ಬಡವರ ಬಂಧು ಯೋಜನೆ: ಹೆಚ್ಚಿನ ಎಸ್ಸಿ-ಎಸ್ಟಿ ಗಳಿಗೆ ಸಾಲ ವಿತರಣೆ
ಮೈಸೂರು: ಈ ಬಾರಿ 14 ಸಾವಿರ ಕೋಟಿ ರುಪಾಯಿ ಸಾಲವನ್ನು ರೈತರಿಗೆ ಕೊಡಬೇಕು. ಅಲ್ಲದೇ ಹೊಸ ಸದಸ್ಯರಿಗೆ ಸಾಲ ವಿತರಣೆಯನ್ನು ಕಡ್ಡಾಯವಾಗಿ ನೀಡಲೇಬೇಕು. ಅದರ ಜೊತೆಗೆ ಎಸ್ಸಿ-ಎಸ್ಟಿ ಸಮುದಾಯದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಣೆಯಾಗಬೇಕು ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.
Recommended Video
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಮೈಸೂರು ಪ್ರಾಂತದ ಸಹಕಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು.
ಎಸ್ಸಿ-ಎಸ್ಟಿ ಸಮುದಾಯದವರಿಗೆ ಅಲ್ಪ ಪ್ರಮಾಣದ ಕೃಷಿ ಸಾಲ ವಿತರಣೆಯಾಗಿದ್ದು, ಮುಂದೆ ಹೀಗಾಗಬಾರದು. ಹೆಚ್ಚಿನ ಫಲಾನುಭವಿಗಳಿಗೆ ಸಾಲ ವಿತರಣೆ ಮಾಡಬೇಕು ಎಂದು ಸಚಿವರು ತಿಳಿಸಿದರು. ಸಹಕಾರ ಸಂಘಗಳ ಹಣ ದುರುಪಯೋಗಕ್ಕೆ ಸಂಬಂಧಪಟ್ಟಂತೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಲು ಕ್ರಮವಹಿಸಿ ಎಂದು ಸಚಿವರು ಹೇಳಿದರು.

ಸಹಕಾರ ಸಂಘಗಳ ಹಣ ದುರುಪಯೋಗ ಸಹಿಸಲ್ಲ
ಸಹಕಾರ ಸಂಘಗಳ ಹಣ ದುರುಪಯೋಗ ಪ್ರಕರಣವನ್ನು ಸಹಿಸುವುದಿಲ್ಲ. ಅಂಥವರ ಮೇಲೆ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣ ಹಾಕಿ ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಪ್ರಕರಣಗಳ ಮೇಲೆ ಶೀಘ್ರವಾಗಿ ಕ್ರಮ ತೆಗೆದುಕೊಳ್ಳಿ. ಆದಷ್ಟು ಜನರ ಪರವಾಗಿ ಕಾರ್ಯನಿರ್ವಹಿಸಿ. ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತಂದರೆ ಬಗಹರಿಸುವೆ. ಕೆಲಸ ಮಾಡಲು ಆಗುವುದಿಲ್ಲ ಎಂದಾದರೆ ತಿಳಿಸಿ, ನಿಮ್ಮನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ಕೊಟ್ಟರು.

ಸುಸ್ತಿ ಸಾಲ ಬೇಗ ವಸೂಲಾಗಲಿ
ಹೌಸಿಂಗ್ ಸೊಸೈಟಿಯಲ್ಲಿ ಸಮಸ್ಯೆ ಇದ್ದರೆ ಗಮನ ಕೊಡುತ್ತೇನೆ. ನಾನೂ ಈ ಮೊದಲು ಸುಮಾರು 20 ವರ್ಷ ಅಧ್ಯಕ್ಷನಾಗಿದ್ದೆ. ಹಾಗಾಗಿ ಎಲ್ಲ ಕೆಲಸಗಳ ಬಗ್ಗೆ ನಿಗಾವಹಿಸುತ್ತೇನೆ. ಜೊತೆಗೆ ಮುಡಾ ಸೇರಿದಂತೆ ಹಲವು ಕಡೆ ಇರುವ ಸಮಸ್ಯೆಗಳನ್ನು ಒಂದೊಂದಾಗಿ ಗಮನಹರಿಸಿ ಬಗೆಹರಿಸುತ್ತೇನೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಕಾಸ್ಕಾರ್ಡ್ ಬ್ಯಾಂಕ್ ಗಳಲ್ಲಿ ಸಾಲ ವಿತರಣೆ ಹಾಗೂ ವಸೂಲಾತಿಗಳ ಪ್ರಮಾಣ ಬಹಳ ಕಡಿಮೆ ಇದ್ದು, ಪ್ರಗತಿ ಸಾಧಿಸಬೇಕು. ಸುಸ್ತಿ ಸಾಲಗಳ ಪ್ರಮಾಣ ಹೆಚ್ಚಾಗಿದ್ದು, ಅವುಗಳ ವಸೂಲಾತಿಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಸಾಲ ವಿತರಣೆ ಗುರಿ ಹೆಚ್ಚಿಸಿ
ಅಲ್ಪಾವಧಿ ಸಾಲ ಸೇರಿದಂತೆ ಬಹುತೇಕ ಸಾಲ ವಿತರಣೆ ಇನ್ನೂ ಮೊದಲ ಹಂತದಲ್ಲೇ ಇದೆ. ಆದರೆ, ಸಭೆ ನಡೆಸಿದ ಮೇಲಷ್ಟೇ ಸಾಲ ವಿತರಣೆ ಎಂಬ ಕಟ್ಟುಪಾಡಿಗೆ ಬೀಳದೇ ಶೀಘ್ರ ಸಾಲ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಜೊತೆಗೆ ಪ್ರತಿವರ್ಷ ಸಾಲ ವಿತರಣೆ ಪ್ರಮಾಣದ ಗುರಿಯನ್ನು ಹಾಕಿಕೊಳ್ಳುವಾಗ ಹೆಚ್ಚಿನ ವಿತರಣೆ ಮಾಡುವ ಬಗ್ಗೆ ಗುರಿ ನಿಗದಿಪಡಿಸಿಕೊಂಡರೆ ಸಾಲ ವಿತರಣೆ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳಿಗೆ ಹೇಳಿದರು.

ಹೊಸ ಸದಸ್ಯರಿಗೆ ಸಾಲ ವಿತರಣೆಯಾಗಬೇಕು
ಈ ಬಾರಿ ಮಳೆ ಉತ್ತಮವಾಗಲಿದೆ ಎಂಬ ವರದಿ ಬಂದಿದೆ. ಹೀಗಾಗಿ ಸರಿಯಾದ ಸಮಯಕ್ಕೆ ರೈತರಿಗೆ ಸಾಲ ವಿತರಣೆ ಮಾಡದಿದ್ದರೆ ಉಪಯೋಗವಾಗದು. ಹೀಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಯಿತು. ಹಳಬರಿಗಷ್ಟೇ ಕೆಲವು ಕಡೆ ಸಾಲ ನೀಡಲಾಗುತ್ತಿದ್ದು, ಹೊಸ ಸದಸ್ಯರಿಗೆ ಸಾಲ ವಿತರಣೆಯಾಗಬೇಕು. ಈ ಬಗ್ಗೆ ಗಮನಹರಿಸಿ ಎಂದರು.
ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್. ನವೀನ್, ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಆರ್.ಪ್ರಕಾಶ್ ರಾವ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications