Bengaluru-Mysuru Highway: ಟ್ರಾಫಿಕ್ ರೂಲ್ಸ್ ಉಲ್ಲಂಘನೆ..ಬರೋಬ್ಬರಿ 9 ಕೋಟಿ ರೂ ದಂಡ ಸಂಗ್ರಹ
ಮೈಸೂರು, ಜುಲೈ 03: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದ ಕಾರಣಕ್ಕೆ ಸಂಚಾರಿ ನಿಯಮಗಳನ್ನು ಕಠಿಣಗೊಳಿಸಲಾಗಿತ್ತು. ಸ್ಟೀಡ್ ಲಿಮಿಟ್ ಸೇರಿದಂತೆ ಇತರ ಟ್ರಾಫಿಕ್ ರೂಲ್ಸ್ಗಳನ್ನು ಹೆಚ್ಚಿಸಲಾಗಿದ್ದು, ಸಂಚಾರಿ ಪೊಲೀಸರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಒಂದೇ ತಿಂಗಳಲ್ಲಿ ಸರಿಸುಮಾರು 9 ಕೋಟಿ ರೂ ದಂಡ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ (ಎನ್.ಹೆಚ್. 275) ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಂದ ಕೇವಲ ಒಂದೇ ತಿಂಗಳಲ್ಲಿ 8.99 ಕೋಟಿ ರೂಪಾಯಿ ದಂಡವನ್ನು ಸಂಚಾರಿ ಪೊಲೀಸ್ ಇಲಾಖೆ ಸಂಗ್ರಹಿಸಿದೆ. ನಿಯಮ ಮೀರಿದ ಸವಾರರು ಹಾಗೂ ಚಾಲಕರಿಗೆ ಸಾವಿರಾರು ರೂಪಾಯಿ ದಂಡ ಬಿದ್ದಿದ್ದು, ಸರಿಸುಮಾರು 9 ಕೋಟಿ ರೂ ದಂಡ ಸಂಗ್ರಹವಾಗಿದೆ.
ಐ.ಟಿ.ಎಂ.ಎಸ್ ಕ್ಯಾಮರಾದಲ್ಲಿ ನಿಯಮ ಉಲ್ಲಂಘನೆ ಪರಿಶೀಲನೆಯಲ್ಲಿ ನಿಯಮ ಉಲ್ಲಂಘನೆ ಸ್ಥಳ, ದಿನಾಂಕ, ಸಮಯ ಎಲ್ಲವನ್ನೂ ವಾಹನ ನೋಂದಣಿಯ ಮೊಬೈಲ್ ಸಂಖ್ಯೆಗೆ ರವಾನೆಯಾಗಲಿದ್ದು, 119 ಕಿಲೋ ಮೀಟರ್ ಉದ್ದಕ್ಕೂ 60 ಕ್ಯಾಮರಾ ಕಣ್ಗಾವಲು ಇರಿಸಲಾಗಿದೆ. ಈ ಮೂಲಕ ಒಂದೇ ತಿಂಗಳಲ್ಲಿ ಪೊಲೀಸರು ದಾಖಲೆಯ ದಂಡ ವಿಧಿಸಿದ್ದಾರೆ.
ಇನ್ನು ಸಂಚಾರ ನಿಯಮ ಉಲ್ಲಂಘನೆ ತಡೆಗೆ ಅಳವಡಿಸಿರುವ ಈ ಕ್ಯಾಮೆರಾಗಳಿಂದ ಸಂಚಾರ ಉಲ್ಲಂಘನೆ ಕುರಿತು ಮೊಬೈಲ್ಗೂ ಸಂದೇಶ ಬರಲಿದ್ದು ನಿಯಮ ಉಲ್ಲಂಘಿಸಿದ ಚಾಲಕನ ಮನೆಗೆ ನೋಟಿಸ್ ಕೂಡ ರವಾನೆಯಾಗಲಿದೆ. ಹೀಗಾಗಿ ವಾಹನ ಸವಾರರು ಸಂಚಾರಿ ನಿಮಯಗಳನ್ನು ಪಾಲಿಸಿ ದಂಡ ಹಾಗೂ ಅಪಘಾತಗಳಿಂದ ದೂರವಿರಿ ಎನ್ನುವುದು ಸಂಚಾರಿ ಪೊಲೀಸರ ಕಳಕಳಿಯಾಗಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications