1ಎನ್1 ಹೆಮ್ಮಾರಿ ತಡೆಗಟ್ಟಲು ಕ್ರಮ ಕೈಗೊಂಡಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಡಾ ಕುಸುಮಾ ಹೇಳಿದ್ದಾರೆ. ಜನರಲ್ಲಿ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಮನೆ ಮನೆಗೆ ಕರಪತ್ರಗಳನ್ನು ಹಂಚಿ ಜನರಿಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ 2015ರಲ್ಲಿ 118 ಎಚ್1ಎನ್1 ಪ್ರಕರಣಗಳು ವರದಿಯಾಗಿತ್ತು. ಮತ್ತು 5 ಜನ ಸಾವಿಗೀಡಾಗಿದ್ದರು. ಆದರೆ ಈ ವರ್ಷ ಎಲ್ಲಾ ದಾಖಲೆಗಳನ್ನೂ ಮೀರುವಂತೆ ಕೇವಲ ಎರಡೂವರೆ ತಿಂಗಳಲ್ಲಿ 8 ಜನರನ್ನು ಬಲಿ ತೆಗೆದುಕೊಂಡಿದ್ದು 129 ಜನರಿಗೆ ಹರಡಿದೆ.
ಎಚ್1ಎನ್1 ಲಕ್ಷಣಗಳು:
ತೀವ್ರ ಗಂಟಲು ನೋವು, ಜ್ವರ, ತಲೆನೋವು, ಕೆಣ್ಣು ಕೆಂಪಾಗುವುದು, ಮೈಕೈನೋವು ಕಾಣಿಸಿಕೊಳ್ಳುವುದು ಎಚ್1ಎನ್1 ಸಾಮಾನ್ಯ ಲಕ್ಷಣಗಳಾಗಿವೆ.
ಇನ್ನು ಕೆಮ್ಮಿದಾಗ, ಸೀನಿದಾಗ ರೋಗದ ವೈರಾಣುಗಳು ಗಾಳಿಯಲ್ಲಿ ಹರಡುತ್ತದೆ. ಇನ್ನು ಕೆಮ್ಮುವಾಗ, ಸೀನುವಾಗ ಕೈವಸ್ತ್ರ ಹಿಡಿದರೆ ಅದನ್ನು ಇನ್ನೊಬ್ಬರು ಬಳಸಿದಾಗ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸೋಂಕು ಪೀಡಿತರು ಸಾರ್ವಜನಿಕ ಸಂಪರ್ಕದಿಂದ ದೂರವಿರುವುದು ಅತ್ಯಗತ್ಯವಾಗಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications