ಕರ್ನಾಟಕ ಪಿಯುಸಿ ಫಲಿತಾಂಶ: ಫೇಲಾದ ಮೈಸೂರು ವಿದ್ಯಾರ್ಥಿನಿ ಆತ್ಮಹತ್ಯೆ
ನಿನ್ನೆ ತಾನೇ ಹೊರಬಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.
ಮೈಸೂರು, ಮೇ 12: ಪ್ರತಿ ಬಾರಿ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾದಾಗಲೂ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿ ಮಾಮೂಲಾಗಿದೆ. ಫಲಿತಾಂಶಕ್ಕೂ ಮೊದಲು ಅವರಲ್ಲಿ ಎಷ್ಟೇ ಧೈರ್ಯ ತುಂಬಿದರೂ ಇಂಥ ಘಟನೆಗಳು ಮರುಕಳಿಸುತ್ತಲೇ ಇವೆ. ಅದಕ್ಕೊಂದು ನಿದರ್ಶನ ಇಲ್ಲಿದೆ.
ನಿನ್ನೆ (ಮೇ 11)ತಾನೇ ಹೊರಬಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.[ವಿಶೇಷ ಲೇಖನ: ಪರೀಕ್ಷೆಯಲ್ಲಿ ಫೇಲಾದರೂ ಜೀವನದಲ್ಲಿ ಗೆಲ್ಲಬಹುದು!]

ಮೈಸೂರಿನ ಮಾತೃಮಂಡಳಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮಂಜುಳಾ (17)ಮೃತ ದುರ್ದೈವಿ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ












Click it and Unblock the Notifications