ಚಾಮುಂಡಿ ಬೆಟ್ಟದ ನಂದಿ ಮೂರ್ತಿಗೆ ಮಹಾಮಸ್ತಕಾಭಿಷೇಕ : ವೈಭವ ಕಣ್ತುಂಬಿಕೊಂಡ ಭಕ್ತರು
ಮೈಸೂರು, ನವೆಂಬರ್. 13:ಕಾರ್ತಿಕ ಮಾಸದ ಮೊದಲನೇ ಸೋಮವಾರದ ಪ್ರಯುಕ್ತ ಮೆಟ್ಟಿಲು ಹತ್ತುವ ಬಳಗದ ವತಿಯಿಂದ ನಂದಿ ವಿಗ್ರಹಕ್ಕೆ 8ನೇ ವರ್ಷದ ಮಹಾಮಸ್ತಕಾಭಿಷೇಕ ವಿಜೃಂಭಣೆಯಿಂದ ನೆರವೇರಿತು.
ಚಾಮುಂಡಿಬೆಟ್ಟದಲ್ಲಿರುವ 15 ಅಡಿ ಎತ್ತರದ ನಂದಿ ವಿಗ್ರಹಕ್ಕೆ ಕುಂಕುಮ, ಗಂಧ, ಅರಿಶಿನ, ಬಿಲ್ವಪತ್ರೆ, ಹಾಲು, ಮೊಸರು, ಎಳನೀರು ಹಾಗೂ ನಿಂಬೆ ರಸ ಸೇರಿದಂತೆ 47 ಬಗೆಯ ವಿವಿಧ ದ್ರವ್ಯಗಳಿಂದ ಹಾಗೂ 500 ಲೀ. ಹಾಲು, 200 ಲೀ. ಮೊಸರು, 100 ಲೀ. ಜೇನು ತುಪ್ಪಗಳಿಂದ ಅಭಿಷೇಕ ಮಾಡಲಾಯಿತು.

ಹಳದಿ, ಕೆಂಪು, ಬಿಳಿ ಸೇರಿದಂತೆ ವಿವಿಧ ಬಣ್ಣಗಳಲ್ಲಿ ನಂದಿ ವಿಗ್ರಹ ಕಂಗೊಳಿಸಿತು. ನೂರಾರು ಪ್ರವಾಸಿಗರು ಹಾಗೂ ಭಕ್ತರು ನಂದಿ ಮೂರ್ತಿಗೆ ನೆರವೇರಿಸಲಾಗುತ್ತಿದ್ದ ಮಸ್ತಕಾಭಿಷೇಕವನ್ನು ಕಣ್ತುಂಬಿಕೊಂಡರು. ಆರು ಮಂದಿ ಅರ್ಚಕರು ಮಂತ್ರಘೋಷ ಪಠಿಸುವುದರೊಂದಿಗೆ, ಅವರು ನೀಡಿದ ಸೂಚನೆಯ ಮೇರೆಗೆ ಬೆಟ್ಟ ಹತ್ತುವ ಬಳಗದ ಸುಮಾರು 50 ಸದಸ್ಯರು ನಂದಿ ಮೂರ್ತಿಗೆ ಅಭಿಷೇಕ ನೆರವೇರಿಸಿದರು.

ಬೆಟ್ಟ ಹತ್ತುವ ಬಳಗದ ಸದಸ್ಯ ಮಹದೇವು ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿ ಶುಕ್ರವಾರ ಚಾಮುಂಡಿ ಬೆಟ್ಟ ಹತ್ತುವ ಭಕ್ತರು ಬೆಟ್ಟ ಹತ್ತುವ ಬಳಗ' ರಚಿಸಿಕೊಂಡಿದ್ದೇವೆ. ಕಳೆದ 8 ವರ್ಷಗಳಿಂದ ನಂದಿ ಮೂರ್ತಿಗೆ ಮಸ್ತಕಾಭಿಷೇಕ ನೆರವೇರಿಸಿ ಕೊಂಡು ಬಂದಿದ್ದೇವೆ. ಯಾರಿಂದಲೂ ದೇಣಿಗೆ ಸಂಗ್ರಹಿಸದೆ ಬಳಗದ ಸದಸ್ಯರೇ ಹಣವನ್ನು ಸಂಗ್ರಹಿಸಿ ಈ ಧಾರ್ಮಿಕ ಕಾರ್ಯ ನೆರವೇರಿಸಿಕೊಂಡು ಬರುತ್ತಿದ್ದೇವೆ ಎಂದರು.

ಅರ್ಚಕ ಮಲ್ಲಿಕಾರ್ಜುನ ಮಾತನಾಡಿ, ಲೋಕ ಕಲ್ಯಾಣಕ್ಕಾಗಿ ನಂದಿ ಮೂರ್ತಿಗೆ ಕಾರ್ತಿಕ ಮಾಸದಲ್ಲಿ ಮಸ್ತಕಾಭಿಷೇಕ ನೆರವೇರಿಸಲಾಗುತ್ತಿದೆ. ಬೆಟ್ಟ ಹತ್ತುವ ಬಳಗ ಸದಸ್ಯರು ನಡೆಸುತ್ತಿರುವ ಈ ಮಸ್ತಕಾಭಿಷೇಕ ಸ್ತುತ್ಯಾರ್ಹ ಕಾರ್ಯವಾಗಿದೆ ಎಂದು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications