ಮೈಸೂರಿನಲ್ಲಿ ವಿದ್ಯುತ್ ತಂತಿ ಹರಿದು ವ್ಯಕ್ತಿ ಸಾವು
ನಿರ್ಮಾಣದ ಹಂತದಲ್ಲಿರುವ ಮನೆಯೊಂದರ ಕಬ್ಬಿಣ ಕೆಲಸಕ್ಕೆ ಹೋಗಿದ್ದ ನವೀನ್ ಎಂಬ ವ್ಯಕ್ತಿ ಅಧಿಕ ವಿದ್ಯುತ್ ಪ್ರವಹಿಸುವ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು, ಮಾರ್ಚ್ 27: ನಿರ್ಮಾಣದ ಹಂತದಲ್ಲಿರುವ ಮನೆಯೊಂದರ ಕಬ್ಬಿಣ ಕೆಲಸಕ್ಕೆ ಹೋಗಿದ್ದ ನವೀನ್ ಎಂಬ ವ್ಯಕ್ತಿ ಅಧಿಕ ವಿದ್ಯುತ್ ಪ್ರವಹಿಸುವ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಈ ಸಂದರ್ಭದಲ್ಲಿ ನವೀನ್ ಅವರೊಂದಿಗಿದ್ದ ಚಂದ್ರು ಎಂಬ ಇನ್ನೋರ್ವ ವ್ಯಕ್ತಿಗೂ ಸುಟ್ಟ ಗಾಯಗಳಾಗಿದ್ದು, ಅವರೀಗ ಇಲ್ಲಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.[ಹುಣಸೂರು ಬಳಿ ಭೀಕರ ಅಪಘಾತ, ಐವರ ಸಾವು]

ಇವರಿಬ್ಬರೂ ಅಂಬೇಡ್ಕರ್ ಬೀದಿಯ ಚಿನ್ಮಯ್ ಎಂಬವರ ಮನೆಗೆ ಕಬ್ಬಿಣದ ಕೆಲಸ ಮಾಡಲು ತೆರಳಿದ್ದರು. ಈ ವೇಳೆ ಕಬ್ಬಿಣ ಹಿಡಿದು ಕೆಲಸ ಮಾಡುತ್ತಿರುವಾಗ ಅಧಿಕ ವಿದ್ಯುತ್ ಪ್ರವಹಿಸುವ ತಂತಿ ಇವರಿಗೆ ತಗುಲಿದೆ. ತಕ್ಷಣ ಜ್ಞಾನತಪ್ಪಿ ಬಿದ್ದ ಇಬ್ಬರಲ್ಲಿ ಚಂದ್ರು ಬದುಕಿದ್ದರೆ, ನವೀನ್ ಕೊನೆಯುಸಿರೆಳೆದಿದ್ದಾರೆ.[ಮೈಸೂರು: ಮಗಳನ್ನು ಅಪಹರಿಸುತ್ತೇವೆ ಎಂದಿದ್ದಕ್ಕೆ ತಂದೆ ಆತ್ಮಹತ್ಯೆ]

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications