ಮೈಸೂರು ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ನಟ ಮಂಡ್ಯ ರಮೇಶ್ ರಾಯಭಾರಿ
ಮೈಸೂರು ಆಗಸ್ಟ್, 31: ಮೈಸೂರು ನಗರದ 2023ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ರಾಯಭಾರಿಯಾಗಿ ನಟನ ಶಾಲೆ ಸ್ಥಾಪಕ ಹಾಗೂ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ನಟ ಮಂಡ್ಯ ರಮೇಶ್ ಅವರನ್ನು ಮೇಯರ್ ಶಿವಕುಮಾರ್ ನೇತೃತ್ವದಲ್ಲಿ ಅಧಿಕೃತವಾಗಿ ಆಹ್ವಾನಿಸಿದರು. ಮೇಯರ್ ಶಿವಕುಮಾರ್ ಅವರ ನೇತೃತ್ವದ ನಿಯೋಗ ನಗರದ ದಟ್ಟಗಳ್ಳಿಯಲ್ಲಿರುವ ಮಂಡ್ಯ ರಮೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ರಾಯಭಾರಿಯಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ, ಅಧಿಕೃತವಾಗಿ ಆಹ್ವಾನ ನೀಡಿದರು.

ಈ ವೇಳೆ ಮಾತನಾಡಿದ ನಟ ಮಂಡ್ಯ ರಮೇಶ್, ನನ್ನನ್ನು ಆಯ್ಕೆ ಮಾಡಿರುವುದು ತುಂಬ ಸಂತೋಷವಾಗಿದೆ. ನಗರದಲ್ಲಿರುವ ನಮ್ಮ ಬಳಗದವರನ್ನು ಸಾಮಾಜಿಕ ಜಾಲತಾಣದ ಮೂಲಕ ಸ್ವಚ್ಛತೆಯಲ್ಲಿ ತೊಡಿಗಿಸಿಕೊಳ್ಳುವಂತೆ ಪ್ರೇರೇಪಿಸಲಾಗುವುದು. ಅಲ್ಲದೆ, ನಾನು ಕೂಡ ಮೈಸೂರಿನ ಜನತೆಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತೇನೆ' ಎಂದು ಖುಷಿ ಹಂಚಿಕೊಂಡರು.
ಬಳಿಕ ಮಾತನಾಡಿದ ಮೇಯರ್ ಶಿವಕುಮಾರ್, 'ಮಂಡ್ಯ ರಮೇಶ್ ಅವರು ರಂಗಭೂಮಿ ಹಿರಿಯ ಕಲಾವಿದರು. ಚಲನಚಿತ್ರ ನಟರು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಟಿವಿ ಶೋಗಳಲ್ಲಿ ಪ್ರಖ್ಯಾತಿ ಜತೆಗೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇಡೀ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿರುವವರು.

ಸಾವಿರಾರು ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರನ್ನು ತಯಾರು ಮಾಡಿ, ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ್ದಾರೆ. ಇಂತವರನ್ನು ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ರಾಯಭಾರಿಯಾಗಿ ಆಯ್ಕೆ ಮಾಡಿರುವುದು ಒಳ್ಳೆಯ ಸಂಗತಿ, ಮೈಸೂರು ಜನರು ಅತ್ಯಂತ ಖುಷಿಯಿಂದ ಒಪ್ಪಿಕೊಂಡಿದ್ದಾರೆ' ಎಂದು ಹೇಳಿದರು.
ಈ ವೇಳೆ ಉಪಮೇಯರ್ ಡಾ.ಜಿ.ರೂಪಾ, ಆಡಳಿತ ಪಕ್ಷದ ನಾಯಕ ಎಂ.ವಿ.ರಾಮ್ಪ್ರಸಾದ್, ಜೆಡಿಎಸ್ ಸದಸ್ಯೆ ಅಶ್ವಿನಿ ಅನಂತು, ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಎಂ.ಡಿ.ನಾಗರಾಜು, ಶಾಂತಕುಮಾರಿ, ರಮೇಶ್, ಸವಿತಾ ಸುರೇಶ್, ಅಧಿಕಾರಿಗಳಾದ ಸೋಮಶೇಖರ್, ಡಾ.ಹರ್ಷ, ಮೃತ್ಯುಂಜಯ ಸೇರಿದಂತೆ 9 ಮಂದಿ ಪರಿಸರ ಅಧಿಕಾರಿಗಳು ಹಾಜರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications