ಆಷಾಢ ಮಾಸದ 3ನೇ ಶುಕ್ರವಾರ: ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೈಸೂರು, ಜುಲೈ 10: ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ಅವರ ನೇತೃತ್ವದಲ್ಲಿ ಶುಕ್ರವಾರ ಮುಂಜಾನೆಯಿಂದಲೇ ದೇವರಿಗೆ ವಿವಿಧ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ ದೇವಸ್ಥಾನದ ಒಳ ಆವರಣದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಕೇವಲ ನಿತ್ಯ ಪೂಜೆಗೆ ಸೀಮಿತವಾಗಿರುವ ಕಾರಣದಿಂದ ಮೂರನೇ ಶುಕ್ರವಾರವು ಸಹ ದೇವರಿಗೆ ಅಭಿಷೇಕ ನಂತರ ವಿಶೇಷ ಪೂಜೆ ನಡೆಯಿತು.

ದೇವಸ್ಥಾನಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಿರುವುದರಿಂದ ಪೂಜಾ ವಿಧಿ ವಿಧಾನಗಳು ನೆರವೇರಿದ ಬಳಿಕ ದೇವಸ್ಥಾನವನ್ನು ಮುಚ್ಚಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಮೂರನೇ ಶುಕ್ರವಾರವೂ ಚಾಮುಂಡಿ ಬೆಟ್ಟ ಖಾಲಿ ಖಾಲಿಯಾಗಿತ್ತು.

ದೇವಿಯ ದರ್ಶನ ಪಡೆದ ನಟ ದರ್ಶನ್
ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ತಮ್ಮ ಸ್ನೇಹಿತ ಉಪಮೇಯರ್ ಸಿ.ಶ್ರೀಧರ್ ಜೊತೆಗೂಡಿ ಬೆಟ್ಟಕ್ಕೆ ಆಗಮಿಸಿದ ದರ್ಶನ್, ದೇವರಿಗೆ ವಿಶೇಷ ಪೊಜೆ ಸಲ್ಲಿಸಿದರು. ಆಷಾಢ ಮಾಸದಲ್ಲಿ ಸ್ನೇಹಿತರ ಜೊತೆಗೂಡಿ ಚಾಮುಂಡೇಶ್ವರಿ ದರ್ಶನ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications