ಸೇವ್ ಮೈಸೂರು ಅಭಿಯಾನಕ್ಕೆ 'ಸಲಗ'ದ ಬಲ: ಹೆಲಿ ಟೂರಿಸಂ ಆರಂಭಕ್ಕೆ ವಿಜಯ್ ವಿರೋಧ
ಮೈಸೂರು, ಏಪ್ರಿಲ್ 15: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮರಗಳನ್ನು ಕಡಿದು ಹೆಲಿ ಟೂರಿಸಂ ಆರಂಭಿಸುವ ಪ್ರವಾಸೋದ್ಯಮ ಇಲಾಖೆ ನಿರ್ಧಾರದ ವಿರುದ್ಧ ನಡೆಯುತ್ತಿರುವ "ಸೇವ್ ಮೈಸೂರು' ಅಭಿಯಾನಕ್ಕೆ ʼಸಲಗʼ ಚಿತ್ರತಂಡ ಸಾಥ್ ನೀಡಿದೆ.
ಹೆಲಿ ಟೂರಿಸಂ ಸಲುವಾಗಿ ನೂರಾರು ಮರಗಳ ಹನನಕ್ಕೆ ಮುಂದಾಗಿದ್ದ ಪ್ರವಾಸೋದ್ಯಮ ಇಲಾಖೆ ನಡೆಯನ್ನು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತಂತೆ ನಟ ದುನಿಯಾ ವಿಜಯ್ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿರುವ ನಟ ವಿಜಯ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡುವ ಸಲುವಾಗಿ ಲಲಿತ್ ಮಹಲ್ ಹೋಟೆಲ್ ಮುಂಭಾಗದ ಮರಗಳನ್ನು ಕಡಿಯುವ ವಿಚಾರ ಗಮನಕ್ಕೆ ಬಂತು. ನಾವುಗಳು ಮರ ಬೆಳೆಸೋಕೆ ಆಗದಿದ್ದರೂ ಮರ ಕತ್ತರಿಸಲು ಮುಂದಾಗಬಾರದು ಎಂದಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದಾಗ ಖುಷಿ ಆಗುತ್ತದೆ. ಹೀಗಾಗಿ ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ, ಮರ ಕಡಿಯೋದನ್ನು ಬಿಟ್ಟು ಪರ್ಯಾಯವಾಗಿ ಹೆಲಿ ಟೂರಿಸಂ ಮಾಡುವ ಪ್ಲಾನ್ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಹೇಗಿರುತ್ತೋ, ಮರ ಕಡಿದು ಪರಿಸರ ಹಾಳು ಮಾಡಿ ಹೆಲಿ ಟೂರಿಸಂ ಮಾಡೋದಕ್ಕೂ ಅಷ್ಟೇ ವಿರೋಧ ಇರುತ್ತದೆ. ಸೇವ್ ಮೈಸೂರು ಕ್ಯಾಂಪೇನ್ಗೆ ನನ್ನ ಬೆಂಬಲ ಇದೆ. ಸರ್ಕಾರ ಮತ್ತೆ ಯೋಚನೆ ಮಾಡಿ ಯೋಜನೆ ಕೈಗೆತ್ತಿಕೊಳ್ಳಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿರುವ ದುನಿಯಾ ವಿಜಯ್, ಸೇವ್ ಮೈಸೂರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications