ಮೈಸೂರಲ್ಲಿ ಮತಚಲಾಯಿಸಿ ಜೀವತೆತ್ತ ಶತಾಯುಷಿ
ಮೈಸೂರು,ಫೆಬ್ರವರಿ,22: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಮತ ಚಲಾಯಿಸಲು ಬಂದ ಶತಾಯುಷಿಯೊಬ್ಬರು ಮತಗಟ್ಟೆಯಲ್ಲೇ ಕುಸಿದು ಬಿದ್ದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಕೌಲನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಬೆಟ್ಟದಪುರ ಕೌಲನಹಳ್ಳಿ ಗ್ರಾಮದ ದಿವಂಗತ ಕಾಳಾಚಾರ್ ಅವರ ಪತ್ನಿ ಪುಟ್ಟಾಮಣಮ್ಮ ಮೃತಪಟ್ಟ ಶತಾಯುಷಿ. ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ.ಈ ಇಳಿವಯಸ್ಸಿನಲ್ಲಿಯೂ ಮತ ಚಲಾಯಿಸಲು ಬಂದ ಇವರ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.[ಇಳಿವಯಸ್ಸೇ ತಲೆತಗ್ಗಿಸುತ್ತೆ ಕಬ್ಬಿನ ಜೂಸ್ ಮಾಮನ ಎದುರು]

ಪುಟ್ಟಾಮಣಮ್ಮ ಅವರು ಫೆಬ್ರವರಿ 20ರ ಶನಿವಾರದಂದು ನಡೆದ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಮತಹಾಕಲು ಮತಗಟ್ಟೆ ಸಂಖ್ಯೆ 36ಕ್ಕೆ ಸಂಜೆ 4.30 ರ ಸಮಯಕ್ಕೆ ಬಂದಿದ್ದಾರೆ. ಅಸ್ವಸ್ಥಗೊಂಡ ಅವರು ಮತ ಚಲಾಯಿಸಿದ ನಂತರ ಸ್ಥಳದಲ್ಲಿಯೇ ಕುಸಿದು ಬಿದ್ದು ಬಿದ್ದಿದ್ದಾರೆ.[ಪಂಚಾಯಿತಿ ಫೈಟ್ : ಮತದಾನ ಅಂತ್ಯ, ಫೆ.23ರಂದು ಫಲಿತಾಂಶ]
ಪುಟ್ಟಾಮಣಮ್ಮ ಮೂರು ದಿನಗಳ ಹಿಂದೆಯಷ್ಟೆ ನೂರು ವರ್ಷ ಪೂರೈಸಿದ್ದರು. ಕಳೆದ ಹಲವು ಚುನಾವಣೆಗಳಲ್ಲಿ ಮತ ಚಲಾಯಿಸುತ್ತಾ ಬಂದಿದ್ದ ಇವರು ಈ ಬಾರಿಯೂ ಮತ ಚಲಾಯಿಸುವ ಬಯಕೆಯಿಂದ ಮಕ್ಕಳ ಸಹಕಾರದೊಂದಿಗೆ ಮತ ಚಲಾಯಿಸಲು ಸಂಜೆ ವೇಳೆ ಬಂದಾಗ ಕುಸಿದ ಬಿದ್ದ ಇವರನ್ನು ಉಪಚರಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications