ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ
ಮೈಸೂರು, ಫೆಬ್ರವರಿ 19: ನ್ಯಾಯಾಲಯ ತೀರ್ಪನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಕೇಳಿಬಂದಿದೆ.
ಕರ್ನಾಟಕ ಹೈಕೋರ್ಟ್ ಈ ಹಿಂದೆಯೇ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಡಲು ತೀರ್ಪು ನೀಡಿ ಆದೇಶಿಸಿತ್ತು. ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಮೈಸೂರಿನ ನಿವಾಸಿ ಎಚ್.ಬಿ.ಅಶೋಕ್ ಸೇರಿ 5 ಮಂದಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲಿಸಿದ್ದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ಜಮೀನು ಖಾತೆ ಮಾಡಿಕೊಡಲು ಹಲವು ಸಮಸ್ಯೆಗಳಿವೆ. ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ, ವಿವಾದಿತ ಭೂಮಿಗೆ ಹಲವರು ಹಕ್ಕು ಸಾಧನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಹಾಗೂ ನ್ಯಾಯಾಲಯದ ಆದೇಶ ಪಾಲಿಸಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಅಸಮಾಧಾನ ವ್ಯಕ್ತಪಡಿಸಿದ ಪೀಠ
ಆದರೆ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ ಇದನ್ನು ವಿಚಾರಣೆಯ ಹಂತದಲ್ಲೇ ನ್ಯಾಯಾಲಯದ ಗಮನಕ್ಕೆ ತರಬೇಕಿತ್ತು. ಆದೇಶವಾದ ನಂತರವೂ ತೀರ್ಪನ್ನು ಪಾಲಿಸದಿರವುದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೇ, ಸರ್ಕಾರಿ ವಕೀಲರನ್ನು ಉದ್ದೇಶಿಸಿ, ಅಧಿಕಾರಿಗಳಿಗೆ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಹೇಳಿಕೊಡಿ ಎಂದು ಪೀಠ ಬೇಸರ ವ್ಯಕ್ತಪಡಿಸಿತು.

ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು
ಪ್ರಕರಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ತಹಶೀಲ್ದಾರ್ ಕೆ.ಆರ್. ರಕ್ಷಿತ್ ನ್ಯಾಯಾಲಯದ ಆದೇಶವನ್ನು ತಿಳಿದಿದ್ದೂ, ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರೂ ಆರೋಪಿ ಅಧಿಕಾರಿಗಳ ವಿರುದ್ಧ ಮಾರ್ಚ್ 8ರಂದು ಆರೋಪ ನಿಗದಿಪಡಿಸಲಾಗುವುದು. ಆದ್ದರಿಂದ ಇಬ್ಬರೂ ಅಧಿಕಾರಿಗಳು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ಪೀಠ ಆದೇಶಿಸಿತು. ಇದೇ ವೇಳೆ ಇತರೆ ಮೂರು ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿತು.

ಕಳೆದ 2020ರ ಜೂನ್ 19ರಂದು ಆದೇಶಿಸಿತ್ತು
ಅರ್ಜಿದಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕುರುಬರಹಳ್ಳಿಯಲ್ಲಿ ಅರ್ಜಿದಾರ ಅಶೋಕ್ ಸೇರಿದಂತೆ ಕೆಲ ವ್ಯಕ್ತಿಗಳು ಬಿ ಖರಾಬ್ ಜಮೀನು ಖಾತೆಗೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಿಲ್ಲಾಧಿಕಾರಿ ಅರ್ಜಿಗಳನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಪೀಠ ಅರ್ಜಿದಾರರಿಗೆ ಖಾತೆ ಮಾಡಿಕೊಡುವಂತೆ ಕಳೆದ 2020ರ ಜೂನ್ 19ರಂದು ಆದೇಶಿಸಿತ್ತು.

ಆದೇಶ ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ
ಆದರೆ ಕಂದಾಯ ಅಧಿಕಾರಿಗಳು ಖಾತೆ ಮಾಡಿಕೊಟ್ಟಿರಲಿಲ್ಲ. ಬದಲಿಗೆ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ ಬರೆದಿದ್ದರು. ಆದರೆ ಸರ್ಕಾರದಿಂದ ಇದಕ್ಕೆ ಉತ್ತರ ಬಂದಿರಲಿಲ್ಲ. ಜತೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ. ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಈಗ ಕಾರಣಗಳನ್ನು ನೀಡುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications