ಮೈಸೂರು: ಚಿನ್ನದ ಪದಕ ಪಡೆದಿದ್ದ ವಿವಿಗೆ ಕುಲಸಚಿವೆಯಾಗಿ ನೇಮಕಗೊಂಡ ವಿಆರ್ ಶೈಲಜಾ
ಮೈಸೂರು, ನವೆಂಬರ್ 22: ಬದುಕು ಯಾವಾಗಲೂ ಹಾಗೆ. ಅದು ಆಕಸ್ಮಿಕಗಳ ಮೊತ್ತ, ಒಂದು ಕಾಲದಲ್ಲಿ ಚಿನ್ನದ ವಿದ್ಯಾರ್ಥಿನಿಯಾಗಿ ಕಾಲೇಜಿನಿಂದ ತೇರ್ಗಡೆಯಾಗಿ ಇದೀಗ ಅದೇ ವಿವಿಗೆ ಕುಲಸಚಿವೆಯಾಗುವ ಭಾಗ್ಯ ತುಂಬಾ ಜನರಿಗೆ ಸಿಗುವುದಿಲ್ಲ.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶೈಲಜಾರನ್ನುಇತ್ತೀಚೆಗೆ ಕರ್ನಾಟಕ ಸರ್ಕಾರ ಮೈಸೂರು ವಿವಿಯ ಕುಲಸಚಿವರಾಗಿ ನೇಮಿಸಿತ್ತು. ಅದರಂತೆ ಸೋಮವಾರ ಬೆಳಗ್ಗೆ ಕ್ರಾಫರ್ಟ್ ಹಾಲ್ಗೆ ಆಗಮಿಸಿ ಹಂಗಾಮಿ ಕುಲಪತಿ ಫ್ರೊ. ರಾಜಶೇಖರ್ ಸಮ್ಮುಖದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.
2001ರಲ್ಲಿ ಪ್ರತಿಷ್ಠಿತ ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ವಿ.ಆರ್.ಶೈಲಜಾ ಅವರು ವಿವಿಧ ವಿಭಾಗಗಳಲ್ಲಿ ಮೂರು ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದಿದ್ದರು. ಇದೀಗ ಕೆಎಎಸ್ ಅಧಿಕಾರಿ ತಾವು ಓದಿದ ವಿಶ್ವವಿದ್ಯಾಲಯಕ್ಕೆ ಕುಲಸಚಿವೆಯಾಗಿ ನೇಮಕಗೊಂಡಿದ್ದಾರೆ. ಪ್ರತಿಭಾವಂತೆಯಾಗಿರುವ ಶೈಲಜಾ ಪದವಿ ವ್ಯಾಸಂಗದ ವೇಳೆ 9 ಚಿನ್ನದ ಪದಕ ಹಾಗೂ 7 ನಗದು ಪುರಸ್ಕಾರಕ್ಕೆ ಶೈಲಜಾ ಭಾಜನರಾಗಿದ್ದರು.

2006ರಲ್ಲಿ ಪ್ರೊಬೇಷನರಿ ಕೆಎಎಸ್ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ ಶೈಲಜಾ, ಮೈಸೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ, ರಾಮನಗರದಲ್ಲಿ ಡಿಯುಡಿಸಿ ವಿಭಾಗದ ಯೋಜನಾ ನಿರ್ದೇಶಕಿಯಾಗಿ, ಕಾವೇರಿ ನೀರಾವರಿ ನಿಗಮದ ಮುಖ್ಯ ಆಡಳಿತಾಧಿಕಾರಿಯಾಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಾಂಡವಪುರ ಉಪವಿಭಾಗದ ಹೆಚ್ಚುವರಿ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ನಂತರ ಮಂಡ್ಯ ಜಿಲ್ಲೆಯ ಎಡಿಸಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

"ಸಾಮಾನ್ಯವಾಗಿ ನಾವು ಓದಿರುವ ಕಾಲೇಜಿಗೆ ಅತಿಥಿಯಾಗಿ ಆಗಮಿಸಿ ಭಾಷಣ ಮಾಡಿದರೆ ಖುಷಿ ಕೊಡುತ್ತದೆ. ಆದರೆ ನನಗೆ ಇದು ಡಬ್ಬಲ್ ಖುಷಿ ಸಿಕ್ಕಿದೆ. ನಾನೇ ಓದಿರುವ ವಿಶ್ವ ವಿದ್ಯಾಲಯಕ್ಕೆ ಕುಲಸಚಿವೆಯಾಗಿ ಬಂದಿರುವ ಸಂತಸ ತಂದಿದೆ. ತಾಯಿ ಚಾಮುಂಡೇಶ್ವರಿ ಆರ್ಶಿವಾದದೊಂದಿಗೆ ಉತ್ತಮ ಕೆಲಸ ಮಾಡುವ ಆಸೆ ಇದೆ " ಎಂದು ಶೈಲಜಾ ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications