ಮೈಸೂರು: ಕಾಡಾನೆಗೆ ಹೆದರಿ ಮರದ ಮೇಲೆ ಮನೆ ಮಾಡಿದ ಮಹಿಳೆ
ಮೈಸೂರು, ಆಗಸ್ಟ್ 29: ಗಂಡನ ಕಳೆದುಕೊಂಡು ಕೂಲಿ ಮಾಡಿ ಬದುಕುತ್ತಿರುವ ಆದಿವಾಸಿ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳನ್ನು ಆಶ್ರಮಶಾಲೆಯಲ್ಲಿ ಬಿಟ್ಟು ತಾನು ಕಾಡಾನೆಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮರದ ಮೇಲೆ ಅಟ್ಟಳಿಗೆ ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹರವೆ ಮೀಸಲು ಅರಣ್ಯಕ್ಕೆ ಸೇರಿದ ಕಾಡಂಚಿನಲ್ಲಿ ಕರಡಿಬೊಕ್ಕೆ ಗಿರಿಜನ ಹಾಡಿಯ ವಿಧವೆ ಲತಾ ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳೋದಕ್ಕೆ ಮಾಡಿದ ಉಪಾಯ ಇದು.

ಕರಡಿಬೊಕ್ಕೆ ಗಿರಿಜನ ಹಾಡಿಯಲ್ಲಿ 22 ಕುಟುಂಬಗಳಿದ್ದು ಇವರೆಲ್ಲ ಜೇನುಕುರುಬ ಜನಾಂಗಕ್ಕೆ ಸೇರಿದವರಾಗಿದ್ದು, ಕಳೆದ 65 ವರ್ಷಗಳಿಂದ ಜೋಪಡಿ ಹಾಕಿಕೊಂಡು ಅದರ ಸುತ್ತಮುತ್ತ ಖಾಲಿ ಜಾಗಗಳಲ್ಲಿ ಗೆಡ್ಡೆ ಗೆಣಸುಗಳನ್ನು ಬೆಳೆಸಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಈ ಮಧ್ಯೆ ಕಳೆದ ಕೆಲವು ಸಮಯಗಳಿಂದ ಕಾಡಾನೆಗಳು ಹಾಡಿಗೆ ನುಗ್ಗಿ ಮನೆಗಳನ್ನು ನಾಶ ಮಾಡಿದ್ದಲ್ಲದೆ, ಅವರು ಬೆಳೆಸಿದ ಗೆಡ್ಡೆ ಗೆಣಸು ತಿಂದು ಹಾಕಿದ್ದವು. ಆ ಸಮಯದಲ್ಲಿ ಗುಡಿಸಲಲ್ಲಿ ಒಬ್ಬರೇ ಇದ್ದ ಲತಾ ಮನೆಯಿಂದ ಹೊರ ಓಡಿ ಜೀವ ರಕ್ಷಿಸಿಕೊಂಡಿದ್ದರು.
ಆವತ್ತು ಆಕೆಯ ಗುಡಿಸಲನ್ನು ಕಾಡಾನೆ ಧ್ವಂಸಗೊಳಿಸಿತ್ತು. ಇದಾದ ಬಳಿಕ ಜೀವಭಯದಲ್ಲಿರುವ ಲತಾ ಪಕ್ಕದ ಮರದಲ್ಲೊಂದು ಅಟ್ಟಳಿಗೆ(ಜೋಪಡಿ) ನಿರ್ಮಿಸಿಕೊಂಡು ಅದರಲ್ಲಿಯೇ ರಾತ್ರಿ ಕಳೆಯುತ್ತಿದ್ದಾರೆ.

ಲತಾ ಅವರ ಪತಿ ಗಣೇಶ್ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ಇಬ್ಬರು ಚಿಕ್ಕಮಕ್ಕಳು ಅಬ್ಬಳತಿ ಗಿರಿಜನ ಆಶ್ರಮ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಎರಡು ಮಕ್ಕಳು ಅಲ್ಲಿಯೇ ಇರುವುದರಿಂದ ಲತಾ ಮಾತ್ರ ತನ್ನ ಹಾಡಿಯಂಚಿನ ಪುಟ್ಟ ಗುಡಿಸಲಲ್ಲಿ ಜೀವನ ಸಾಗಿಸುತ್ತಿದ್ದಳು. ಆದರೆ ಕಾಡಾನೆ ಮನೆಯನ್ನು ಜಖಂ ಮಾಡಿದ್ದರಿಂದ ಮರವೇ ಆಸರೆಯಾಗಿದೆ.
ಕೂಲಿ ಕೆಲಸ ಮಾಡುವ ಲತಾ ಹಗಲು ಕೂಲಿಗೆ ಹೋದ ಮನೆಯಲ್ಲೇ ಊಟ ಮಾಡಿ ಬಂದು ರಾತ್ರಿಯಾಗುವ ಮುನ್ನ ಕೆಲಸ ಮುಗಿಸಿಕೊಂಡು ಮರವೇರುತ್ತಿದ್ದಾರೆ. ಈಕೆಗೆ ಪಡಿತರ ಚೀಟಿ ಇಲ್ಲ. ಇರುವ ಜಾಗಕ್ಕೆ ಹಕ್ಕುಪತ್ರವೂ ಇಲ್ಲ ಹೀಗಾಗಿ ಸರ್ಕಾರದ ಸೌಲಭ್ಯ ಮರೀಚಿಕೆಯಾಗಿದೆ.
ಹಾಡಿ ಮತ್ತು ಅರಣ್ಯವನ್ನು ಒಳಗೊಂಡಂತೆ ಕಂದಕ ಮತ್ತು ಸೋಲಾರ್ ಬೇಲಿಯನ್ನು ನಿರ್ಮಿಸದೆ ಇರುವುದರಿಂದ ಕಾಡು ಪ್ರಾಣಿಗಳು ಬರುತ್ತಿವೆ ಎನ್ನುವದು ಹಾಡಿವಾಸಿಗಳ ಆರೋಪವಾಗಿದೆ.
ಇನ್ನಾದರೂ ಇತ್ತ ಸಂಬಂಧಿಸಿದವರು ಗಮನಹರಿಸಿ ಬಡ ಮಹಿಳೆಗೊಂದು ಸೂರು ಕಲ್ಪಿಸಿಕೊಡುವ ಕೆಲಸವನ್ನು ಮಾಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications