ನೀತಿ ಸಂಹಿತೆ ಉಲ್ಲಂಘನೆ; ಮೈಸೂರು ಜಿಲ್ಲೆಯಲ್ಲಿ ಸಿ ವಿಜಿಲ್ ಮೂಲಕ 855 ದೂರು ದಾಖಲು
ಲೋಕಸಭಾ ಚುನಾವಣೆಯಲ್ಲಿ ನಡೆಯುವ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಕ್ರಮಗಳನ್ನು ತಡೆಗಟ್ಟಲು ಚುನಾವಣಾ ಆಯೋಗ ತೆರೆದಿರುವ ಸಿ-ವಿಜಿಲ್ ಆ್ಯಪ್ ಮೂಲಕ ಮೈಸೂರು ಜಿಲ್ಲೆಯಲ್ಲಿ 855 ದೂರುಗಳು ದಾಖಲಾಗಿವೆ.
ನರಸಿಂಹರಾಜ ಕ್ಷೇತ್ರದಲ್ಲೇ ಅತಿ ಹೆಚ್ಚು 161 ದೂರುಗಳು ಬಂದಿವೆ. ಕೃಷ್ಣರಾಜ (102), ಚಾಮರಾಜ (101), ಹುಣಸೂರು (94) ದೂರುಗಳು ದಾಖಲಾಗಿವೆ. ನಂಜನಗೂಡು (21) ಹಾಗೂ ಎಚ್.ಡಿ.ಕೋಟೆಯಲ್ಲಿ (37) ದೂರುಗಳು ಬಂದಿವೆ.

ಹೆಚ್ಚಿನ ದೂರುಗಳು ಅನುಮತಿ ಇಲ್ಲದೆ ಬ್ಯಾನರ್, ಪೋಸ್ಟರ್ಗಳನ್ನು ಹಾಕಿರುವ ಬಗ್ಗೆ ಮತ್ತು ಉಡುಗೊರೆ, ಹಣ, ಮದ್ಯ ಹಂಚುತ್ತಿರುವ ಕುರಿತಾಗಿವೆ. ಬಹುತೇಕ ದೂರುಗಳನ್ನು ಚುನಾವಣಾಧಿಕಾರಿಗಳು ಬಗೆಹರಿಸಿದ್ದಾರೆ.
ಏನಿದು ಸಿ-ವಿಜಿಲ್?
ಮತಕ್ಕಾಗಿ ಮತದಾರರನ್ನು ಸೆಳೆಯಲು ಉಡುಗೊರೆ, ಮದ್ಯ, ಹಣ ಹಂಚುವವರನ್ನು ಕಂಡ ತಕ್ಷಣ ಪೊಲೀಸರಿಗೆ ತಿಳಿಸಲು ಸಿ-ವಿಜಿಲ್ ಆ್ಯಪ್ ಸಹಕಾರಿ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ತಡೆಗಟ್ಟಲು ಸಾರ್ವಜನಿಕರು ಸಿ-ವಿಜಿಲ್ ಆ್ಯಪ್ (ಸಿಟಿಜನ್-ವಿಜಿಲ್) ಮೂಲಕ ದೂರು ನೀಡಬಹುದು.
ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?
ಪ್ರತಿಯೊಬ್ಬರೂ ತಮ್ಮ ಮೊಬೈಲ್ನ ಪ್ಲೇ ಸ್ಟೋರ್ನಲ್ಲಿ ಸಿ-ವಿಜಿಲ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಇನ್ಸ್ಟಾಲ್ ಮಾಡಿಕೊಳ್ಳಬಹುದಾಗಿದೆ.
ಕಾರ್ಯ ನಿರ್ವಹಣೆ ಹೇಗೆ
ಸಿ ವಿಜಿಲ್ ಆ್ಯಪ್ನಲ್ಲಿ ದೂರು ಬಂದ ತಕ್ಷಣ ಆ ಮಾಹಿತಿಯು ಜಿಲ್ಲಾ ಚುನಾವಣಾಧಿಕಾರಿಗಳ ಕಂಟ್ರೋಲ್ ರೂಂಗೆ ಹೋಗಲಿದೆ. ಚುನಾವಣಾಧಿಕಾರಿ ಕಚೇರಿಯಿಂದ ಆಯಾ ಪ್ರದೇಶದ ವಿವಿಧ ಚುನಾವಣಾ ತಪಾಸಣಾ ತಂಡಗಳಾದ ಲೈಯಿಂಗ್ ಸ್ಕ್ವಾಡ್ ತಂಡಗಳಿಗೆ ರವಾನೆಯಾಗುತ್ತದೆ. ಯಾವುದೇ ಅಕ್ರಮಗಳು ವರದಿಯಾದ ತಕ್ಷಣವೇ ತಪಾಸಣಾ ತಂಡಗಳು ಸ್ಥಳಕ್ಕೆ ಭೇಟಿ ನೀಡುತ್ತವೆ.
ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ಸಂಬಂಧ ಕೆಲವು ನಕಲಿ ದೂರುಗಳು ಬಂದಿವೆ. ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸತ್ಯಾಸತ್ಯತೆಯನ್ನು ಪರಿಶೀಲಿದಾಗ ಇದು ಬೆಳಕಿಗೆ ಬಂದಿದೆ.
ಜಿಲ್ಲೆಯಲ್ಲಿ ದಾಖಲಾಗಿರುವ ದೂರುಗಳ ವಿವರ
ಚಾಮರಾಜ 101
ಚಾಮುಂಡೇಶ್ವರಿ 71
ಎಚ್.ಡಿ..ಕೋಟೆ 37
ಹುಣಸೂರು 94
ಕೃಷ್ಣರಾಜ 102
ಕೆ.ಆರ್.ನಗರ 84
ನಂಜನಗೂಡು 27
ನರಸಿಂಹರಾಜ 161
ಪಿರಿಯಾಪಟ್ಟಣ 53
ತಿ.ನರಸೀಪುರ 45
ವರುಣ 80
ಒಟ್ಟು 855
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications