ಸಾಹಿತ್ಯ ಜಾತ್ರೆಯಲ್ಲಿ ದೊಡ್ಡರಂಗೇಗೌಡರ ಜೊತೆ ಮಾತುಕತೆ
ಮೈಸೂರು, ನವೆಂಬರ್ 25: ಓದುಗರ ಅಭಿರುಚಿ ಬದಲಾಗಿದೆಯೆ? ಅಥವಾ ಓದುಗರ ಅಭಿರುಚಿಯ ದಿಕ್ಕನ್ನೇ ಬದಲಿಸುವ ಪಯತ್ನ ನಡೆಯುತ್ತಿದೆಯೆ? ಯಾವುದನ್ನೂ ಸ್ಪಷ್ಟವಾಗಿ ಹೇಳಲು ಸಾಧ್ಯವಾಗದ ಪರಿಸ್ಥಿತಿ ಇಂದು ಸೃಷ್ಟಿಯಾಗಿರುವುದು ಸಾಹಿತ್ಯ ಸಮ್ಮೇಳನದ ಪುಸ್ತಕ ಮಳಿಗೆಯಲ್ಲಿ ಕಂಡುಬಂದಿತು. ಸಮ್ಮೇಳನದ ಪುಸ್ತಕ ಮಳಿಗೆಯಲ್ಲಿ ಕನ್ನಡದ ಎಲ್ಲಾ ಪ್ರಕಾರದ ಸಾಹಿತಿಗಳ ಪುಸ್ತಕಗಳನ್ನು ಕಾಣಬಹುದು.
ಇನ್ನು ಪ್ರತಿ ಪುಸ್ತಕ ಮಳಿಗೆಯಲ್ಲೂ ಕಾಣಬರುತ್ತಿದ್ದದ್ದು ಪ್ರಖ್ಯಾತ ಸಾಹಿತಿಗಳೇ. ಹೀಗೆ ಪುಸ್ತಕ ಮಳಿಗೆಯ ಸುತ್ತ ಸುತ್ತುತ್ತಿದ್ದ ನಮ್ಮ ಪ್ರತಿನಿಧಿಗೆ ಕಂಡು ಬಂದದ್ದು ಸಾಹಿತಿ ಪ್ರೊ. ದೊಡ್ಡರಂಗೇಗೌಡರು. ಒನ್ ಇಂಡಿಯಾದೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡದ್ದು ಹೀಗೆ.

ಮೈಸೂರಿನಲ್ಲಿ ಹಲವು ದಶಕಗಳ ಬಳಿಕ ಮತ್ತೆ ಸಾಹಿತ್ಯ ಜಾತ್ರೆ ನಡೆಯುತ್ತಿರುವುದು ಸಂತಸಕಾರಿ. ಅದರಲ್ಲೂ ತಮ್ಮ ಮೊನಚು ಮಾತಿನಿಂದಲೇ ಪ್ರಖ್ಯಾತರಾದ ಚಂಪಾರವರು ಉದ್ಘಾಟಿಸಿದ್ದು ಸಂತಸದಾಯಕ. ಕನ್ನಡದ ಸಮಸ್ಯೆಗಳು ಸಾವಿರದ ಸಮಸ್ಯೆಗಳಾಗಿದೆ. ಸಮ್ಮೇಳನದ ನಿಯಮಾವಳಿಗಳು ಕೇವಲ ಪುಸ್ತಕಕಕ್ಕೆ ಮಾತ್ರ ಸೀಮಿತವಾಗದೇ ಅನುಷ್ಠಾನಕ್ಕೆ ಬರಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ಮೊದಲು ಕನ್ನಡ ಕಡ್ಡಾಯವಾಗಬೇಕು. ಬೇರೇ ಬಾಷೆಗಳನ್ನು ಜನ ಕಲಿಯಲಿ, ಆದರೆ ಕನ್ನಡವನ್ನು ಓದುವ - ಬರೆಯುವ, ಕನ್ನಡದಲ್ಲಿ ಪರೀಕ್ಷೆ ಬರೆದು ತೇರ್ಗಡೆಯಾಗುವ ಕಾನೂನನ್ನು ಸರ್ಕಾರ ರೂಪಿಸಿದಾಗ ಮಾತ್ರ ಕನ್ನಡಕ್ಕೆ ಉಳಿಗಾಲ ಎಂದರು.
ಮುಂದುವರಿದು ಮಾತನಾಡಿದ ಅವರು, ನಾನು ಮತ್ತು ನನ್ನ ಪತ್ನಿ ರಾಜೇಶ್ವರಿ ಗೌಡ ಸಂಶೋಧನೆಗೈದು ಕ್ರಿ.ಪೂ. 2ನೇ ಶತಮಾನದಲ್ಲಿ ಕನ್ನಡ ಇತ್ತು. ಕರಗಡ ಎಂಬುದು ಸಹ ಅಸ್ಥಿತ್ವದಲ್ಲಿತ್ತು ಎಂದು ಪ್ರಸ್ತುತಪಡಿಸಿದ್ದೇವೆ. ಇದು ಚರಿತ್ರೆಯ ಪುಸ್ತಕಗಳಲ್ಲಿ ದಾಖಲಾಗಬೇಕು. ಕೇಂದ್ರ ಸರಕಾರದಿಂದ ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ಸಿಕ್ಕರೂ, ಕನ್ನಡದ ಅಭ್ಯುದಯಕ್ಕೆ ದುಡ್ಡು ಹರಿಯದೇ ಇರುವುದು ವಿಷಾದನೀಯ ಎಂದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications