ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಷಾಢ ಮಾಸದ 3ನೇ ಶುಕ್ರವಾರ: ಚಾಮುಂಡೇಶ್ವರಿಗೆ ವಿಶೇಷ ಪೂಜೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 10: ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ.‌ಶಶಿಶೇಖರ್ ದೀಕ್ಷಿತ್ ಅವರ ನೇತೃತ್ವದಲ್ಲಿ ಶುಕ್ರವಾರ ಮುಂಜಾನೆಯಿಂದಲೇ ದೇವರಿಗೆ ವಿವಿಧ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ ದೇವಸ್ಥಾನದ ಒಳ ಆವರಣದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು.

ಆಷಾಢ ಶುಕ್ರವಾರದಲ್ಲಿ ಭಕ್ತರಿಲ್ಲದೆ ಬಣಗುಡುತ್ತಿದೆ ಚಾಮುಂಡಿ ಬೆಟ್ಟಆಷಾಢ ಶುಕ್ರವಾರದಲ್ಲಿ ಭಕ್ತರಿಲ್ಲದೆ ಬಣಗುಡುತ್ತಿದೆ ಚಾಮುಂಡಿ ಬೆಟ್ಟ

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಕೇವಲ ನಿತ್ಯ ಪೂಜೆಗೆ ಸೀಮಿತವಾಗಿರುವ ಕಾರಣದಿಂದ ‌ಮೂರನೇ ಶುಕ್ರವಾರವು ಸಹ ದೇವರಿಗೆ ಅಭಿಷೇಕ ನಂತರ ವಿಶೇಷ ಪೂಜೆ ನಡೆಯಿತು.

Aashada 3rd Week Simple Puja Performed At Chamundi Hill

ದೇವಸ್ಥಾನಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಿರುವುದರಿಂದ ಪೂಜಾ ವಿಧಿ ವಿಧಾನಗಳು ನೆರವೇರಿದ ಬಳಿಕ ದೇವಸ್ಥಾನವನ್ನು ಮುಚ್ಚಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಮೂರನೇ ಶುಕ್ರವಾರವೂ ಚಾಮುಂಡಿ ಬೆಟ್ಟ ಖಾಲಿ ಖಾಲಿಯಾಗಿತ್ತು.

Aashada 3rd Week Simple Puja Performed At Chamundi Hill

ದೇವಿಯ ದರ್ಶನ ಪಡೆದ ನಟ ದರ್ಶನ್

ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ತಮ್ಮ ಸ್ನೇಹಿತ ಉಪಮೇಯರ್ ಸಿ.ಶ್ರೀಧರ್ ಜೊತೆಗೂಡಿ ಬೆಟ್ಟಕ್ಕೆ ಆಗಮಿಸಿದ ದರ್ಶನ್, ದೇವರಿಗೆ‌ ವಿಶೇಷ ಪೊಜೆ ಸಲ್ಲಿಸಿದರು. ಆಷಾಢ ಮಾಸದಲ್ಲಿ ಸ್ನೇಹಿತರ ಜೊತೆಗೂಡಿ ಚಾಮುಂಡೇಶ್ವರಿ ದರ್ಶನ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

English summary
On the third Friday of Ashadha's month, a special pooja was performed to the goddess Chamundeswari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X