ಕಳ್ಳತನ ಆರೋಪ, ಗೃಹಿಣಿಯ ಜೀವ ತೆಗೆದ ಸಾವಿರ ರೂಪಾಯಿ
ಮೈಸೂರು,ಮಾರ್ಚ್,22: ಒಂದು ಸಾವಿರ ರೂ. ಕಳವು ಮಾಡಿರುವ ಆರೋಪಕ್ಕೆ ಒಳಗಾದ ಗೃಹಿಣಿಯೋರ್ವಳು ಮನನೊಂದು ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ನಗರದ ಮಂಡಿ ಮೊಹಲ್ಲಾದಲ್ಲಿ ನಡೆದಿದೆ.
ಮಂಡಿ ಮೊಹಲ್ಲಾ ನಿವಾಸಿ ತಬಸುಮ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಕಲೀಂ, ಅತ್ತೆ ಅಮೀನಾ, ಮಾವ ರೆಹಮಾನ್, ಭಾವ ಸಲೀಂ ಹಾಗೂ ನಾದಿನಿಯರಾದ ಸಲ್ಮಾ, ಅಮ್ರೋಲ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮನೆಯಿಂದ ಪರಾರಿಯಾಗಿದ್ದಾರೆ.[ಮಾಯಾವಿ ಮಾತಿಗೆ ಮರುಳಾಗಿ ಹಣ ಕಳೆದುಕೊಂಡ ಗಂಡಸರೆಷ್ಟು?]

ಕಳೆದ ಎರಡು ವರ್ಷದ ಹಿಂದೆ ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಕಲೀಂ ಎಂಬುವವರ ಜೊತೆ ತಬಸುಮ್ ಎಂಬುವವರು ವಿವಾಹವಾಗಿದ್ದರು. ಬಳಿಕ ತಬಸುಮ್ ಗೆ ವರದಕ್ಷಿಣೆಗಾಗಿ 2 ವರ್ಷದಿಂದ ನಿರಂತರ ಕಿರುಕುಳ ನೀಡುತ್ತಿದ್ದರು. ಕುಟುಂಬದವರು ನೀಡುವ ಹಿಂಸೆಯನ್ನು ಸಹಿಸಿಕೊಂಡು ಬದುಕುತ್ತಿದ್ದರು.[ಮಹಿಳೆಯರೇ,ನೀವು ವರದಕ್ಷಿಣೆ ಹಿಂಸೆ ಅನುಭವಿಸ್ತಿದ್ರೆ ಹೀಗೆ ಮಾಡಿ]
ಏಕಾಏಕಿ ಮನೆಯಲ್ಲಿ ಇಟ್ಟಿದ್ದ ಒಂದು ಸಾವಿರ ರೂ. ಕಾಣೆಯಾಗಿದೆ. ಆದರೆ ಅದನ್ನು ನೀನೇ ಕಳ್ಳತನ ಮಾಡಿದ್ದೀಯ ಎಂದು ಗಂಡನ ಮನೆಯವರೆಲ್ಲರೂ ಸೇರಿಕೊಂಡು ತಬಸುಮ್ ಗೆ ಇನ್ನಷ್ಟು ಹಿಂಸೆ ನೀಡಿದ್ದಾರೆ. ಇದರಿಂದ ಮನನೊಂದ ಗೃಹಿಣಿ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.[ಅರಿಶಿಣದ ಮೈ ಆರುವ ಮುನ್ನ ಮಹಿಳೆ ಜೀವನವೇ ಬಾಡಿತು]
ಈಕೆಯ ನಾದಿನಿಯರಾದ ಸಲ್ಮಾ, ಅಮ್ರೋಲ್ ಕೂಡಾ ಅತ್ತಿಗೆ ತಬಸುಮ್ ಗೆ ಕಾಟ ಕೊಡುತ್ತಿದ್ದರು. ಗಂಡನ ಮನೆಯವರ ಹಿಂಸೆಯಿಂದಲೇ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಮೃತಳ ತಾಯಿ ಮಂಡಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಡಿ ಠಾಣೆಯ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.[ಗಂಡನ ವಿರುದ್ಧ ಸುಳ್ಳು ದೂರು ದಾಖಲಿಸಿದರೆ ಪತ್ನಿಗೆ ಸಂಕಷ್ಟ]
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications