ಮೈಸೂರಿನಲ್ಲಿ ಮನೆಮಗುವಿನ ತಲೆಯನ್ನೇ ಕಚ್ಚಿದ ಸಾಕುನಾಯಿ
ಮೈಸೂರು, ಸೆಪ್ಟೆಂಬರ್ 8 : ನಾಯಿ ನಂಬಿಕಸ್ಥ ಪ್ರಾಣಿ. ಅದು ಮಾಲಿಕನ ಸೇವೆಗೆ ಸದಾ ನಿಂತಿರುತ್ತದೆ. ತನ್ನನ್ನು ಸಾಕಿದವರಿಗೆ ಏನಾದರೂ ಆದರೆ ಊಟ ನಿದ್ದೆ ಬಿಟ್ಟು ಹಿಂದೆ ಮುಂದೆ ಸುತ್ತಾಡುತ್ತಲೇ ಇರುತ್ತದೆ. ಅಂಥ ನಾಯಿ ತನ್ನನ್ನು ಸಾಕಿದವರನ್ನೂ ಲೆಕ್ಕಿಸದೇ ತಿರುಗಿ ಬಿದ್ದರೆ? ಅಂತಹ ಭೀಕರ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.
ಮನೆಯಲ್ಲಿ ಪ್ರೀತಿಯಿಂದ ಸಾಕಿದ ಶ್ವಾನವೇ ಮನೆಯ ಮಾಲಿಕನ ಮಗಳ ತಲೆಗೆ ಬಲವಾಗಿ ಕಚ್ಚಿದ ಪರಿಣಾಮ ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಟ್ಟಗಳ್ಳಿ ನಿವಾಸಿ ಅಜಯ್ ಎಂಬವರು ರಾಟ್ ವೇಲರ್ ಎಂಬ ನಾಯಿಯನ್ನು ಸಾಕಿದ್ದರು. ಬುಧವಾರ ಮಧ್ಯಾಹ್ನ ಅವರ ಮುದ್ದಿನ ಮಗಳು ಅಮೋಘವರ್ಷಾಳ ತಲೆಯನ್ನು ನಾಯಿ ಬಲವಾಗಿ ಕಚ್ಚಿ ಹಿಡಿದಿದ್ದು, ಮಗು ನಾಯಿಯಿಂದ ಬಿಡಿಸಿಕೊಳ್ಳಲು ಕೂಗಾಡಿದೆ.

ಇದನ್ನು ನೋಡಿದ ಅಕ್ಕಪಕ್ಕದವರು ಮನೆಯವರನ್ನು ಕೂಗಿ ಕರೆದಿದ್ದು, ಮನೆಯವರು ನಾಯಿ ಹೊಡೆದು ಮಗುವಿನ ತಲೆಯನ್ನು ಬಿಡಿಸುವಲ್ಲಿ ಸಫಲರಾಗಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸಾಲಬಾಧೆ ಹಿನ್ನೆಲೆ ರೈತ ನೇಣಿಗೆ ಶರಣು
ಸಾಲಬಾಧೆ ತಾಳಲಾರದೇ ರೈತನೋರ್ವ ನೇಣಿಗೆ ಶರಣಾದ ಘಟನೆ ಎಚ್ ಡಿ ಕೋಟೆ ತಾಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಮಹೇಶ್ ಆರಾಧ್ಯ ಅವರ ಮಗ ಪ್ರದೀಪ್ (28) ಎಂದು ಗುರುತಿಸಲಾಗಿದೆ. ಈತ ಸುಮಾರು ಆರು ಲಕ್ಷ ರೂ.ಸಾಲ ಮಾಡಿದ್ದ. ಆದರೆ ಸಾಲ ಮರುಪಾವತಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications