ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದಕ್ಕೆ ಬೇಸರಗೊಂಡು ಆತ್ಯಹತ್ಯೆಗೆ ಶರಣಾದ ವ್ಯಕ್ತಿ

|
Google Oneindia Kannada News

ಮಡಿಕೇರಿ, ಆಗಸ್ಟ್ 26: ಪ್ರವಾಹದಲ್ಲಿ ಮನೆ ಕಳೆದುಕೊಂಡು ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಬಳಿ ನಡೆದಿದೆ.

ಹೊರಬಿತ್ತು ಕಾಫೀ ಡೇ ಸಿದ್ಧಾರ್ಥ ಅಟಾಪ್ಸಿ ವರದಿ, ಅಂದು ನಡೆದಿದ್ದೇನು?ಹೊರಬಿತ್ತು ಕಾಫೀ ಡೇ ಸಿದ್ಧಾರ್ಥ ಅಟಾಪ್ಸಿ ವರದಿ, ಅಂದು ನಡೆದಿದ್ದೇನು?

ಕೊಪ್ಪದ ಎಸ್ಎಲ್ಎನ್ ಲೇಔಟ್ ನಿವಾಸಿ ಎನ್.ಕೆ.ಕಾರ್ಯಪ್ಪ (57) ಆತ್ಮಹತ್ಯೆ ಮಾಡಿಕೊಂಡವರು. ಇವರು ಈ ಹಿಂದೆ ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದು, ಎಸ್ಎಲ್ಎನ್ ಲೇಔಟ್ ನಲ್ಲಿ ಸೈಟ್ ಕೊಂಡುಕೊಂಡು ಲಕ್ಷಾಂತರ ರೂಪಾಯಿ ಖರ್ಚುಮಾಡಿ ಮನೆ ನಿರ್ಮಿಸಿದ್ದರು.

A man committed suicide effected by flood in Madikeri

ಇತ್ತೀಚೆಗೆ ಅತಿವೃಷ್ಟಿಯಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ರಾತ್ರೋರಾತ್ರಿ ಇವರ ಮನೆ ಸಂಪೂರ್ಣ ಜಲಾವೃತಗೊಂಡಿತ್ತು. ಇವರ ಕುಟುಂಬ ಅಪಾಯದಿಂದ ಪಾರಾಗಿ ಕೊಪ್ಪ ಗ್ರಾಮದ ಕಾಳಜಿ ಕೇಂದ್ರಕ್ಕೆ ಬಂದು ಆಶ್ರಯ ಪಡೆದಿತ್ತು. ಆದರೆ ಪ್ರವಾಹದಲ್ಲಿ ಮನೆ ಕಳೆದುಕೊಂಡು ಆಘಾತಗೊಂಡಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಾರ್ಯಪ್ಪ ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ಕುಶಾಲನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
57 year old man committed suicide effected by flood in Madikeri. He lost home in Periyapattana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X