ಮೈಸೂರಿನಲ್ಲಿ 88 ಸಾವಿರ ಮೌಲ್ಯದ ನಕಲಿ ನೋಟು ವಶ
ಮೈಸೂರು, ನವೆಂಬರ್ 19: ಎಟಿಎಂಗಳಲ್ಲಿ 2000 ಮುಖ ಬೆಲೆಯ ನೂತನ ನೋಟುಗಳು ಚಲಾವಣೆ ಆಗುತ್ತಿದ್ದಂತೆಯೇ ಅದನ್ನು ನಕಲಿ ಮಾಡಿ, ಚಲಾವಣೆ ಮಾಡುತ್ತಿದ್ದ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿ, ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಹಿನಕಲ್ ನಿವಾಸಿ ಅಜಿತ್, ಮಂಡ್ಯದ ರೇವಣ್ಣ ಮತ್ತು ಮೇಟಗಳ್ಳಿಯ ರೋಷನ್ ಬಂಧಿತರು. ಇವರಿಂದ 2000 ರುಪಾಯಿ ಮುಖಬೆಲೆಯ 34 ನಕಲಿ ನೋಟು, 50 ರು. ಮುಖಬೆಲೆಯ 4 ನಕಲಿ ನೋಟು, 20 ರು. ಮುಖಬೆಲೆಯ 2 ನಕಲಿ ನೋಟು, ಒಂದು ಕಲರ್ ಜೆರಾಕ್ಸ್ ಮಶೀನ್, ಒಂದು ಸ್ಕೇಲ್ ಹಾಗೂ ಕಟ್ಟರ್ ವಶಪಡಿಸಿಕೊಳ್ಳಲಾಗಿದೆ.[2 ಸಾವಿರ ರೂ. ನಕಲಿ ನೋಟು ಚಲಾವಣೆ: ಇಬ್ಬರ ಬಂಧನ]

ಸೆರೆ ಸಿಕ್ಕಿದ್ದು ಹೇಗೆ?
ಅಜಿತ್ ಮತ್ತು ರೇವಣ್ಣ ಯಮಹಾ ಬೈಕ್ ನಲ್ಲಿ ಸರಸ್ವತಿಪುರಂನ ಕವಿತಾ ಬೇಕರಿ ಬಳಿ ವೇಗವಾಗಿ ಬರುತ್ತಿದ್ದರು. ಈ ವೇಳೆ ಸರಸ್ವತಿಪುರಂ ಠಾಣೆ ಪೊಲೀಸರು ಸಂಶಯದ ಮೇಲೆ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಅಜಿತ್ ಜೇಬಿನಲ್ಲಿ 2000 ರು. ಮುಖಬೆಲೆ 3 ನೋಟು, ರೇವಣ್ಣನ ಬಳಿ 2000 ರು. ಮುಖಬೆಲೆಯ 7 ನೋಟುಗಳು ದೊರೆತವು.
ಇವುಗಳನ್ನು ಪರಿಶೀಲಿಸಿದಾಗ ನಕಲಿ ನೋಟುಗಳಂತೆ ಕಂಡುಬಂದ ಹಿನ್ನೆಲೆಯಲ್ಲಿ ಠಾಣೆಗೆ ಕರೆದೊಯ್ದು ಪರಿಶೀಲಿಸಿದರು. ಆಗ ಅವುಗಳು ನಕಲಿ ಎಂದು ಮನದಟ್ಟಾಯಿತು. ಈ ಬಗ್ಗೆ ವಿಚಾರಣೆಗೊಳಪಡಿಸಿದಾಗ ಅವರು ಮೇಟಗಳ್ಳಿಯ ರೋಷನ್ ಎಂಬಾತನ ಹೆಸರು ಹೇಳಿ, ಆತನೇ ನೋಟುಗಳನ್ನು ನೀಡಿದ ಬಗ್ಗೆ ಮಾಹಿತಿ ನೀಡಿದ್ದಾರೆ.[ಚಿಕ್ಕಮಗಳೂರಿನಲ್ಲಿ 2 ಸಾವಿರ ರು ಖೋಟಾನೋಟು ಪತ್ತೆ]
ತಕ್ಷಣ ಮೇಟಗಳ್ಳಿಯ ರೋಷನ್ ನನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸಿದಾಗ ಆತ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿ ಚಲಾವಣೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ದಾಳಿಯ ಸಂದರ್ಭದಲ್ಲಿ ಒಟ್ಟು 88,240 ರು. ಮೌಲ್ಯದ (2000 ರು. ಮುಖಬೆಲೆಯ 44 ನಕಲಿ ನೋಟು, 50 ರು. ಮುಖಬೆಲೆಯ 4 ನಕಲಿ ನೋಟು, 20 ರು. ಮುಖಬೆಲೆಯ 2 ನಕಲಿ ನೋಟು) ನಕಲಿ ನೋಟುಗಳು ಹಾಗೂ ಕಲರ್ ಜೆರಾಕ್ಸ್ ಮಶೀನ್ ವಶಪಡಿಸಿಕೊಳ್ಳಲಾಗಿದೆ.
ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಮೈಸೂರಿನ ವಿಜಯನಗರದಲ್ಲಿ ಮನೆ ದರೋಡೆ ಮತ್ತು ಮಳವಳ್ಳಿ ತಾಲೂಕಿನ ಕ್ಯಾತನಹಳ್ಳಿಯ ರಾಜಕೀಯ ಮುಖಂಡರೊಬ್ಬರ ಮನೆ ದರೋಡೆ ಮಾಡುವ ಸಂಚು ರೂಪಿಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications