ಎಚ್.ಡಿ.ಕೋಟೆಯಲ್ಲಿ ಹಾವು ಹಿಡಿಯಲು ಹೋಗಿ ಸಾವು ತಂದುಕೊಂಡ ವ್ಯಕ್ತಿ
ಮೈಸೂರು, ಏಪ್ರಿಲ್ 28:ಎಚ್.ಡಿ.ಕೋಟೆ ಪಟ್ಟಣದ ಹ್ಯಾಂಡ್ ಪೋಸ್ಟ್ ಆರ್.ಪಿ. ಸರ್ಕಲ್ನ ಅಂಗಡಿಯಲ್ಲಿದ್ದ ಹಾವನ್ನು ಹಿಡಿಯಲು ಹೋಗಿ ವೇಣು (53) ಎಂಬುವವರು ಸಾವನ್ನಪ್ಪಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವೇಣು ಮೃತಪಟ್ಟಿದ್ದಾರೆ. ಕಳೆದೆರಡು ದಿನಗಳ ಹಿಂದೆ ಅಂಗಡಿಯೊಳಗೆ ಹಾವು ಬಂದಿತ್ತು. ಇದನ್ನು ಕಂಡು ಗಾಬರಿಯಿಂದ ಎಲ್ಲರೂ ಅಂಗಡಿಯಿಂದ ಹೊರಗೆ ಓಡಿ ಬಂದಿದ್ದರು.
ಅಂಗಡಿಯ ಬಾಡಿಗೆ ವಸೂಲಿಗೆ ಬಂದಿದ್ದ ಕಟ್ಟಡದ ಮಾಲೀಕ ವೇಣು ಅವರು ಅಂಗಡಿ ಮಾಲೀಕನಿಗೆ ಗಾಬರಿಯಾಗಬೇಡಿ, ನಾನು ಹಾವನ್ನು ಹಿಡಿಯುತ್ತೇನೆ ಎಂದು ನಾಗರಹಾವನ್ನು ಹಿಡಿದು ಕೈಗೆತ್ತಿಕೊಂಡಿದ್ದಾರೆ. ಆಗ ಚೆಲ್ಲಾಟವಾಡುತ್ತಿದ್ದಾಗ ಹಾವು ಎಡಗೈಗೆ ಕಚ್ಚಿದೆ. ಆದರೂ ಹಾವನ್ನು ಬಲಗೈಯಲ್ಲಿ ಸುತ್ತಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಸ್ನೇಕ್ ಹಾಲಿ ಅವರಿಗೆ ಕರೆ ಮಾಡಿ, ವ್ಯಕ್ತಿಯಿಂದ ಹಾವನ್ನು ಬಿಡಿಸುವಂತೆ ತಿಳಿಸಿದ್ದಾರೆ.ಅವರು ಬಂದು ಹಾವನ್ನು ಬಿಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಸುಮಾರು 30 ವರ್ಷಗಳಿಂದ ಪಟ್ಟಣದ ಹ್ಯಾಂಡ್ಪೋಸ್ಟ್ ಸರ್ಕಲ್ ಬಳಿ ವೇಣು ಕುಟುಂಬ ಸಮೇತ ತಮ್ಮದೇ ಶ್ರೀದೇವಿ ಹೋಟೆಲ್ ನಡೆಸುತ್ತಿದ್ದರು. ನಾಲ್ಕೈದು ವರ್ಷಗಳಿಂದ ಹೋಟೆಲ್ ಮುಚ್ಚಿ ಮಳಿಗೆಯನ್ನು ಬೇರೊಬ್ಬರಿಗೆ ಬಾಡಿಗೆ ಕೊಟ್ಟು ಕೇರಳದ ತ್ರಿಶೂರ್ಲ್ಲಿ ವಾಸವಾಗಿದ್ದರು. ಬಾಡಿಗೆ ಹಣ ತೆಗೆದುಕೊಳ್ಳಲು ಇಲ್ಲಿಗೆ ಬಂದಾಗ ಈ ಘಟನೆ ನಡೆದಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications