ಕೆಆರ್ ಆಸ್ಪತ್ರೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಮೈಸೂರಿನ ಕೆಆರ್ ಆಸ್ಪತ್ರೆಯಿಂದ ಕಟ್ಟಡದಿಂದ ಜಿಗಿದಿದ್ದ, ಉದಯಗಿರಿ ನಿವಾಸಿ-ಹಣ್ಣಿನ ವ್ಯಾಪಾರಿ ಮಂಜುನಾಥ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಘಟನೆ ಬಗ್ಗೆ ಈ ಹಿಂದೆ ಪ್ರಕಟವಾಗಿದ್ದ ವರದಿ ಇಲ್ಲಿದೆ.
***
ಮೈಸೂರು, ಜೂನ್ 26 : ಮೈಸೂರಿನ ಪ್ರತಿಷ್ಠಿತ ಕೆ.ಆರ್. ಆಸ್ಪತ್ರೆಯ ಮೇಲಿನ ಮಹಡಿಯಿಂದ ವ್ಯಕ್ತಿಯೋರ್ವರು ಕೆಳಗೆ ಜಿಗಿದಿರುವ ಘಟನೆ ಸೋಮವಾರ ನಡೆದಿದೆ.
ಕೆ.ಆರ್ ಆಸ್ಪತ್ರೆಯಲ್ಲಿಯೇ ಈ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದ್ದು, ಕೆಆರ್ ಆಸ್ಪತ್ರೆಯ ಮೇಲಿನ ಕಟ್ಟಡದಿಂದ ತಲೆ ತಿರುಗಿ ಬಿದ್ದಿದ್ದಾನೆ. ಆದರೆ ಇದು ಆತ್ಮಹತ್ಯೆ ಯತ್ನವೋ ಅಥವಾ ಆಕಸ್ಮಿಕವೋ ಎಂಬುದು ಸ್ಪಷ್ಟವಾಗಿಲ್ಲ.

ಆತನ ತಲೆಗೆ ತೀವ್ರ ಗಾಯಗಳಾಗಿರುವುದರಿಂದ ಆತ ಪ್ರಜ್ಞೆ ತಪ್ಪಿದ್ದು, ತಲೆ, ಕೈ, ಕಾಲಿಗೆ ಗಂಭೀರ ಗಾಯಗಳಾಗಿವೆ. ತುರ್ತು ಚಿಕಿತ್ಸಾ ಘಟಕದಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ದಾರಿಹೋಕರೊಬ್ಬರು ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಮೇಲ್ನೋಟಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿದಂತೆ ಕಂಡುಬರುತ್ತಿದೆ. ಗೋಡೆಗೆ ಆನಿಕೊಂಡಿದ್ದ ಆ ಯುವಕ ಇದ್ದಕ್ಕಿದ್ದಂತೆ ಜಿಗಿದಿದ್ದಾನೆ.
ಯಾವ ಕಟ್ಟಡದಲ್ಲಿ ಎಷ್ಟನೇ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಆತನ ಸಂಬಂಧಿಕರು ಯಾರೂ ಆತನ ಬಳಿ ಇರಲಿಲ್ಲ ಎನ್ನಲಾಗುತ್ತಿದ್ದು, ಆತ ಯಾಕೆ ಮಹಡಿಯ ಮೇಲಿಂದ ಬಿದ್ದ.
ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣಾ ಪೊಲೀಸರು ಸ್ಥಳಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಕೂಡ ಯಾವುದೇ ಹೇಳಿಕೆ ಇನ್ನೂ ನೀಡಿಲ್ಲ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications