ಚುಡಾಯಿಸಿದ್ರೆ ಹುಷಾರ್... ಜೈಲಿಗೆ ಹೋಗೋದು ಪಕ್ಕಾ..!
ಮೈಸೂರು, ಜುಲೈ 29 : ಶಾಲಾ ಬಾಲಕಿಯನ್ನು ಚುಡಾಯಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮೈಸೂರುನ ಕೆ.ಆರ್.ನಗರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪಟ್ಟಣದ ವಿದ್ಯಾರ್ಥಿನಿಗೆ ಮುಸ್ಲಿಂ ಬಡಾವಣೆಯ ನಿವಾಸಿ ಷಕೀಮ್ (18) ಬಿನ್ ಷಮಿ ಎಂಬ ಹುಡುಗ ಚುಡಾಯಿಸಿದ ಆರೋಪದ ಮೇಲೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವಿದ್ಯಾರ್ಥಿನಿಯು ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಮನೆ ಪಾಠಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿ ಷಕೀಮ್ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ. ಅಲ್ಲದೇ ಚುಡಾಯಿಸುತ್ತಿದ್ದ ಎಂದು ಬಾಲಕಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಇದಕ್ಕೂ ಮುನ್ನ ಆರೋಪಿಯನ್ನು ಬಾಲಕಿಯ ತಾತಾ ಕರೆದು, ಈ ರೀತಿಯ ನಡವಳಿಕೆಯನ್ನು ತ್ಯಜಿಸುವಂತೆ ತಿಳಿಹೇಳಿದ್ದಾರೆ. ಆದರೆ, ಬುದ್ಧಿ ಮಾತಿಗೂ ಕಿವಿಗೊಡದ ಆರೋಪಿ ಷಕೀಮ್ ಬಾಲಕಿಯ ತಾತನ ಮುಖಕ್ಕೆ ಹೊಡೆದಿದ್ದಾನೆ. ಕೂಡಲೇ ಠಾಣೆ ಮೆಟ್ಟಿಲೇರಿ ಮೊಮ್ಮಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಿ ಷಕೀಮ್ ವಿರುದ್ಧ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಸದ್ಯ ಆರೋಪಿ 14 ದಿನಗಳ ನ್ಯಾಯಾಂಗ ಬಂಧನ ದಲ್ಲಿದ್ದು, 6 ತಿಂಗಳವರೆಗೆ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.
ನಕಲಿ ಪೇದೆ ಬಂಧನ
ವ್ಯಕ್ತಿಯೊಬ್ಬ ತಾನೊಬ್ಬ ಪೊಲೀಸ್ ಪೇದೆ ಎಂದು ನಂಬಿಸಿ, ಮದುವೆಯಾಗಿ ಯುವತಿಗೆ ಮೋಸಗೈದಿರುವ ಘಟನೆ ಮೈಸೂರಿನಲ್ಲಿ ಇಂದು ನಡೆದಿದೆ.
ಪರಸಯ್ಯನಹುಂಡಿ ಗ್ರಾಮದ ನಿವಾಸಿ ಶಿವಮೂರ್ತಿ (25) ಬಂಧಿತ ಆರೋಪಿ. ಈತ ಕಳೆದ ವರ್ಷ ದೇವಿಕ ಎಂಬ ಯುವತಿಯನ್ನು ಡಿಎಆರ್ ವಿಭಾಗದಲ್ಲಿ ಪೊಲೀಸ್ ಪೇದೆ ಸುಳ್ಳು ಹೇಳಿ ಮದುವೆಯಾಗಿದ್ದ. ಪೊಲೀಸ್ ಇಲಾಖೆಯ ಗುರುತಿನ ಚೀಟಿಯನ್ನೂ ಸಹ ಸಿದ್ದಪಡಿಸಿ ನಂಬಿಸಿದ್ದ.
ಅಲ್ಲದೆ ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಒಂದು ಲಕ್ಷ ನಗದು ಮತ್ತು 260 ಗ್ರಾಂ ಚಿನ್ನ ಪಡೆದುಕೊಂಡಿದ್ದ. ಮದುವೆಯಾದ ಹೊಸದರಲ್ಲಿ ಪೊಲೀಸ್ ಸಮವಸ್ತ್ರ ಧರಿಸಿ ಕೆಲಸಕ್ಕೆ ಹೋಗುತ್ತಿರುವುದಾಗಿ ನಂಬಿಸಿದ್ದ. ಅಲ್ಲದೆ ನಿಜಬಣ್ಣ ಬೆಳಕಿಗೆ ಬರುವಷ್ಟರಲ್ಲಿ ಸುಮಾರು 2 ಕೋಟಿಯಷ್ಟು ಸಾಲ ಮಾಡಿಕೊಂಡು ತಲೆಮರೆಸಿಕೊಂಡಿದ್ದ.
ಇತ್ತ ಪತಿಯ ಅಸಲಿ ವಿಷಯ ತಿಳಿದ ಪತ್ನಿ ದೇವಿಕ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications