ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ಮೈಸೂರು, ಹಾಸನದಲ್ಲಿ ಎಸಿಬಿ ದಾಳಿ
ಮೈಸೂರು, ಜೂನ್ 21: ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಹಾಸನ ಮತ್ತು ಮೈಸೂರಿನ ಜಿಲ್ಲಾ ಪಂಚಾಯತ್ ಜ್ಯೂನಿಯರ್ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದಾಗ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ
ನಗರದ ಗಾಯತ್ರಿಪುರಂ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯಿತಿ ಜೂನಿಯರ್ ಇಂಜಿನಿಯರ್ ಹರ್ಷದ್ ಭಾಷಾ ನಿವಾಸದ ಮೇಲೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ರಾಜ್ಯದ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ಈ ದಾಳಿ ನಡೆದಿದೆ. ಹಾಸನದಲ್ಲಿಯೂ ಸಹಾಯಕ ಎಂಜಿನಿಯರ್ ಚನ್ನೇಗೌಡ ನಿವಾಸದ ಮೇಲೆ ದಾಳಿಯಾಗಿದೆ. ಎಸಿಬಿ ಡಿವೈಎಸ್ಪಿ ಪೂರ್ಣಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Comments
English summary
ACB raids on Mysuru and Hassan Zilla panchayath engineers home today. In Mysuru, Harshad bhasha house has been raid and officials are still searching documents.
Story first published: Friday, June 21, 2019, 15:01 [IST]