ಅಯ್ಯೋ ವಿಧಿಯೆ : ತಂದೆಯನ್ನು ಕೈಲಾಸಕ್ಕೆ ಕಳಿಸಿದ ಮಗನ ಕೈಸಾಲ
ಮೈಸೂರು,ಮಾರ್ಚ್,01: ಕಳೆದ ವಾರದಲ್ಲಿ ದುಶ್ಚಟಗಳಿಗೆ ಬಲಿಯಾದ ಮಗನನ್ನು ಕೊಂದ ತಂದೆಯ ಸುದ್ದಿ ಇನ್ನೂ ಮರೆಯಾಗಿಲ್ಲ. ಇದರ ಬೆನ್ನಲ್ಲೇ ಮಗ ಮಾಡಿದ ಕೈಸಾಲ ತೀರಿಸಲಾಗದ ತಂದೆ ಕೈಲಾಸ ಸೇರಿದ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ಮಂಗಳವಾರ ನಡೆದಿದೆ.
ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯೇ ರಘುನಾಥ್ (57). ಇವರು ಮಗ ಪ್ರಶಾಂತ ಮಾಡಿದ ಸಾಲವನ್ನು ತಾನೇ ತೀರಿಸುವುದಾಗಿ ಸಾಲಗಾರರ ಬಳಿ ಒಪ್ಪಿಕೊಂಡಿದ್ದರು. ಆದರೆ ಅದನ್ನು ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.[ದುಶ್ಚಟಗಳಿಗೆ ಬಲಿಯಾದ ಮಗನನ್ನು ಕೊಲೆಗೈದ ತಂದೆ!]

ರಘುನಾಥ್ ಅವರು ಮೈಸೂರಿನ ಕುವೆಂಪುನಗರ ಆದಿಚುಂಚನಗಿರಿ ರಸ್ತೆಯಲ್ಲಿರುವ ಬಿಜಿಎಸ್ ವಿದ್ಯಾಪೀಠದ ಆವರಣದಲ್ಲಿ ಬಿಜಿಎಸ್ ಬೇಕರಿ ನಡೆಸುತ್ತಿದ್ದರು. ಇವರ ಮಗ ಪ್ರಶಾಂತ್ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರೂ ವಿಲಾಸಿ ಜೀವನಕ್ಕಾಗಿ ಕೈಸಾಲ ಮಾಡಿಕೊಂಡಿದ್ದನು. ತನಗೆ ಪರಿಚಿತರಿಂದ ಸಾಲ ಪಡೆದಿದ್ದ ಪ್ರಶಾಂತ ಅದನ್ನು ತೀರಿಸಲಾಗದೆ ತಲೆ ಮರೆಸಿಕೊಂಡು ಓಡಾಡುತ್ತಿದ್ದನು.
ಸಾಲಗಾರರು ಮನೆ ಮುಂದೆ ಬಂದು ಗಲಾಟೆ ಮಾಡಿದಾಗ ಮಗ ಮಾಡಿದ ಸಾಲವನ್ನು ನಾನೇ ತೀರಿಸುತ್ತೇನೆ. ನೀವು ಮನೆ ಮುಂದೆ ಬಂದು ಗಲಾಟೆ ಮಾಡಬೇಡಿ ಎಂದು ರಘುನಾಥ್ ವಾಗ್ದಾನ ಮಾಡಿದ್ದರು. ಅದರಂತೆ ತಾವು ನಡೆಸುವ ಬೇಕರಿಯಲ್ಲಿ ಬಂದ ಲಾಭದಲ್ಲಿ ಕಂತಿನಂತೆ ತೀರಿಸುತ್ತಿದ್ದರು.[ಸಾಲದಲ್ಲೇ ಮಾಸಿಹೋಯ್ತು ಮೈಸೂರಿನ ಪೈಂಟರ್ ಬದುಕು]
ಈ ನಡುವೆ ಸಾಲಗಾರರು ಬೇಕರಿಗೆ ಬಂದು ಹಣ ನೀಡುವಂತೆ ಬಲವಂತ ಮಾಡುತ್ತಿದ್ದರಲ್ಲದೆ, ಬೇಕರಿ ಮುಂದೆ ಗದ್ದಲ ಎಬ್ಬಿಸಿದ್ದರು. ಸಾಲಗಾರರು ಬಂದು ಕೂಗಾಡುವ ಮತ್ತು ಕಿರುಚಾಡುವ ವಿಚಾರ ಮಠಕ್ಕೆ ತಲುಪಿತ್ತಲ್ಲದೆ, ಈ ರೀತಿ ಮಾಡುವುದು ಸರಿಯಲ್ಲ. ಆದ್ದರಿಂದ ಮಠಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಬೇಕರಿಯನ್ನು ಖಾಲಿ ಮಾಡಿ ಎಂದು ಮಠಾಧಿಕಾರಿಗಳು ಸೂಚನೆ ನೀಡಿದ್ದರು
ಮೊದಲೇ ಮಗನ ಸಾಲದಿಂದ ಜರ್ಜರಿತರಾಗಿದ್ದ ರಘುನಾಥ್ ಮಠಾಧಿಕಾರಿಗಳ ಮಾತಿನಿಂದ ಬೇರೆ ದಾರಿ ಕಾಣದೆ ವಿದ್ಯಾಪೀಠದ ಆವರಣದ ಶೌಚಾಲಯದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications