Get Updates
Get notified of breaking news, exclusive insights, and must-see stories!

ಮೈಸೂರಿನಲ್ಲಿ ಹಾರುತ್ತಿರುವ ಹರಿದ ರಾಷ್ಟ್ರಧ್ವಜ!

ಮೈಸೂರು, ಜುಲೈ 11 : ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅವಾಂತರವೊಂದು ಮೈಸೂರುನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗಾಗೇನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಕಳೆದ 15 ದಿನಗಳಿಂದ ಸತತವಾಗಿ ಹರಿದು ಹೋಗಿರುವ ತ್ರಿವರ್ಣ ಧ್ವಜವನ್ನೇ ಹಾರಿಸಲಾಗುತ್ತಿದೆ. ರಾಷ್ಟ್ರ ಧ್ವಜಕ್ಕೆ ಆಗುತ್ತಿರುವ ಅವಮಾನದ ಬಗ್ಗೆ ಗ್ರಾಮಸ್ಥರು, ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಸರಿಪಡಿಸುವ ಗೋಜಿಗೆ ಹೋಗಿಲ್ಲ.

A damaged National Flag of India is flying in a government office in Mysuru

ರಾಷ್ಟ್ರ ಧ್ವಜಕ್ಕೆ ಕನಿಷ್ಠ ಗೌರವ ಕೊಡಲಾಗದ ಪಂಚಾಯಿತಿ ಕಚೇರಿ ಗಳ ಮುಂದೆ ದಿನ ನಿತ್ಯ ರಾಷ್ಟ್ರ ಧ್ವಜ ಹಾರಿಸಬೇಕಾದ ಔಚಿತ್ಯವನ್ನೇ ಜನ‌ ಪ್ರಶ್ನಿಸುವಂತಾಗಿದೆ.

A damaged National Flag of India is flying in a government office in Mysuru

ದಿ ಪ್ರಿವೆನ್ಷನ್ ಆಫ್ ಇನ್ಸಲ್ಟ್ ಟು ನ್ಯಾಶನಲ್ ಆನರ್ ಆಕ್ಟ್-1971 ಪ್ರಕಾರ ಧ್ವಜಕ್ಕೆ ಅಗೌರವ ಸೂಚಿಸುವವರಿಗೆ ಗರಿಷ್ಠ 3 ವರ್ಷ ಜೈಲುಶಿಕ್ಷೆ ವಿಧಿಸಬಹುದು. ಹಾಗೆಯೇ ದಂಡವನ್ನೂ ವಿಧಿಸಬಹುದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+