84ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ
ಮೈಸೂರು, ನವೆಂಬರ್ 26 : 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿದ್ಯಾಕೇಂದ್ರವಾದ ಧಾರವಾಡದಲ್ಲಿ ನಡೆಯಲಿದೆ. ಹಾವೇರಿ, ಬಳ್ಳಾರಿ, ವಿಜಯಪುರ, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳು ಸಮ್ಮೇಳನದ ಅತಿಥ್ಯ ವಹಿಸಲು ಬಯಸಿದ್ದವು.
ಮೈಸೂರಿನಲ್ಲಿ ನಡೆಯುತ್ತಿರುವ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನವಾದ ಶನಿವಾರ, ಮುಂದಿನ ಸಮ್ಮೇಳನವನ್ನು ಯಾವ ಜಿಲ್ಲೆಯಲ್ಲಿ ಆಯೋಜಿಸಬೇಕು? ಎಂದು ಸಭೆ ಸೇರಿ ನಿರ್ಣಯ ಕೈಗೊಳ್ಳಲಾಗಿದೆ.
ಚಿತ್ರಗಳು : ಮೈಸೂರಲ್ಲಿ 83ನೇ ಸಾಹಿತ್ಯ ಸಮ್ಮೇಳನ ಸಂಭ್ರಮ

ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹುಮತದಿಂದ ಧಾರವಾಡದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ನಂತರ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದರು.
'60 ವರ್ಷಗಳ ಬಳಿಕ ಧಾರವಾಡದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹಾವೇರಿ, ಬಳ್ಳಾರಿ, ಬಿಜಾಪುರ, ಚಿಕ್ಕಮಂಗಳೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಯ ಕಸಾಪ ಜಿಲ್ಲಾಧ್ಯಕ್ಷರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ನಡೆಸುವಂತೆ ಒತ್ತಾಯಿಸಿದರು' ಎಂದು ಮನು ಬಳಿಗಾರ್ ಹೇಳಿದರು.
'ಅಂತಿಮವಾಗಿ ಎಲ್ಲಾ ಸದಸ್ಯರು ಒಮ್ಮತದಿಂದ ಧಾರವಾಡ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜನೆಗೆ ಸರ್ವಾನುಮತದಿಂದ ತೀರ್ಮಾನಿಸಿದ್ದೇವೆ. ಬೇಂದ್ರೆ ಅವರ ಹುಟ್ಟೂರು, ಚಂದ್ರಶೇಖರ ಪಾಟೀಲ ಅವರ ಜಿಲ್ಲೆಯಲ್ಲದೆ ನಾನೂ ಅದೇ ಜಿಲ್ಲೆಯವರಾಗಿರುವುದರಿಂದ ಧಾರವಾಡದಲ್ಲಿ ಅತ್ಯುತ್ತಮವಾಗಿ ಸಮ್ಮೇಳನ ಆಯೋಜಿಸುತ್ತೇವೆ' ಎಂದರು.
ಇದೇ ವೇಳೆ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಪಾಟೀಲ ಅವರು ಮಾತನಾಡಿ, 'ಧಾರವಾಡ ಜಿಲ್ಲೆಯಲ್ಲಿ ನನ್ನ ಜೀವನದ 60 ವರ್ಷ ಕಳೆದಿದ್ದೇನೆ. ಅದು ಸಾಹಿತ್ಯ, ಸಂಗೀತ, ಸಂಘರ್ಷಗಳಿಂದ ಕೂಡಿದ ಜಿಲ್ಲೆಯಾಗಿದ್ದು , ಸಮ್ಮೇಳನ ಆಯೋಜನೆಗೆ ತಕ್ಕ ಸೌಕರ್ಯಗಳೆಲ್ಲ ಇರುವುದರಿಂದ ಯಶಸ್ವಿಯಾಗಿ ಸಮ್ಮೇಳನ ಆಯೋಜಿಸುತ್ತೇವೆ' ಎಂದು ಹೇಳಿದರು.
ಕಾರ್ಯಕಾರಿ ಸಮಿತಿ ಸದಸ್ಯರಾದ ಕಸಾಪ ರಾಜ್ಯ ಗೌರವ ಕಾರ್ಯದರ್ಶಿ ವಾ.ಚ. ಚನ್ನೇಗೌಡ, ಗೌರವ ಕಾರ್ಯದರ್ಶಿ ರಾಜಶೇಖರ ಹತಗುಂದಿ, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ, ವೈ.ಡಿ. ರಾಜಣ್ಣ ಉಪಸ್ಥಿತರಿದ್ದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications