ಅಪರಾಧ-ಅಪಘಾತ, ಮೈಸೂರಿನಲ್ಲಿ 2 ಪ್ರತ್ಯೇಕ ಪ್ರಮಾದಗಳು
ಮೈಸೂರು, ಫೆಬ್ರವರಿ 7 : ಜಡೇಜಾ ರವಿ ಕೊಲೆ ಪ್ರಕರಣದಲ್ಲಿ ಸಿಲುಕಿ ಇತ್ತೀಚೆಗೆ ಜೈಲಿನಿಂದ ಹೊರಬಂದ ರೌಡಿ ಶೀಟರ್ ಅಶೋಕ್ ಅಲಿಯಾಸ್ ಪೈ ಕೊಲೆಗೆ ಯತ್ನ ನಡೆದಿದೆ.
ಮಂಡ್ಯ ಜಿಲ್ಲೆ ಮಾದರಹಳ್ಳಿಯಲ್ಲಿ ಪತ್ನಿ ಮನೆಯಲ್ಲಿದ್ದ ಅಶೋಕ್ ಅಲಿಯಾಸ್ ಪೈ ಮೇಲೆ ಸೋಮವಾರ ತಡರಾತ್ರಿ ಮೂವತ್ತಕ್ಕೂ ಹೆಚ್ಚು ರೌಡಿಗಳು ಆಕ್ರಮಣವೆಸಗಿ ಹತ್ಯೆಗೆ ಯತ್ನಿಸಿದ್ದು, ಸುಮಾರು 30 ನಿಮಿಷ ಸೆಟಸಾಟ ನಡೆಸಿದ ಪೈ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.

ಆತನ ಹತ್ಯೆಯ ಸಂಚನ್ನು ಜಡೇಜಾ ಪರಮಾಪ್ತ ಮಂಜುನಾಥ್ ನಡೆಸಿರಬೇಕೆಂದು ಶಂಕಿಸಲಾಗಿದ್ದು, ಇದೀಗ ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ರೌಡಿ ನಿಗ್ರಹದಳ ರೌಡಿಶೀಟರ್ ಗಳ ಮೇಲೆ ಹದ್ದಿನ ಕಣ್ಣಿರಿಸಿದ್ದು, ಪ್ರಮುಖ ಬೀದಿ, ಪ್ರಮುಖ ವಸತಿಗೃಹಗಳ ತಪಾಸಣೆ ನಡೆಸಿದೆ.
ಪೈ ಹತ್ಯೆ ಯತ್ನ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕೆ.ಎಂ.ದೊಡ್ಡಿ ಪೊಲೀಸರು ಸ್ಥಳದಲ್ಲಿದ್ದ ಒಂದು ಮೊಬೈಲ್, ಲಾಂಗ್, ಖಾರದ ಪುಡಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆ ವೈಷಮ್ಯವೇ ಪೈ ಕೊಲೆ ಯತ್ನಕ್ಕೆ ಕಾರಣ ಎನ್ನಲಾಗಿದ್ದು, ಮಂಜುನಾಥ್ ಮತ್ತವರ ಸಹಚರರನ್ನು ಬಂಧಿಸಲು ಪೊಲೀಸರು ಪಣ ತೊಟ್ಟಿದ್ದಾರೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಿ ಸರ್ಪಗಾವಲು ಹಾಕಿದ್ದಾರೆ.
ಬೈಕ್-ಕಾರು ಡಿಕ್ಕಿ : ಕಾಲುವೆಗೆ ಉರುಳಿದ ಕಾರು
ಮೈಸೂರು: ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಚಾಲಕನ ಸೊಂಟ ಮುರಿತಕ್ಕೊಳಗಾದ ಘಟನೆ ಕೆ.ಆರ್.ಪೇಟೆ ತಾಲೂಕಿನಲ್ಲಿ ಜರುಗಿದೆ.

ಕೆ.ಆರ್.ಪೇಟೆ ತಾಲೂಕಿನ ಗಾಂಧಿನಗರದಲ್ಲಿ ಬೈಕ್ ಮತ್ತು ಟ್ರಾಫಿಕ್ ಪಿಎಸ್ಐ ಚಲಿಸುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರು ಕಾಲುವೆಗೆ ಉರುಳಿ ಬಿದ್ದಿದೆ. ಮದ್ದೂರು ಟ್ರಾಫಿಕ್ ಠಾಣೆಯ ಪಿಎಸ್ಐ ಸವಿತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಯೋಗೇಶ್ ಸೊಂಟ ಮುರಿತಕ್ಕೊಳಗಾಗಿದ್ದಾರೆ. ಪಿಎಸ್ ಐ ಸವಿತಾ ನ್ಯಾಯಾಲಯಕ್ಕೆಂದು ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬೈಕ್ ಚಾಲಕ ಗೋವಿಂದ ಎಂಬವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಗಾಯಾಳುಗಳಿಗೆ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications