ಕೆಆರ್ ಆಸ್ಪತ್ರೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಮೈಸೂರಿನ ಕೆಆರ್ ಆಸ್ಪತ್ರೆಯಿಂದ ಕಟ್ಟಡದಿಂದ ಜಿಗಿದಿದ್ದ, ಉದಯಗಿರಿ ನಿವಾಸಿ-ಹಣ್ಣಿನ ವ್ಯಾಪಾರಿ ಮಂಜುನಾಥ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಘಟನೆ ಬಗ್ಗೆ ಈ ಹಿಂದೆ ಪ್ರಕಟವಾಗಿದ್ದ ವರದಿ ಇಲ್ಲಿದೆ.
***
ಮೈಸೂರು, ಜೂನ್ 26 : ಮೈಸೂರಿನ ಪ್ರತಿಷ್ಠಿತ ಕೆ.ಆರ್. ಆಸ್ಪತ್ರೆಯ ಮೇಲಿನ ಮಹಡಿಯಿಂದ ವ್ಯಕ್ತಿಯೋರ್ವರು ಕೆಳಗೆ ಜಿಗಿದಿರುವ ಘಟನೆ ಸೋಮವಾರ ನಡೆದಿದೆ.
ಕೆ.ಆರ್ ಆಸ್ಪತ್ರೆಯಲ್ಲಿಯೇ ಈ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದ್ದು, ಕೆಆರ್ ಆಸ್ಪತ್ರೆಯ ಮೇಲಿನ ಕಟ್ಟಡದಿಂದ ತಲೆ ತಿರುಗಿ ಬಿದ್ದಿದ್ದಾನೆ. ಆದರೆ ಇದು ಆತ್ಮಹತ್ಯೆ ಯತ್ನವೋ ಅಥವಾ ಆಕಸ್ಮಿಕವೋ ಎಂಬುದು ಸ್ಪಷ್ಟವಾಗಿಲ್ಲ.

ಆತನ ತಲೆಗೆ ತೀವ್ರ ಗಾಯಗಳಾಗಿರುವುದರಿಂದ ಆತ ಪ್ರಜ್ಞೆ ತಪ್ಪಿದ್ದು, ತಲೆ, ಕೈ, ಕಾಲಿಗೆ ಗಂಭೀರ ಗಾಯಗಳಾಗಿವೆ. ತುರ್ತು ಚಿಕಿತ್ಸಾ ಘಟಕದಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ದಾರಿಹೋಕರೊಬ್ಬರು ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಮೇಲ್ನೋಟಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿದಂತೆ ಕಂಡುಬರುತ್ತಿದೆ. ಗೋಡೆಗೆ ಆನಿಕೊಂಡಿದ್ದ ಆ ಯುವಕ ಇದ್ದಕ್ಕಿದ್ದಂತೆ ಜಿಗಿದಿದ್ದಾನೆ.
ಯಾವ ಕಟ್ಟಡದಲ್ಲಿ ಎಷ್ಟನೇ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಆತನ ಸಂಬಂಧಿಕರು ಯಾರೂ ಆತನ ಬಳಿ ಇರಲಿಲ್ಲ ಎನ್ನಲಾಗುತ್ತಿದ್ದು, ಆತ ಯಾಕೆ ಮಹಡಿಯ ಮೇಲಿಂದ ಬಿದ್ದ.
ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣಾ ಪೊಲೀಸರು ಸ್ಥಳಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಕೂಡ ಯಾವುದೇ ಹೇಳಿಕೆ ಇನ್ನೂ ನೀಡಿಲ್ಲ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications