ನಂಜನಗೂಡಿನಲ್ಲಿ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟ 94 ಜೋಡಿ
ಮೈಸೂರು, ಆಗಸ್ಟ್ 10 : ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಲಾ ಮಂಟಪದಲ್ಲಿ ಗುರುವಾರ ನಡೆದ ಸಾಮೂಹಿಕ ವಿವಾಹದಲ್ಲಿ 94 ನವ ಜೋಡಿಗಳು ಸಪ್ತಪದಿ ತುಳಿಯುವ ಮೂಲಕ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಶ್ರೀ ಕ್ರಾಂತಿಕಾರಿ ವೀರಶೈವ ಬಳಗವು ಡಾ. ಶ್ರೀ ಶಿವಕುಮಾರಸ್ವಾಮಿಗಳವರ 110 ನೇ ಜನ್ಮ ದಿನೋತ್ಸವದ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪೌರಕಾರ್ಮಿಕ 2 ಜೋಡಿ, ಪರಿಶಿಷ್ಟ ಜಾತಿಯ 44 ಜೋಡಿ, ಪರಿಶಿಷ್ಟ ವರ್ಗದ 43 ಜೋಡಿ, ಅಂತರ್ಜಾತಿಯ 2 ಜೋಡಿ, ಮುಸ್ಲಿಂ ಸಮುದಾಯದ 1 ಜೋಡಿ, ಕ್ರಿಶ್ಛಿಯನ್ ಸಮುದಾಯದ 1 ಜೋಡಿ ಹಾಗೂ ಹುಟ್ಟು ಅಂದರಾದ 1 ವಿಕಲಚೇತನ ಜೋಡಿಗಳು ಸಪ್ತಪದಿ ತುಳಿದರು.

ವರನಿಗೆ ಪಂಚೆ, ಶರ್ಟ್ ವಧುವಿಗೆ ಸೀರೆ ರವಿಕೆ, ಹಾಗೂ ಮಾಂಗಲ್ಯ ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಯಿತು.
ಮದುವೆಗೆ ಮುನ್ನ ಶ್ರೀ ಕಂಠೇಶ್ವರ ದೇವಾಲಯದ ಕಲಾಮಂದಿರದ ಆವರಣದಲ್ಲಿ ನವಗ್ರಹ ಪೂಜೆ, ಗಣಪತಿ ಹೋಮ, ಮತ್ತು ಕಂಕಣಧಾರಣೆ ಶಾಸ್ತ್ರ ಮತ್ತು ಮದುವೆ ಶಾಸ್ತ್ರಗಳನ್ನು ನೆರವೇರಿಸಿದ ಬಳಿಕ ಮಂತ್ರಗಳ ಪಠಣೆಯ ಜತೆಗೆ ಕಟ್ಟಿಮೇಳದ ಮೊಳಗುವಿಕೆಯೊಂದಿಗೆ ವರರಿಂದ ವಧುವಿಗೆ ಮಾಂಗಲ್ಯ ಧಾರಣೆಯನ್ನು ನಡೆಯಿತು.

ಈ ಸಂದರ್ಭದಲ್ಲಿ ಜಗದ್ಗುರು ಸುತ್ತೂರು ಶಿವರಾತ್ರಿಶ್ವರ ದೇಶಿ ಕೇಂದ್ರ ಮಹಾಸ್ವಾಮಿಗಳು ಮತನಾಡಿ, 'ನವ ವಧುವರರು ನಿಷ್ಠೆಯಿಂದ ಜೀವನ ಪರಿಪಾಲನೆ ಮಾಡಬೇಕು, ಗಂಡ ಹೆಂಡತಿ ಅನ್ಯೂನ್ಯವಾಗಿ ಜೀವನ ನಡೆಸಿ' ಎಂದು ವಧುವರರಿಗೆ ಶುಭಹಾರೈಸಿದರು.
ನೂತನ ವಧು-ವರರಿಗೆ ವಿವಾಹದ ಪ್ರಮಾಣ ಪತ್ರವನ್ನು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ವಿತರಿಸಿದರು. ಈ ವೇಳೆ ಶಾಸಕ ಕಳಲೆ ಕೇಶವಮೂರ್ತಿ ಉಪಸ್ಥಿತರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications