ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಪ್ರತಿಭಟನೆ
ಮೈಸೂರು, ನವೆಂಬರ್ 6: ರಿಪಬ್ಲಿಕ್ ಟಿವಿ ಮಾಧ್ಯಮದ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಮೂಲಭೂತ ಸ್ವಾತಂತ್ರ್ಯದ ಮೇಲೆ ತುರ್ತು ಪರಿಸ್ಥಿತಿಯ ಹೇರಿಕೆಯಾಗಿದೆ ಎಂದು ಆರೋಪಿಸಿದರು.
ಅರ್ನಬ್ ಗೋಸ್ವಾಮಿ ಅವರನ್ನು ಅವರ ನಿವಾಸದಿಂದ ಬುಧವಾರ ಬೆಳಿಗ್ಗೆ ಬಂಧಿಸಿರುವುದು ತುರ್ತು ಪರಿಸ್ಥಿತಿಯ ದಿನಗಳಲ್ಲಿ ಮೌಲಿಕ ಸ್ವಾತಂತ್ರ್ಯದ ಮೇಲೆ ದಾಳಿ ಮಾಡಿದ ಹಾಗಿದೆ. ಕಾನೂನು ಬಾಹಿರವಾಗಿ ಬಂಧಿಸಿರುವುದು ಇಡೀ ದೇಶದ ಪತ್ರಿಕಾ ಸ್ವಾತಂತ್ರ್ಯವನ್ನು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸುವ ಷಡ್ಯಂತ್ರವಾಗಿದೆ ಎಂದರು.

ಅರ್ನಬ್ ಗೋಸ್ವಾಮಿ ಪಾಲಘರ್ ನಲ್ಲಿ ಸಾಧುಗಳ ಹತ್ಯೆ ನಡೆದಿರುವ ಬಗ್ಗೆ ಮತ್ತು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನೇಕ ಕಾನೂನು ಬಾಹಿರ ಕೃತ್ಯಗಳ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಕನ್ನಡಿ ಹಿಡಿದಂತೆ ತೋರಿಸಿದ್ದರು. ಈ ಎಲ್ಲ ಘಟನೆಗಳನ್ನು ವರದಿ ಮಾಡಿರುವುದು ಪ್ರಜಾಪ್ರಭುತ್ವದಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಅಸಹಿಷ್ಣುವಾಗಿದೆ ಎಂದು ಕಿಡಿಕಾರಿದರು.
ಮಹಾರಾಷ್ಟ್ರ ಪೊಲೀಸರ ನಿಖೆಯ ನಂತರ 2018ರಲ್ಲಿ ನಡೆದ ಆತ್ಮಹತ್ಯೆಯ ಕೇಸ್ ಅಂತ್ಯಕಂಡಿತ್ತು. ಆದರೆ ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಆ ಕೇಸನ್ನು ಮತ್ತೆ ಓಪನ್ ಮಾಡಿ ಮಹಾರಾಷ್ಟ್ರ ಸರ್ಕಾರವು ತನ್ನ ಪ್ರಜಾಪ್ರಭುತ್ವ ವಿರೋಧಿ ಮುಖವಾಡವನ್ನು ಬಯಲು ಮಾಡಿಕೊಂಡಿದೆ.
ಬಂಧನದ ಸಂದರ್ಭದಲ್ಲಿ ಅರ್ನಬ್ ಗೋಸ್ವಾಮಿಯವರ ಮನೆಯ ಸದಸ್ಯರೊಂದಿಗೆ ಪೊಲೀಸರು ನಡೆದುಕೊಂಡ ವರದಿಯು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿನ ಭಯಾನಕ ಕರಾಳ ದಿನಗಳನ್ನು ನೆನಪಿಸಿ ಕೊಡುತ್ತವೆ. ಅರ್ನಬ್ ಗೋಸ್ವಾಮಿ ಬಂಧನವು ಮಹಾರಾಷ್ಟ್ರದಲ್ಲಿನ ಮೌಲಿಕ ಸ್ವಾತಂತ್ರ್ಯದ ಮೇಲಿನ ದೌರ್ಜನ್ಯ ಮತ್ತು ರಾಜ್ಯ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಬಯಲಿಗೆ ಬರುತ್ತಿದೆ ಎಂದು ಆರೋಪಿಸಿದರು.
ಅರ್ನಬ್ ಗೋಸ್ವಾಮಿಯವರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಮತ್ತು ಮಹಾರಾಷ್ಟ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳನ್ನು ನಿಲ್ಲಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications