ಮೈಸೂರು: ಗ್ರಾಮ ಪಂಚಾಯತಿ ಮೇಲ್ದರ್ಜೆಗೇರಿಸಿದ ಪರಿಣಾಮ ಕೈತಪ್ಪಿದ ಮತದಾನದ ಹಕ್ಕು
ಮೈಸೂರು, ಡಿಸೆಂಬರ್ 9: ಭಾರತದಲ್ಲಿ ಮತದಾನ ಪ್ರತಿಯೊಬ್ಬರ ಹಕ್ಕು. ದೇಶವನ್ನಾಳುವ ಜನಪ್ರತಿನಿಧಿನಗಳನ್ನು ಆಯ್ಕೆ ಮಾಡುವ ಅಧಿಕಾರ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಇದೆ. ಆದರೆ ಈ ಬಾರಿಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರಿನ ಕೆಲವು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಸಾಂವಿಧಾನಿಕವಾಗಿ ದೊರೆತಿರುವ ಮತದಾನದ ಹಕ್ಕು ಕೈತಪ್ಪಿದೆ.
ಇದೇ ಡಿ.10ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಮೈಸೂರು ಜಿಲ್ಲಾಡಳಿತದಿಂದ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು- ಚಾಮರಾಜನಗರ ಜಿಲ್ಲೆಯಿಂದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಜೊತೆಗೆ ಪಕ್ಷೇತರ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗಾಗಿ ಕಣಕ್ಕಿಳಿದಿದ್ದಾರೆ.
ಎರಡು ಜಿಲ್ಲೆಗಳಿಂದ ಒಟ್ಟು 6396 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ, ಮೇಲ್ಮನೆಗೆ ಇಬ್ಬರು ಸದಸ್ಯರನ್ನು ಆಯ್ಕೆ ಮಾಡುವ ಅವಕಾಶ ಪಡೆದಿದ್ದಾರೆ.

ಈ ಪೈಕಿ ಮೈಸೂರು ಜಿಲ್ಲೆಯಲ್ಲಿ ಒಟ್ಟು 252 ಗ್ರಾಮ ಪಂಚಾಯಿತಿಗಳಿದ್ದು, ಮೈಸೂರಿನ 23, ಎಚ್.ಡಿ. ಕೋಟೆ 26, ಹುಣಸೂರು 41, ಕೆ.ಆರ್. ನಗರ 34, ನಂಜನಗೂಡು 45, ಪಿರಿಯಾಪಟ್ಟಣ 34, ಸರಗೂರು 13 ಹಾಗೂ ತಿ. ನರಸೀಪುರದ 36 ಗ್ರಾಮ ಪಂಚಾಯಿತಿಗಳನ್ನೊಳಗೊಂಡಿವೆ. ಇದರೊಂದಿಗೆ 9 ಪಟ್ಟಣ ಪಂಚಾಯಿತಿಗಳಿಂದ ಆಯ್ಕೆಯಾಗಿರುವ ಸದಸ್ಯರು ಸೇರಿದಂತೆ ಒಟ್ಟು 4226 ಸದಸ್ಯರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.
ಆದರೆ, ರಾಜಕೀಯ ಮೇಲಾಟದಿಂದ ಮೈಸೂರು ಜಿಲ್ಲೆಯ 9 ಗ್ರಾಮ ಪಂಚಾಯತಿಗಳ ಸದಸ್ಯರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಮೈಸೂರು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳಾದ ರಮ್ಮನಹಳ್ಳಿ, ಬೀರಿಹುಂಡಿ, ಹೂಟಗಳ್ಳಿ, ಹಿನಕಲ್, ಬೋಗಾದಿ, ಇಲವಾಲ, ಹಂಚ್ಯಾ, ಹೊಸಹುಂಡಿ, ಆಲನಹಳ್ಳಿ, ಗ್ರಾಮ ಪಂಚಾಯಿತಿಗಳನ್ನು ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ ಈ ಗ್ರಾಮ ಪಂಚಾಯಿತಿಗಳಿಂದ ಆಯ್ಕೆಯಾಗಿದ್ದ ಸದಸ್ಯರುಗಳು ಈ ಬಾರಿ ಮತದಾನದಿಂದ ವಂಚಿತರಾಗಿದ್ದಾರೆ.
ಚುನಾವಣೆಗೆ ಸಕಲ ಸಿದ್ಧತೆ:
ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶುಕ್ರವಾರ ನಡೆಯಲಿರುವ ಮತದಾನಕ್ಕೆ ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತದಾನದ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲಿ ಒಟ್ಟು 393 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು, ಮೈಸೂರು ಜಿಲ್ಲೆಯಲ್ಲಿ 259 ಹಾಗೂ ಚಾಮರಾಜನಗರ- 134 ಮತ ಕೇಂದ್ರಗಳನ್ನು ತೆರೆಯಲಾಗಿದೆ.

ಇನ್ನು ಮತದಾನ ಕಾರ್ಯಕ್ಕೆ 1809 ಸಿಬ್ಬಂದಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ನಂಜನಗೂಡು, ಟಿ. ನರಸೀಪುರ, ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ. ಕೋಟೆ, ಸರಗೂರು, ಕೆ.ಆರ್. ನಗರ, ಮೈಸೂರು ಸೇರಿ ಆಯಾ ತಾಲೂಕು ಕಚೇರಿಗಳಲ್ಲಿ ಮಾಸ್ಟರಿಂಗ್ ಕಾರ್ಯ ನಡೆದಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಈಗಾಗಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಮದ್ಯ ಮಾರಾಟ, ಸಂತೆ- ಜಾತ್ರೆಗೆ ನಿರ್ಬಂಧ ವಿಧಿಸಲಾಗಿದೆ. ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ನಿರ್ಮಾಣ ಮಾಡಲಾಗಿದೆ.
Recommended Video
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications