ಅರೆರೆ, ಮೈಸೂರಿನಲ್ಲಿ ಅಲ್ಲಿಂದ ಇಲ್ಲಿಗೆ ಬಂತು ಅರಳಿಮರ!
ಮೈಸೂರು, ನವೆಂಬರ್.29: ಪರಿಸರ ಉಳಿಸುವ ನಿಟ್ಟಿನಲ್ಲಿ ಎನ್ಜಿಒ ಸಂಸ್ಥೆಯೊಂದು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಅರಳಿ ಮರವನ್ನು ಯಶಸ್ವಿಯಾಗಿ ಸ್ಥಳಾಂತರಿಸಿದೆ. ಮೈಸೂರಿನ ಅಗ್ರಹಾರದ ಖಾಸಗಿಯವರಿಗೆ ಸೇರಿದ ಜಾಗದಲ್ಲಿದ್ದ ಅರಳಿಮರ ಸುಮಾರು 30 ಅಡಿಗೂ ಹೆಚ್ಚು ಎತ್ತರಕ್ಕೆ ಬೆಳೆದಿತ್ತು. ಈ ಮರವನ್ನು ಜೆಸಿಬಿ ಹಾಗೂ ಲಾರಿ ಸಹಾಯದಿಂದ ಶುಕ್ರವಾರ ಸ್ಥಳಾಂತರ ಮಾಡಲಾಗಿದೆ.
ಒಂದೆಡೆ ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಉಸಿರಾಡುವುದಕ್ಕೂ ಕಷ್ಟಪಡುತ್ತಿದ್ದಾರೆ. ಪರಿಸರ ಹಾನಿಗೊಳಿಸುತ್ತಿರುವ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಮರಗಳಿಗೆ ಕೊಡಲಿ ಪೆಟ್ಟು ಕೊಡುತ್ತಿದ್ದಾರೆ.ಇದರ ಮಧ್ಯೆ ಈ ಮರದ ಸ್ಥಳಾಂತರ ಪ್ರಕ್ರಿಯೆ ಪರಿಸರ ಪ್ರೇಮಿಗಳಲ್ಲಿ ಸಂತಸ ಮೂಡಿಸಿದೆ.
ಮಹಾನಗರ ಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್ ಸಮ್ಮುಖದಲ್ಲಿ ನಡೆದ ಅರಳಿಮರ ಸ್ಥಳಾಂತರ ಕಾರ್ಯ ಯಶಸ್ವಿಯಾಗಿದೆ. ಜೀವಂತ ಮರವನ್ನೇ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರ ಮಾಡಿದ್ದು ಸಾರ್ವಜನಿಕರ ಗಮನ ಸೆಳೆದಿದೆ.

ಅರಳಿಮರವನ್ನೇ ಬೇರು ಸಮೇತ ಕಿತ್ತು, ಕ್ರೇನ್ ಸಹಾಯದಿಂದ ಲಾರಿಗೆ ತುಂಬಿಸಲಾಯಿತು. ನಂತರ ಅದನ್ನು ಬೇರೆಡೆಗೆ ತೆಗೆದುಕೊಂಡು ಹೋಗಿ ಅಲ್ಲಿ ನೆಡಲಾಯಿತು. ಅರಳಿಮರ ಉಳಿದ ಜಾತಿಯ ಮರಗಳಿಗಿಂತ ಹೆಚ್ಚು ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಬೇರೆ ಮರಗಳು ಕೇವಲ ಸೂರ್ಯನ ಬೆಳಕಿನಲ್ಲಿ ಮಾತ್ರ ದ್ಯುತಿ ಸಂಶ್ಲೇಷಣಾ ಕ್ರಿಯೆ ನಡೆಸಿದರೆ, ಅರಳಿಮರ ಚಂದ್ರನ ಬೆಳಕಿನಲ್ಲೂ ಈ ಕ್ರಿಯೆ ನಡೆಸುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಇದು ಸಸ್ಯಗಳಲ್ಲೇ ಪ್ರಮುಖ ಪ್ರಬೇಧ. ನಗರದ ವಾಯುಮಾಲಿನ್ಯ ನಿಯಂತ್ರಣದಲ್ಲಿ ಈ ಮರಗಳ ಕೊಡುಗೆ ಮಹತ್ವದ್ದಾಗಿದೆ.

ವೃಕ್ಷರಾಜ ಎನಿಸಿಕೊಂಡಿರುವ ಈ ಮರವನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಬೆಳೆಸುತ್ತಾರೆ. ಈ ಮರ ಬಹು ಗಟ್ಟಿಯಾಗಿದ್ದು ಮಳೆಗಾಳಿಗೆ ಬೀಳುವುದಿಲ್ಲ. ಸೊಂಪಾದ ನೆರಳು ಕೊಡುತ್ತದೆ. ಸಾವಿರಾರು ಹಕ್ಕಿಗಳಿಗೆ ಆಶ್ರಯ ನೀಡುತ್ತದೆ. ಹುಲ್ಲಿಗಿಂತ ಎರಡು ಮೂರು ಪಟ್ಟು ಪ್ರೋಟಿನ್ ಹೆಚ್ಚಾಗಿರುವ ಇದರ ಎಲೆಗಳು ದನಕರುಗಳಿಗೆ, ಆನೆಗಳಿಗೆ ಉತ್ತಮ ಮೇವು. ಮ್ಯಾನ್ಮಾರ್ನ ಕೆಲ ಜಾತಿಯ ಪಕ್ಷಿಗಳು ಅರಳಿಮರದ ಎಲೆಗಳನ್ನು ತಿಂದೇ ಬದುಕುತ್ತವೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications