ಆಸ್ಪತ್ರೆಯಿಂದ ದರ್ಶನ್‌ ಡಿಸ್ಚಾರ್ಜ್‌: ಸಣ್ಣ ಅಪಘಾತವಷ್ಟೆ, ಕಂಬಕ್ಕೆ ಗುದ್ದಿದ್ದು ನಾವಲ್ಲ

ಮೈಸೂರು, ಸೆಪ್ಟೆಂಬರ್ 29: ಕಾರು ಅಪಘಾತದಿಂದ ಸೆಪ್ಟೆಂಬರ್ 23 ರಂದು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಆಸ್ಪತ್ರೆಯಿಂದ ಹೊರಬಂದ ದರ್ಶನ್ ಗೆಲುವಾಗಿದ್ದರು. ತಮಗಾಗಿ ಕಾಯುತಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೊಂದು ಸಣ್ಣ ಅಪಘಾತವಷ್ಟೆ ಎಂದರು.

ಸುದ್ದಿ ಮಾಧ್ಯಮಗಳಲ್ಲಿ ಮಾಹಿತಿಯನ್ನು ತಿರುಚಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ದರ್ಶನ್ ಅವರು, ನನ್ನ ಕಾರು ಅಪಘಾತದಿಂದ ಕಂಬ ಬಿದ್ದಿಲ್ಲ, ಮೊದಲೇ ಕಂಬ ಬಿದ್ದಿತ್ತು. ನಮ್ಮ ಅಪಘಾತದಿಂದ ಕಂಬ ಬಿದ್ದಿದ್ದಲ್ಲ ಎಂದರು.

Actor Darshan discharged by hospital today

ಕಾರಿನಲ್ಲಿ ಎಷ್ಟು ಜನ ಇದ್ದರು ಎಂಬ ಸಂದೇಹಕ್ಕೆ ಉತ್ತರ ನೀಡಿದ ಅವರು, ನನ್ನ ಕಾರಿನಲ್ಲಿ ಐದು ಜನ ಮಾತ್ರವೇ ಕೂರಲು ಸಾಧ್ಯ, ಅಷ್ಟೆ ಜನರೇ ಅಂದೂ ಕಾರಿನಲ್ಲಿದ್ದರು. ಊಟ ಮಾಡಿಕೊಂಡು ವಾಪಸ್ಸು ಬರುವಾಗ ತಿರುವಿನಲ್ಲಿ ಸಂಭವಿಸಿದ ಸಣ್ಣ ಅಪಘಾತವಷ್ಟೆ ಅದು ಎಂದು ಅವರು ಸ್ಪಷ್ಟನೆ ನೀಡಿದರು.

ಕೆಲವು ಮಾಧ್ಯಮಗಳು ಸುದ್ದಿಯನ್ನು ತಿರುಚಿದ ಬಗ್ಗೆ ಬೇಸರ ವ್ಯಕ್ತಪಡಿಸಿದ ದರ್ಶನ್ ಅವರು, ಎಲ್ಲ ವಿಷಯಗಳನ್ನು ನಾನೇ ಸಮಾಧಾನವಾಗಿ ಹೇಳುತ್ತೇನೆ, ಮಾಧ್ಯಮಗಳು ಸ್ವಲ್ಪ ಆತುರವಾಗಿ ವರ್ತಿಸಿದವು ಎಂದರು. ನಮ್ಮ ಜೊತೆ ಯಾವುದೇ ಮಹಿಳೆ ಇರಲಿಲ್ಲ ಎಂದೂ ಅವರು ಹೇಳಿದರು.

ದರ್ಶನ್ ಅವರ ಬಲಗೈಗೆ ಬ್ಯಾಂಡೆಜ್ ಹಾಕಲಾಗಿದ್ದು, ಇನ್ನು ಕೆಲವು ದಿನಗಳ ವಿಶ್ರಾಂತಿ ಅವರಿಗೆ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದರು. ಕೆಲವು ದಿನಗಳ ನಂತರ ಮಾಮೂಲಿಯಾಗಿ ಜಿಮ್‌ ಸೇರಿದಂತೆ ಇನ್ನಿತರೆ ದೈನಂದಿನ ಕಾರ್ಯದಲ್ಲಿ ಅವರು ತೊಡಗಿಕೊಳ್ಳಬಹುದು ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+