ನನ್ನನ್ನು ಮೋದಿ ಚಮಚಾ ಎಂದರೂ ಕೇರ್ ಮಾಡಲ್ಲ: ಪ್ರಕಾಶ್ ಬೆಳವಾಡಿ
ಮೈಸೂರು, ಮಾರ್ಚ್ 18: ಪ್ರಧಾನಿ ನರೇಂದ್ರ ಮೋದಿಯವರು ಒಳ್ಳೆಯ ಕೆಲಸ ಮಾಡಿದಾಗ ನಾನು ಅವರನ್ನು ಬೆಂಬಲಿಸಿರುವುದು ನಿಜ. ಹಾಗಾಗಿ, 'ದಿ ಕಾಶ್ಮೀರ ಫೈಲ್ಸ್' ಸಿನಿಮಾ ಬಂದ ಬಳಿಕವೂ ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ ಎಂದು ನಟ ಕಂ ನಿರ್ದೇಶಕ ಪ್ರಕಾಶ್ ಬೆಳವಾಡಿ ತಿಳಿಸಿದ್ದಾರೆ.
ಮೈಸೂರಿನ ಡಿಆರ್ಸಿಯಲ್ಲಿ ವಿವಿಧ ಕ್ಷೇತ್ರದ ಪ್ರಮುಖರ ಜತೆ ಆಯೋಜಿಸಿದ್ದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ ಅವರು, ''ಮೋದಿ ಸರಕಾರ ಆಡಳಿತದಲ್ಲಿ ಇಲ್ಲದೇ ಹೋಗಿದ್ದರೆ ಈ ಸಿನಿಮಾ ಬಿಡುಗಡೆ ಆಗುತ್ತಲೇ ಇರಲಿಲ್ಲ,'' ಎಂಬ ಬೆಳವಾಡಿ ಮಾತಿಗೆ ಮೈಸೂರಿನ ಗಣ್ಯರು ತಲೆದೂಗಿದರು, ಚಪ್ಪಾಳೆ ಹೊಡೆದರು.
''ಕೆಲವರು ಈ ಸಿನಿಮಾ ಪ್ರಚಾರಕ್ಕೆ ಬಳಕೆಯಾಗುತ್ತಿದೆ ಎಂದೆಲ್ಲಾ ಟೀಕಿಸುತ್ತಿದ್ದಾರೆ. ನನ್ನ ಪ್ರಕಾರ ಈ ಸಿನಿಮಾ ಸತ್ಯವೊಂದರ ಪ್ರಚಾರ. ಇದು ಪಕ್ಷಪಾತಿಯೂ ಹೌದು. ಆದರೆ ಇದರ ಉದ್ದೇಶ ಸತ್ಯಶೋಧನೆ. ಇದೇ ಘಟನೆ ಕುರಿತು ಬೇರೆ ಥರ ಸತ್ಯ ಇದ್ದರೆ, ನೀವು ಸಿನಿಮಾ ಮಾಡಿ,'' ಎಂದು ಟೀಕಾಕಾರರಿಗೆ ಸವಾಲು ಹಾಕಿದರು.

''90ರ ದಶಕದಲ್ಲಿ ಅತಿ ಕಡಿಮೆ ಎಂದರೂ 60 ಸಾವಿರ ಪಂಡಿತರ ಕುಟುಂಬಗಳು ದೌರ್ಜನ್ಯ ತಾಳಲಾರದೆ ಕಾಶ್ಮೀರ ತೊರೆದವು. ಒಂದೊಂದು ಮನೆಯಲ್ಲೂ ಐದಾರು ಜನ ಎಂದಿಟ್ಟುಕೊಂಡರೂ, ಎಷ್ಟೊಂದು ಜನ ತಮ್ಮದೇ ನೆಲದಲ್ಲಿ ಪರಕೀಯರಾಗಿ, ನಿರಾಶ್ರಿತರಾದರು,'' ಎಂದರು.
''1990 ಹಾಗೂ ನಂತರದ ಐದಾರು ವರ್ಷ ಕಾಶ್ಮೀರದಲ್ಲಿ ನಡೆದ ದೌರ್ಜನ್ಯಕ್ಕೆ ತುತ್ತಾದವರು ಎಷ್ಟು? ಸತ್ತವರ ಸಂಖ್ಯೆ ಎಷ್ಟು ಎಂದು ಮಾಹಿತಿ ಹಕ್ಕು ಕಾಯಿದೆಯಡಿ ಪಡೆದಿರುವ ಮಾಹಿತಿಯನ್ನು ಮುಂದೊಡ್ಡುತ್ತಿದ್ದಾರೆ. ಆದರೆ, ಈ ಎಲ್ಲ ದೌರ್ಜನ್ಯ ನಡೆದಾಗ ಅಲ್ಲಿನ ವ್ಯವಸ್ಥೆಯೇ ದುರುಳರ ಜತೆ ಶಾಮೀಲಾಗಿತ್ತು. ಲಭ್ಯ ದಾಖಲೆಗಳನ್ನು ನಾಶ ಮಾಡಲಾಗಿದೆ,'' ಎಂದು ಬೇಸರ ವ್ಯಕ್ತಪಡಿಸಿದರು.
ಆರ್ಎಸ್ಎಸ್ನ ಹಿರಿಯ ಸ್ವಯಂಸೇವಕರಾದ ಮ. ವೆಂಕಟರಾಮು, ಆರ್. ವಾಸುದೇವ ಭಟ್, ವಾಮನ್, ಮೈಸೂರು ವಿವಿ ಕುಲಸಚಿವ ಡಾ.ಆರ್.ಶಿವಪ್ಪ, ಮುಡಾ ಆಯುಕ್ತ ಡಾ.ಡಿ.ಬಿ. ನಟೇಶ್, ವಿಶ್ರಾಂತ ಕುಲಪತಿಗಳಾದ ಡಾ. ಚಿದಾನಂದಗೌಡ, ಡಾ.ಕೆ.ಎಸ್. ರಂಗಪ್ಪ, ಮಾಜಿ ಮೇಯರ್ ಸಂದೇಶ ಸ್ವಾಮಿ, ವಕೀಲರಾದ ಸಿಂಧು ಸುರೇಶ್, ಸಾಮಾಜಿಕ ಕಾರ್ಯಕರ್ತ ಡಾ. ಆನಂದ್ಕುಮಾರ್, ಡಿಆರ್ಸಿ ಎಂಡಿ ವೈಶಾಲಿ ಹನುಮಂತ್, ಲೇಖಕರಾದ ರವೀಂದ್ರ ಜೋಷಿ, ಸಿಂಡಿಕೇಟ್ ಸದಸ್ಯರಾದ ಎನ್.ಆರ್. ಮಂಜುನಾಥ್, ಆಪ್ನಾ ದೇಶ್ ಕಾರ್ಯದರ್ಶಿ ಜಿ.ಎಸ್. ಗಣೇಶ್, ಅಮೋಘ ಪ್ರಮೇಯ, ಡಾ. ಹನುಮಂತಚಾರ್ ಜೋಷಿ, ಆರ್.ಕೆ. ಮಟ್ಟು ಮತ್ತಿತರರು ಸಿನಿಮಾ ವೀಕ್ಷಣೆ ಮಾಡಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications