ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್: ಸಣ್ಣ ಅಪಘಾತವಷ್ಟೆ, ಕಂಬಕ್ಕೆ ಗುದ್ದಿದ್ದು ನಾವಲ್ಲ
ಮೈಸೂರು, ಸೆಪ್ಟೆಂಬರ್ 29: ಕಾರು ಅಪಘಾತದಿಂದ ಸೆಪ್ಟೆಂಬರ್ 23 ರಂದು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಹೊರಬಂದ ದರ್ಶನ್ ಗೆಲುವಾಗಿದ್ದರು. ತಮಗಾಗಿ ಕಾಯುತಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೊಂದು ಸಣ್ಣ ಅಪಘಾತವಷ್ಟೆ ಎಂದರು.
ಸುದ್ದಿ ಮಾಧ್ಯಮಗಳಲ್ಲಿ ಮಾಹಿತಿಯನ್ನು ತಿರುಚಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ದರ್ಶನ್ ಅವರು, ನನ್ನ ಕಾರು ಅಪಘಾತದಿಂದ ಕಂಬ ಬಿದ್ದಿಲ್ಲ, ಮೊದಲೇ ಕಂಬ ಬಿದ್ದಿತ್ತು. ನಮ್ಮ ಅಪಘಾತದಿಂದ ಕಂಬ ಬಿದ್ದಿದ್ದಲ್ಲ ಎಂದರು.

ಕಾರಿನಲ್ಲಿ ಎಷ್ಟು ಜನ ಇದ್ದರು ಎಂಬ ಸಂದೇಹಕ್ಕೆ ಉತ್ತರ ನೀಡಿದ ಅವರು, ನನ್ನ ಕಾರಿನಲ್ಲಿ ಐದು ಜನ ಮಾತ್ರವೇ ಕೂರಲು ಸಾಧ್ಯ, ಅಷ್ಟೆ ಜನರೇ ಅಂದೂ ಕಾರಿನಲ್ಲಿದ್ದರು. ಊಟ ಮಾಡಿಕೊಂಡು ವಾಪಸ್ಸು ಬರುವಾಗ ತಿರುವಿನಲ್ಲಿ ಸಂಭವಿಸಿದ ಸಣ್ಣ ಅಪಘಾತವಷ್ಟೆ ಅದು ಎಂದು ಅವರು ಸ್ಪಷ್ಟನೆ ನೀಡಿದರು.
ಕೆಲವು ಮಾಧ್ಯಮಗಳು ಸುದ್ದಿಯನ್ನು ತಿರುಚಿದ ಬಗ್ಗೆ ಬೇಸರ ವ್ಯಕ್ತಪಡಿಸಿದ ದರ್ಶನ್ ಅವರು, ಎಲ್ಲ ವಿಷಯಗಳನ್ನು ನಾನೇ ಸಮಾಧಾನವಾಗಿ ಹೇಳುತ್ತೇನೆ, ಮಾಧ್ಯಮಗಳು ಸ್ವಲ್ಪ ಆತುರವಾಗಿ ವರ್ತಿಸಿದವು ಎಂದರು. ನಮ್ಮ ಜೊತೆ ಯಾವುದೇ ಮಹಿಳೆ ಇರಲಿಲ್ಲ ಎಂದೂ ಅವರು ಹೇಳಿದರು.
ದರ್ಶನ್ ಅವರ ಬಲಗೈಗೆ ಬ್ಯಾಂಡೆಜ್ ಹಾಕಲಾಗಿದ್ದು, ಇನ್ನು ಕೆಲವು ದಿನಗಳ ವಿಶ್ರಾಂತಿ ಅವರಿಗೆ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದರು. ಕೆಲವು ದಿನಗಳ ನಂತರ ಮಾಮೂಲಿಯಾಗಿ ಜಿಮ್ ಸೇರಿದಂತೆ ಇನ್ನಿತರೆ ದೈನಂದಿನ ಕಾರ್ಯದಲ್ಲಿ ಅವರು ತೊಡಗಿಕೊಳ್ಳಬಹುದು ಎಂದು ಅವರು ಹೇಳಿದರು.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ












Click it and Unblock the Notifications