ಮೈಸೂರಿನಲ್ಲಿ 88 ಸಾವಿರ ಮೌಲ್ಯದ ನಕಲಿ ನೋಟು ವಶ
ಮೈಸೂರು, ನವೆಂಬರ್ 19: ಎಟಿಎಂಗಳಲ್ಲಿ 2000 ಮುಖ ಬೆಲೆಯ ನೂತನ ನೋಟುಗಳು ಚಲಾವಣೆ ಆಗುತ್ತಿದ್ದಂತೆಯೇ ಅದನ್ನು ನಕಲಿ ಮಾಡಿ, ಚಲಾವಣೆ ಮಾಡುತ್ತಿದ್ದ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿ, ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಹಿನಕಲ್ ನಿವಾಸಿ ಅಜಿತ್, ಮಂಡ್ಯದ ರೇವಣ್ಣ ಮತ್ತು ಮೇಟಗಳ್ಳಿಯ ರೋಷನ್ ಬಂಧಿತರು. ಇವರಿಂದ 2000 ರುಪಾಯಿ ಮುಖಬೆಲೆಯ 34 ನಕಲಿ ನೋಟು, 50 ರು. ಮುಖಬೆಲೆಯ 4 ನಕಲಿ ನೋಟು, 20 ರು. ಮುಖಬೆಲೆಯ 2 ನಕಲಿ ನೋಟು, ಒಂದು ಕಲರ್ ಜೆರಾಕ್ಸ್ ಮಶೀನ್, ಒಂದು ಸ್ಕೇಲ್ ಹಾಗೂ ಕಟ್ಟರ್ ವಶಪಡಿಸಿಕೊಳ್ಳಲಾಗಿದೆ.[2 ಸಾವಿರ ರೂ. ನಕಲಿ ನೋಟು ಚಲಾವಣೆ: ಇಬ್ಬರ ಬಂಧನ]

ಸೆರೆ ಸಿಕ್ಕಿದ್ದು ಹೇಗೆ?
ಅಜಿತ್ ಮತ್ತು ರೇವಣ್ಣ ಯಮಹಾ ಬೈಕ್ ನಲ್ಲಿ ಸರಸ್ವತಿಪುರಂನ ಕವಿತಾ ಬೇಕರಿ ಬಳಿ ವೇಗವಾಗಿ ಬರುತ್ತಿದ್ದರು. ಈ ವೇಳೆ ಸರಸ್ವತಿಪುರಂ ಠಾಣೆ ಪೊಲೀಸರು ಸಂಶಯದ ಮೇಲೆ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಅಜಿತ್ ಜೇಬಿನಲ್ಲಿ 2000 ರು. ಮುಖಬೆಲೆ 3 ನೋಟು, ರೇವಣ್ಣನ ಬಳಿ 2000 ರು. ಮುಖಬೆಲೆಯ 7 ನೋಟುಗಳು ದೊರೆತವು.
ಇವುಗಳನ್ನು ಪರಿಶೀಲಿಸಿದಾಗ ನಕಲಿ ನೋಟುಗಳಂತೆ ಕಂಡುಬಂದ ಹಿನ್ನೆಲೆಯಲ್ಲಿ ಠಾಣೆಗೆ ಕರೆದೊಯ್ದು ಪರಿಶೀಲಿಸಿದರು. ಆಗ ಅವುಗಳು ನಕಲಿ ಎಂದು ಮನದಟ್ಟಾಯಿತು. ಈ ಬಗ್ಗೆ ವಿಚಾರಣೆಗೊಳಪಡಿಸಿದಾಗ ಅವರು ಮೇಟಗಳ್ಳಿಯ ರೋಷನ್ ಎಂಬಾತನ ಹೆಸರು ಹೇಳಿ, ಆತನೇ ನೋಟುಗಳನ್ನು ನೀಡಿದ ಬಗ್ಗೆ ಮಾಹಿತಿ ನೀಡಿದ್ದಾರೆ.[ಚಿಕ್ಕಮಗಳೂರಿನಲ್ಲಿ 2 ಸಾವಿರ ರು ಖೋಟಾನೋಟು ಪತ್ತೆ]
ತಕ್ಷಣ ಮೇಟಗಳ್ಳಿಯ ರೋಷನ್ ನನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸಿದಾಗ ಆತ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿ ಚಲಾವಣೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ದಾಳಿಯ ಸಂದರ್ಭದಲ್ಲಿ ಒಟ್ಟು 88,240 ರು. ಮೌಲ್ಯದ (2000 ರು. ಮುಖಬೆಲೆಯ 44 ನಕಲಿ ನೋಟು, 50 ರು. ಮುಖಬೆಲೆಯ 4 ನಕಲಿ ನೋಟು, 20 ರು. ಮುಖಬೆಲೆಯ 2 ನಕಲಿ ನೋಟು) ನಕಲಿ ನೋಟುಗಳು ಹಾಗೂ ಕಲರ್ ಜೆರಾಕ್ಸ್ ಮಶೀನ್ ವಶಪಡಿಸಿಕೊಳ್ಳಲಾಗಿದೆ.
ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಮೈಸೂರಿನ ವಿಜಯನಗರದಲ್ಲಿ ಮನೆ ದರೋಡೆ ಮತ್ತು ಮಳವಳ್ಳಿ ತಾಲೂಕಿನ ಕ್ಯಾತನಹಳ್ಳಿಯ ರಾಜಕೀಯ ಮುಖಂಡರೊಬ್ಬರ ಮನೆ ದರೋಡೆ ಮಾಡುವ ಸಂಚು ರೂಪಿಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications