ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೇ 80ರಷ್ಟು ಹಾಸಿಗೆ ಕೋವಿಡ್‌ಗೆ ಮೀಸಲಿಡಬೇಕು; ಡಾ. ಕೆ. ಸುಧಾಕರ್

|
Google Oneindia Kannada News

ಮೈಸೂರು, ಏಪ್ರಿಲ್ 22; "ಬೆಂಗಳೂರಿನಲ್ಲಿ 30 ಹಾಸಿಗೆ ಇರುವ ಖಾಸಗಿ ಆಸ್ಪತ್ರೆಗಳನ್ನು ನಾನ್ ಕೋವಿಡ್‌ಗೆ ಮೀಸಲಿಡಬೇಕು. 30 ಕ್ಕಿಂತ ಹೆಚ್ಚಿರುವ ಆಸ್ಪತ್ರೆಗಳಲ್ಲಿ ಮೂರು ನಾಲ್ಕು ದಿನಗಳಲ್ಲಿ ಶೇ.80 ರಷ್ಟು ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡಬೇಕು" ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಮೈಸೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಿದೆ. ನಗರದಲ್ಲಿ 13 ವೈದ್ಯಕೀಯ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಡಯಾಲಿಸಿಸ್, ತಾಯಿ ಶಿಶು ಹಾಸಿಗೆ, ತುರ್ತು ಚಿಕಿತ್ಸೆ ಹಾಸಿಗೆ ಹೊರತುಪಡಿಸಿ, ಉಳಿದೆಲ್ಲವನ್ನೂ ಕೋವಿಡ್‌ಗೆ ಮೀಸಲಿಡಲು ಸೂಚಿಸಲಾಗಿದೆ" ಎಂದು ಹೇಳಿದರು.

ಕೋವಿಡ್ ಮಾರ್ಗಸೂಚಿ; ಮದುವೆಗೆ ಬಂದವರು ಅರ್ಧದಲ್ಲೇ ವಾಪಸ್! ಕೋವಿಡ್ ಮಾರ್ಗಸೂಚಿ; ಮದುವೆಗೆ ಬಂದವರು ಅರ್ಧದಲ್ಲೇ ವಾಪಸ್!

"ಇದರಿಂದಾಗಿ ಏಳೂವರೆ ಸಾವಿರ ಹಾಸಿಗೆ ಮೆಡಿಕಲ್ ಕಾಲೇಜುಗಳಿಂದ ಲಭ್ಯವಾಗಲಿದೆ. ಈ ಎಲ್ಲ ತೀರ್ಮಾನಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ ಅಂತಿಮಗೊಳಿಸಲಾಗುವುದು. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ. 30 ಸಾವಿರ ಆಕ್ಸಿಜನ್ ಸಹಿತ ಹಾಸಿಗೆ ಲಭ್ಯವಿದೆ" ಎಂದರು.

ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೋವಿಡ್ ಸೋಂಕು ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೋವಿಡ್ ಸೋಂಕು

80 Per Cent Of Beds And ICU Facility Should Dedicate To Govt Says Minister

"ವೈದ್ಯಕೀಯ ಕಾಲೇಜುಗಳಲ್ಲಿ ಪಿಜಿ, ಅಂತಿಮ ಪದವಿ ಪರೀಕ್ಷೆಯನ್ನು ಎರಡು ತಿಂಗಳು ಮುಂದೂಡಲು ಸೂಚಿಸಲಾಗಿದೆ. ವೈದ್ಯ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ನಿಯೋಜಿಸಲು ಸೂಚಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಕೋವಿಡ್‌ ರೋಗಿಗಳಿಗೆ ಶೇ.50 ಹಾಸಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಕೋವಿಡ್‌ ರೋಗಿಗಳಿಗೆ ಶೇ.50 ಹಾಸಿಗೆ ಮೀಸಲಿಡದ 66 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

"ಹೆಚ್ಚುವರಿಯಾಗಿ ಒಂದು ಲಕ್ಷ ರೆಮ್ ಡಿಸ್ವಿರ್ ಗೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಇದಕ್ಕೂ ಮುನ್ನವೇ 70 ಸಾವಿರ ವೈಲ್ ಖರೀದಿಸಲು ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಈ ಪೈಕಿ 20 ಸಾವಿರ ಸರಬರಾಜು ಆಗಿದೆ. ಮುಖ್ಯಮಂತ್ರಿಗಳು ಲಸಿಕೆ ಖರೀದಿಗೆ ನಿರ್ಣಯ ಕೈಗೊಳ್ಳಲಿದ್ದಾರೆ" ಎಂದು ವಿವರಿಸಿದರು.

"ವಿಜಯಪುರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ತಮ್ಮ ಸಂಸ್ಥೆಯಲ್ಲಿ ಸ್ವಯಂಪ್ರೇರಿತರಾಗಿ ಹಾಸಿಗೆಗೆ 3 ಸಾವಿರ ರೂ. ದರ ನಿಗದಿಪಡಿಸಿ, ಮೂಲಸೌಕರ್ಯ ಹೆಚ್ಚಿಸಿದ್ದಾರೆ. ಈ ಸಂಸ್ಥೆ ಜಿಲ್ಲೆಯ ಸಂಜೀವಿನಿಯಾಗಿದೆ. ಎಲ್ಲ ಮೆಡಿಕಲ್ ಕಾಲೇಜುಗಳು ಇದೇ ರೀತಿ ಕೋವಿಡ್ ಹೋರಾಟದಲ್ಲಿ ಮುಂಚೂಣಿಯಲ್ಲಿರಬೇಕು" ಎಂದು ಮನವಿ ಮಾಡಿದರು.

ಸಚಿವರ ಪರಿಶೀಲನೆ; ಮೈಸೂರಿನಲ್ಲಿ ಪರಿಶೀಲನೆ ನಡೆಸಿದ ಸಚಿವರು, 'ಮೈಸೂರಿನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಗೆ ಮೀಸಲಿಡಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ ಶೇ.50 ಹಾಗೂ 37 ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆ ಮೀಸಲಿಡಲಾಗಿದೆ" ಎಂದರು.

English summary
Health minister of Karnataka Dr. K. Sudhakar said that all hospitals that have bed capacity of more than 30 will now have to dedicate 80 per cent of the beds and ICU facility to the state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X